ಬಿಜೆಪಿ‌ಗೆ ಬಿಗ್ ಶಾಕ್..!: ಪಕ್ಷ ತೊರೆದ ನಗರ ಹಾಗೂ ತಾಲೂಕು ಬಿಜೆಪಿ ಅಧ್ಯಕ್ಷ: ಓರ್ವ ಪಕ್ಷೇತರ, ಆರು ಮಂದಿ‌ ನಗರಸಭಾ ಸದಸ್ಯರು ಕಾಂಗ್ರೆಸ್ ಗೆ ಜಂಪ್

ದೊಡ್ಡಬಳ್ಳಾಪುರ: ತಾಲೂಕು ಬಿಜೆಪಿಯಲ್ಲಿ ಭಿನ್ನಮತ ಮತ್ತೆ ಸ್ಫೋಟಿಸಿದೆ. ಬಿಜೆಪಿ ಬೆಂಬಲಿತ ನಗರಸಭೆಯ ಐವರು ಸದಸ್ಯರು ಹಾಗೂ ಮುಖಂಡರು ಸೋಮವಾರ ಸಂಜೆ ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.

ಧೀರಜ್ ಮುನಿರಾಜು ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಬಿಜೆಪಿ ತಾಲೂಕು ಅಧ್ಯಕ್ಷ ನಾಗರಾಜು ಹಾಗೂ ನಗರಾಧ್ಯಕ್ಷರಾದ ನಗರಸಭೆ ಸದಸ್ಯ ಎಚ್.ಎಸ್. ಶಿವಶಂಕರ್ ನೇತೃತ್ವದಲ್ಲಿ ಒಟ್ಟು ಆರು ಮಂದಿ ನಗರಸಭಾ ಸದಸ್ಯರು ಹಾಗೂ ಮುಖಂಡರು ಕಾಂಗ್ರೆಸ್ ಸೇರಿದರು.

ಟಿಕೆಟ್ ಘೋಷಣೆಯಾದ ಬಳಿಕ ಎಲ್ಲ ಮುಖಂಡರು ಭಿನ್ನಮತ ಮರೆತು ಒಂದಾಗಿದ್ದರು. ರಾಜಘಟ್ಟ ಆಂಜನೇಯಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರ ಆರಂಭಿಸಿದ್ದರು. ಧೀರಜ್ ಮುನಿರಾಜು ಅವರನ್ನು ಗೆಲ್ಲಿಸಿ ತರುವುದೇ ನಮ್ಮ ಮುಂದಿರುವ ಗುರಿ ಎಂದು ಹೇಳಿದ್ದರು. ಆದರೆ, ಹಠಾತ್ ಬೆಳವಣಿಗೆಯಲ್ಲಿ ಪಕ್ಷಾಂತರ ಮಾಡಿರುವುದು ಪಕ್ಷದಲ್ಲಿ ಸಂಚಲನ ಮೂಡಿಸಿದೆ.

ದೇವರಾಜನಗರ ವಾರ್ಡ್ ಸದಸ್ಯ ಎಚ್.ಎಸ್.ಶಿವಶಂಕರ್, ಕನಕದಾಸ ನಗರ ವಾರ್ಡ್ ಸದಸ್ಯ ಎಂ.ಶಿವ, ವೀರಭದ್ರಪಾಳ್ಯ ವಾರ್ಡಿನ ಆರ್. ಶಿವಣ್ಣ, ನಾಮನಿರ್ದೇಶಿತ ಸದಸ್ಯ ಶಿವು, ಸಿದ್ದೇನಾಯಕನಹಳ್ಳಿ ವಾರ್ಡ್ ಸದಸ್ಯೆ ವಿ. ಇಂದ್ರಾಣಿ ಅವರು ಕಾಂಗ್ರೆಸ್ ಸೇರ್ಪಡೆಯಾದ ನಗರಸಭಾ ಸದಸ್ಯರು.

ಉಳಿದಂತೆ ಬಿಜೆಪಿ ತಾಲೂಕು ಅಧ್ಯಕ್ಷ ನಾಗರಾಜು, ಗುಂಡಮಗೆರೆಯ ಶಿವಾನಂದರೆಡ್ಡಿ, ವಿಶ್ವಾಸ್ ಗೌಡ, ಕೆ.ಟಿ.ಕೃಷ್ಣಪ್ಪ, ತ್ಯಾಗರಾಜ ನಗರ ವಾರ್ಡ್ ಪಕ್ಷೇತರ ಸದಸ್ಯ ಸುರೇಶ್(ಸುಬ್ಬು) ಸೇರ್ಪಡೆ.

Ramesh Babu

Journalist

Recent Posts

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

1 hour ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

12 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

21 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

1 day ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

2 days ago