ಕೋಲಾರ: ಬಿಜೆಪಿ ಪಕ್ಷದಂತೆ ಸುಳ್ಳು ಪಳ್ಳು ಹೇಳಿಕೊಂಡು ಗಿಮಿಕ್ ಮಾಡೋ ಪಕ್ಷ ಕಾಂಗ್ರೆಸ್ ಅಲ್ಲ ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನುಡಿದಂತೆ ನಡೆದಿದ್ದೇವೆ ಎಂದು ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮ ಮಂಡಳಿ ಅಧ್ಯಕ್ಷ ಮತ್ತು ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ತಿಳಿಸಿದರು.
ತಾಲೂಕಿನ ಬಂಗಾರಪೇಟೆ ವಿಧಾನಸಭಾ ಕ್ಷೇತ್ರದ ಹುತ್ತೂರು ಗ್ರಾಮದಲ್ಲಿ ಸೋಮವಾರ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಹೋಬಳಿ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು ಕೇಂದ್ರದಲ್ಲಿ ಬಿಜೆಪಿ ಪಕ್ಷವು ಹತ್ತು ವರ್ಷಗಳ ಹಿಂದೆ ಘೋಷಣೆ ಮಾಡಿದ ಒಂದಾದರೂ ಗ್ಯಾರಂಟಿ ಜಾರಿ ಮಾಡಿದ್ದಾರಾ ನಾವು ಅಧಿಕಾರಕ್ಕೆ ಬಂದ ಹತ್ತು ತಿಂಗಳಲ್ಲಿ ಐದು ಗ್ಯಾರಂಟಿ ಜಾರಿ ಮಾಡಿ ಜನರ ವಿಶ್ವಾಸ ಗಳಿಸಿದ್ದೇವೆ ಇದಕ್ಕೆ ಕಾರಣ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಎಂದರು.
ಕಾಂಗ್ರೆಸ್ ಪಕ್ಷದ ಹತ್ತು ತಿಂಗಳ ಸಾಧನೆಗಳ ಜೊತೆಗೆ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಬೇಕು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗಿರುವವರನ್ನು ಗುರುತಿಸಿ ಯೋಜನೆಯ ಫಲಾನುಭವಿಗಳಾಗಿ ಮಾಡಬೇಕು ಇದಕ್ಕೆ ಪಂಚಾಯತಿ ಮಟ್ಟದಿಂದ ಗ್ರಾಮಗಳಲ್ಲಿ ಮಾಹಿತಿ ಪಡೆದು ಕೂಡಲೇ ನೋಂದಣಿ ಮಾಡಿಸಬೇಕು ಕಾಂಗ್ರೆಸ್ ಅಭಿವೃದ್ಧಿಯ ಜೊತೆಗೆ ಜನಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುವ ಸರಕಾರವಾಗಿದೆ ಎಂದರು.
ಕೇಂದ್ರ ಸರ್ಕಾರದಿಂದ ಬಡವರು ಉದ್ದಾರವಾಗಿಲ್ಲ ಬರಿ ಶ್ರೀಮಂತರು ಅಷ್ಟೇ ಅಭಿವೃದ್ಧಿಯಾಗಿದ್ದಾರೆ ಬಿಜೆಪಿ ಆಡಳಿತದಲ್ಲಿ ಅಭಿವೃದ್ಧಿಗೆ ಅಧ್ಯತೆಯಿಲ್ಲದೇ ಕೇವಲ ಶ್ರೀರಾಮ ಹೆಸರಿನಲ್ಲಿ ರಾಜಕಾರಣ ಮಾಡಲು ಹೊರಟಿದ್ದಾರೆ ಬಿಜೆಪಿಗೆ ಶ್ರೀರಾಮ ಮಾತ್ರ ಬೇಕು ಕಾಂಗ್ರೆಸ್ ಪಕ್ಷಕ್ಕೆ ಜಾತಿ ಧರ್ಮವಿಲ್ಲದೇ ಎಲ್ಲಾ ದೇವತೆಗಳು ಬೇಕಾಗಿದೆ ಜಿಲ್ಲೆಯಲ್ಲಿ ಒಬ್ಬ ಐದು ವರ್ಷಗಳ ಕಾಲ ಜನರನ್ನು ಯಾಮಾರಿಸಿ ಎಂಪಿಯಾಗಿ ಯಾವುದೇ ಅಭಿವೃದ್ಧಿ ಮಾಡಿಲ್ಲ ಬರೀ ಜಾತಿ ಧರ್ಮಗಳ ಮಧ್ಯೆ ಬೆಂಕಿ ಹಂಚಿದ್ದೇ ಅಯಿತು ಮುಂದೆ ಅಂತಹ ತಪ್ಪು ಮಾಡಿಕೊಳ್ಳದೇ ಯಾರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿದರೂ ನಮ್ಮ ಪಕ್ಷದ ಸಂಸದ ಆಯ್ಕೆಯಾಗುವಂತೆ ಮಾಡಿಕೊಳ್ಳೋಣ ಎಂದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ಹಾಗೂ ವಿವಿಧ ಇಲಾಖೆಗಳಲ್ಲಿ ಆಯ್ಕೆಯಾದವರಿಗೆ ಯಂತ್ರೋಪಕರಣಗಳನ್ನು ವಿತರಿಸಿದರು.
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…