ದೊಡ್ಡಬಳ್ಳಾಪುರ: ತಾಲೂಕು ಬಿಜೆಪಿಯಲ್ಲಿ ಭಿನ್ನಮತ ಮತ್ತೆ ಸ್ಫೋಟಿಸಿದೆ. ಬಿಜೆಪಿ ಬೆಂಬಲಿತ ನಗರಸಭೆಯ ಐವರು ಸದಸ್ಯರು ಹಾಗೂ ಮುಖಂಡರು ಸೋಮವಾರ ಸಂಜೆ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ಧೀರಜ್ ಮುನಿರಾಜು ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ತಾಲೂಕು ಅಧ್ಯಕ್ಷ ನಾಗರಾಜು ಹಾಗೂ ನಗರಾಧ್ಯಕ್ಷರಾದ ನಗರಸಭೆ ಸದಸ್ಯ ಎಚ್.ಎಸ್. ಶಿವಶಂಕರ್ ನೇತೃತ್ವದಲ್ಲಿ ಒಟ್ಟು ಆರು ಮಂದಿ ನಗರಸಭಾ ಸದಸ್ಯರು ಹಾಗೂ ಮುಖಂಡರು ಕಾಂಗ್ರೆಸ್ ಸೇರಿದರು.
ಟಿಕೆಟ್ ಘೋಷಣೆಯಾದ ಬಳಿಕ ಎಲ್ಲ ಮುಖಂಡರು ಭಿನ್ನಮತ ಮರೆತು ಒಂದಾಗಿದ್ದರು. ರಾಜಘಟ್ಟ ಆಂಜನೇಯಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸಿದ್ದರು. ಧೀರಜ್ ಮುನಿರಾಜು ಅವರನ್ನು ಗೆಲ್ಲಿಸಿ ತರುವುದೇ ನಮ್ಮ ಮುಂದಿರುವ ಗುರಿ ಎಂದು ಹೇಳಿದ್ದರು. ಆದರೆ, ಹಠಾತ್ ಬೆಳವಣಿಗೆಯಲ್ಲಿ ಪಕ್ಷಾಂತರ ಮಾಡಿರುವುದು ಪಕ್ಷದಲ್ಲಿ ಸಂಚಲನ ಮೂಡಿಸಿದೆ.
ದೇವರಾಜನಗರ ವಾರ್ಡ್ ಸದಸ್ಯ ಎಚ್.ಎಸ್.ಶಿವಶಂಕರ್, ಕನಕದಾಸ ನಗರ ವಾರ್ಡ್ ಸದಸ್ಯ ಎಂ.ಶಿವ, ವೀರಭದ್ರಪಾಳ್ಯ ವಾರ್ಡಿನ ಆರ್. ಶಿವಣ್ಣ, ನಾಮನಿರ್ದೇಶಿತ ಸದಸ್ಯ ಶಿವು, ಸಿದ್ದೇನಾಯಕನಹಳ್ಳಿ ವಾರ್ಡ್ ಸದಸ್ಯೆ ವಿ. ಇಂದ್ರಾಣಿ ಅವರು ಕಾಂಗ್ರೆಸ್ ಸೇರ್ಪಡೆಯಾದ ನಗರಸಭಾ ಸದಸ್ಯರು.
ಉಳಿದಂತೆ ಬಿಜೆಪಿ ತಾಲೂಕು ಅಧ್ಯಕ್ಷ ನಾಗರಾಜು, ಗುಂಡಮಗೆರೆಯ ಶಿವಾನಂದರೆಡ್ಡಿ, ವಿಶ್ವಾಸ್ ಗೌಡ, ಕೆ.ಟಿ.ಕೃಷ್ಣಪ್ಪ, ತ್ಯಾಗರಾಜ ನಗರ ವಾರ್ಡ್ ಪಕ್ಷೇತರ ಸದಸ್ಯ ಸುರೇಶ್(ಸುಬ್ಬು) ಸೇರ್ಪಡೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…