ಕೋಲಾರ: ಬಿಜೆಪಿ ಪಕ್ಷದಂತೆ ಸುಳ್ಳು ಪಳ್ಳು ಹೇಳಿಕೊಂಡು ಗಿಮಿಕ್ ಮಾಡೋ ಪಕ್ಷ ಕಾಂಗ್ರೆಸ್ ಅಲ್ಲ ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ ಮಂಡಳಿ ಅಧ್ಯಕ್ಷ ಮತ್ತು ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ತಿಳಿಸಿದರು.
ತಾಲೂಕಿನ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಹುತ್ತೂರು ಗ್ರಾಮದಲ್ಲಿ ಸೋಮವಾರ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಹೋಬಳಿ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೇಂದ್ರದಲ್ಲಿ ಬಿಜೆಪಿ ಪಕ್ಷವು ಹತ್ತು ವರ್ಷಗಳ ಹಿಂದೆ ಘೋಷಣೆ ಮಾಡಿದ ಒಂದಾದರೂ ಗ್ಯಾರಂಟಿ ಜಾರಿ ಮಾಡಿದ್ದಾರಾ ನಾವು ಅಧಿಕಾರಕ್ಕೆ ಬಂದ ಹತ್ತು ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿ ಜನರ ವಿಶ್ವಾಸ ಗಳಿಸಿದ್ದೇವೆ ಇದಕ್ಕೆ ಕಾರಣ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಎಂದರು.
ಕಾಂಗ್ರೆಸ್ ಪಕ್ಷದ ಹತ್ತು ತಿಂಗಳ ಸಾಧನೆಗಳ ಜೊತೆಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿರುವವರನ್ನು ಗುರುತಿಸಿ ಯೋಜನೆಯ ಫಲಾನುಭವಿಗಳಾಗಿ ಮಾಡಬೇಕು ಇದಕ್ಕೆ ಪಂಚಾಯತಿ ಮಟ್ಟದಿಂದ ಗ್ರಾಮಗಳಲ್ಲಿ ಮಾಹಿತಿ ಪಡೆದು ಕೂಡಲೇ ನೋಂದಣಿ ಮಾಡಿಸಬೇಕು ಕಾಂಗ್ರೆಸ್ ಅಭಿವೃದ್ಧಿಯ ಜೊತೆಗೆ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಸರಕಾರವಾಗಿದೆ ಎಂದರು.
ಕೇಂದ್ರ ಸರ್ಕಾರದಿಂದ ಬಡವರು ಉದ್ದಾರವಾಗಿಲ್ಲ ಬರಿ ಶ್ರೀಮಂತರು ಅಷ್ಟೇ ಅಭಿವೃದ್ಧಿಯಾಗಿದ್ದಾರೆ ಬಿಜೆಪಿ ಆಡಳಿತದಲ್ಲಿ ಅಭಿವೃದ್ಧಿಗೆ ಅಧ್ಯತೆಯಿಲ್ಲದೇ ಕೇವಲ ಶ್ರೀರಾಮ ಹೆಸರಿನಲ್ಲಿ ರಾಜಕಾರಣ ಮಾಡಲು ಹೊರಟಿದ್ದಾರೆ ಬಿಜೆಪಿಗೆ ಶ್ರೀರಾಮ ಮಾತ್ರ ಬೇಕು ಕಾಂಗ್ರೆಸ್ ಪಕ್ಷಕ್ಕೆ ಜಾತಿ ಧರ್ಮವಿಲ್ಲದೇ ಎಲ್ಲಾ ದೇವತೆಗಳು ಬೇಕಾಗಿದೆ ಜಿಲ್ಲೆಯಲ್ಲಿ ಒಬ್ಬ ಐದು ವರ್ಷಗಳ ಕಾಲ ಜನರನ್ನು ಯಾಮಾರಿಸಿ ಎಂಪಿಯಾಗಿ ಯಾವುದೇ ಅಭಿವೃದ್ಧಿ ಮಾಡಿಲ್ಲ ಬರೀ ಜಾತಿ ಧರ್ಮಗಳ ಮಧ್ಯೆ ಬೆಂಕಿ ಹಂಚಿದ್ದೇ ಅಯಿತು ಮುಂದೆ ಅಂತಹ ತಪ್ಪು ಮಾಡಿಕೊಳ್ಳದೇ ಯಾರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದರೂ ನಮ್ಮ ಪಕ್ಷದ ಸಂಸದ ಆಯ್ಕೆಯಾಗುವಂತೆ ಮಾಡಿಕೊಳ್ಳೋಣ ಎಂದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ಹಾಗೂ ವಿವಿಧ ಇಲಾಖೆಗಳಲ್ಲಿ ಆಯ್ಕೆಯಾದವರಿಗೆ ಯಂತ್ರೋಪಕರಣಗಳನ್ನು ವಿತರಿಸಿದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…