ಕೋಲಾರ: ಬಿಜೆಪಿ ಪಕ್ಷದಂತೆ ಸುಳ್ಳು ಪಳ್ಳು ಹೇಳಿಕೊಂಡು ಗಿಮಿಕ್ ಮಾಡೋ ಪಕ್ಷ ಕಾಂಗ್ರೆಸ್ ಅಲ್ಲ ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ ಮಂಡಳಿ ಅಧ್ಯಕ್ಷ ಮತ್ತು ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ತಿಳಿಸಿದರು.
ತಾಲೂಕಿನ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಹುತ್ತೂರು ಗ್ರಾಮದಲ್ಲಿ ಸೋಮವಾರ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಹೋಬಳಿ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೇಂದ್ರದಲ್ಲಿ ಬಿಜೆಪಿ ಪಕ್ಷವು ಹತ್ತು ವರ್ಷಗಳ ಹಿಂದೆ ಘೋಷಣೆ ಮಾಡಿದ ಒಂದಾದರೂ ಗ್ಯಾರಂಟಿ ಜಾರಿ ಮಾಡಿದ್ದಾರಾ ನಾವು ಅಧಿಕಾರಕ್ಕೆ ಬಂದ ಹತ್ತು ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿ ಜನರ ವಿಶ್ವಾಸ ಗಳಿಸಿದ್ದೇವೆ ಇದಕ್ಕೆ ಕಾರಣ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಎಂದರು.
ಕಾಂಗ್ರೆಸ್ ಪಕ್ಷದ ಹತ್ತು ತಿಂಗಳ ಸಾಧನೆಗಳ ಜೊತೆಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿರುವವರನ್ನು ಗುರುತಿಸಿ ಯೋಜನೆಯ ಫಲಾನುಭವಿಗಳಾಗಿ ಮಾಡಬೇಕು ಇದಕ್ಕೆ ಪಂಚಾಯತಿ ಮಟ್ಟದಿಂದ ಗ್ರಾಮಗಳಲ್ಲಿ ಮಾಹಿತಿ ಪಡೆದು ಕೂಡಲೇ ನೋಂದಣಿ ಮಾಡಿಸಬೇಕು ಕಾಂಗ್ರೆಸ್ ಅಭಿವೃದ್ಧಿಯ ಜೊತೆಗೆ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಸರಕಾರವಾಗಿದೆ ಎಂದರು.
ಕೇಂದ್ರ ಸರ್ಕಾರದಿಂದ ಬಡವರು ಉದ್ದಾರವಾಗಿಲ್ಲ ಬರಿ ಶ್ರೀಮಂತರು ಅಷ್ಟೇ ಅಭಿವೃದ್ಧಿಯಾಗಿದ್ದಾರೆ ಬಿಜೆಪಿ ಆಡಳಿತದಲ್ಲಿ ಅಭಿವೃದ್ಧಿಗೆ ಅಧ್ಯತೆಯಿಲ್ಲದೇ ಕೇವಲ ಶ್ರೀರಾಮ ಹೆಸರಿನಲ್ಲಿ ರಾಜಕಾರಣ ಮಾಡಲು ಹೊರಟಿದ್ದಾರೆ ಬಿಜೆಪಿಗೆ ಶ್ರೀರಾಮ ಮಾತ್ರ ಬೇಕು ಕಾಂಗ್ರೆಸ್ ಪಕ್ಷಕ್ಕೆ ಜಾತಿ ಧರ್ಮವಿಲ್ಲದೇ ಎಲ್ಲಾ ದೇವತೆಗಳು ಬೇಕಾಗಿದೆ ಜಿಲ್ಲೆಯಲ್ಲಿ ಒಬ್ಬ ಐದು ವರ್ಷಗಳ ಕಾಲ ಜನರನ್ನು ಯಾಮಾರಿಸಿ ಎಂಪಿಯಾಗಿ ಯಾವುದೇ ಅಭಿವೃದ್ಧಿ ಮಾಡಿಲ್ಲ ಬರೀ ಜಾತಿ ಧರ್ಮಗಳ ಮಧ್ಯೆ ಬೆಂಕಿ ಹಂಚಿದ್ದೇ ಅಯಿತು ಮುಂದೆ ಅಂತಹ ತಪ್ಪು ಮಾಡಿಕೊಳ್ಳದೇ ಯಾರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದರೂ ನಮ್ಮ ಪಕ್ಷದ ಸಂಸದ ಆಯ್ಕೆಯಾಗುವಂತೆ ಮಾಡಿಕೊಳ್ಳೋಣ ಎಂದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ಹಾಗೂ ವಿವಿಧ ಇಲಾಖೆಗಳಲ್ಲಿ ಆಯ್ಕೆಯಾದವರಿಗೆ ಯಂತ್ರೋಪಕರಣಗಳನ್ನು ವಿತರಿಸಿದರು.
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…