ದೊಡ್ಡಬಳ್ಳಾಪುರ: ತಾಲೂಕು ಬಿಜೆಪಿಯಲ್ಲಿ ಭಿನ್ನಮತ ಮತ್ತೆ ಸ್ಫೋಟಿಸಿದೆ. ಬಿಜೆಪಿ ಬೆಂಬಲಿತ ನಗರಸಭೆಯ ಐವರು ಸದಸ್ಯರು ಹಾಗೂ ಮುಖಂಡರು ಸೋಮವಾರ ಸಂಜೆ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ಧೀರಜ್ ಮುನಿರಾಜು ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ತಾಲೂಕು ಅಧ್ಯಕ್ಷ ನಾಗರಾಜು ಹಾಗೂ ನಗರಾಧ್ಯಕ್ಷರಾದ ನಗರಸಭೆ ಸದಸ್ಯ ಎಚ್.ಎಸ್. ಶಿವಶಂಕರ್ ನೇತೃತ್ವದಲ್ಲಿ ಒಟ್ಟು ಆರು ಮಂದಿ ನಗರಸಭಾ ಸದಸ್ಯರು ಹಾಗೂ ಮುಖಂಡರು ಕಾಂಗ್ರೆಸ್ ಸೇರಿದರು.
ಟಿಕೆಟ್ ಘೋಷಣೆಯಾದ ಬಳಿಕ ಎಲ್ಲ ಮುಖಂಡರು ಭಿನ್ನಮತ ಮರೆತು ಒಂದಾಗಿದ್ದರು. ರಾಜಘಟ್ಟ ಆಂಜನೇಯಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸಿದ್ದರು. ಧೀರಜ್ ಮುನಿರಾಜು ಅವರನ್ನು ಗೆಲ್ಲಿಸಿ ತರುವುದೇ ನಮ್ಮ ಮುಂದಿರುವ ಗುರಿ ಎಂದು ಹೇಳಿದ್ದರು. ಆದರೆ, ಹಠಾತ್ ಬೆಳವಣಿಗೆಯಲ್ಲಿ ಪಕ್ಷಾಂತರ ಮಾಡಿರುವುದು ಪಕ್ಷದಲ್ಲಿ ಸಂಚಲನ ಮೂಡಿಸಿದೆ.
ದೇವರಾಜನಗರ ವಾರ್ಡ್ ಸದಸ್ಯ ಎಚ್.ಎಸ್.ಶಿವಶಂಕರ್, ಕನಕದಾಸ ನಗರ ವಾರ್ಡ್ ಸದಸ್ಯ ಎಂ.ಶಿವ, ವೀರಭದ್ರಪಾಳ್ಯ ವಾರ್ಡಿನ ಆರ್. ಶಿವಣ್ಣ, ನಾಮನಿರ್ದೇಶಿತ ಸದಸ್ಯ ಶಿವು, ಸಿದ್ದೇನಾಯಕನಹಳ್ಳಿ ವಾರ್ಡ್ ಸದಸ್ಯೆ ವಿ. ಇಂದ್ರಾಣಿ ಅವರು ಕಾಂಗ್ರೆಸ್ ಸೇರ್ಪಡೆಯಾದ ನಗರಸಭಾ ಸದಸ್ಯರು.
ಉಳಿದಂತೆ ಬಿಜೆಪಿ ತಾಲೂಕು ಅಧ್ಯಕ್ಷ ನಾಗರಾಜು, ಗುಂಡಮಗೆರೆಯ ಶಿವಾನಂದರೆಡ್ಡಿ, ವಿಶ್ವಾಸ್ ಗೌಡ, ಕೆ.ಟಿ.ಕೃಷ್ಣಪ್ಪ, ತ್ಯಾಗರಾಜ ನಗರ ವಾರ್ಡ್ ಪಕ್ಷೇತರ ಸದಸ್ಯ ಸುರೇಶ್(ಸುಬ್ಬು) ಸೇರ್ಪಡೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…