ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ. ಎರಡು ವರ್ಷದಲ್ಲಿ ಗ್ಯಾರೆಂಟಿ ಯೋಜನೆಗಳಿಗೆ 80 ಸಾವಿರ ಕೋಟಿ ಖರ್ಚು ಮಾಡಿದ್ದೇವೆ. ನಮ್ಮ ಮೇಲೆ ಬಿಜೆಪಿ ಟೀಕೆ ಮಾಡುತ್ತಿವೆ. ಏನೆಂದರೆ ಗ್ಯಾರೆಂಟಿ ಯೋಜನೆಗಳಿಗೆ ಹಣ ವಿನಿಯೋಗಿಸಿ ಸರ್ಕಾರ ಪಾಪರ್ ಆಗಿದೆ ಎಂದು ಟೀಕೆ ಮಾಡುತ್ತಿದೆ. ಅವರ ಆರೋಪ ಸತ್ಯಕ್ಕೆ ದೂರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಬಿಜೆಪಿ ಜನರ ಮುಂದೆ ಸುಳ್ಳು ಹೇಳಿಕೊಂಡು ಇದೆ. ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿ…ಮಾಡಿ…ಮಾಡಿ ಜನರ ಜೀವನಕ್ಕೆ ಕುತ್ತು ತರುತ್ತಿದೆ, ಬೆಲೆ ಏರಿಕೆಗೆ ನೇರ ಹೊಣೆ ಪ್ರಧಾನಿ ಮೋದಿಯೇ ಕಾರಣ ಎಂದು ಬಿಜೆಪಿ ವಿರುದ್ಧ ಗುಡುಗಿದರು.
ಬಿಜೆಪಿಯವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದರು. ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದವರಲ್ಲ.
ಯುದ್ಧದ ಕುರಿತು ನಾನು ನೀಡಿದ ಹೇಳಿಕೆಯ ಬಗ್ಗೆ ಪರ – ವಿರೋಧದ ಚರ್ಚೆಗಳು ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಯುದ್ಧ ಎನ್ನುವುದು ಯಾವುದೇ ದೇಶದ ಅಂತಿಮ ಆಯ್ಕೆಯೇ ಹೊರತು, ಯುದ್ಧವೇ ಮೊದಲ ಇಲ್ಲವೇ ಏಕೈಕ ಆಯ್ಕೆಯಲ್ಲ.
ಶತ್ರುವನ್ನು ಮಣಿಸುವ ಉಳಿದೆಲ್ಲ ಆಯ್ಕೆಗಳು ವಿಫಲವಾದಾಗ ಮಾತ್ರ ಯುದ್ಧಕ್ಕೆ ಹೊರಡಬೇಕು.
ಪಹಲ್ಗಾಮ್ ನಲ್ಲಿ ನಡೆದ ಪಾಕ್ ಪ್ರೇರಿತ ಉಗ್ರರ ದಾಳಿಗೆ ನಮ್ಮ ಗೂಢಚರ್ಯೆ ಮತ್ತು ಭದ್ರತಾ ವ್ಯವಸ್ಥೆಯ ವೈಫಲ್ಯ ಕಾರಣ ಎನ್ನುವುದು ದೇಶದ ಜನತೆಗೆ ಮತ್ತು ಕೇಂದ್ರ ಸರ್ಕಾರಕ್ಕೂ ಈಗ ಮನವರಿಕೆಯಾಗಿದೆ. ಮೊದಲು ಈ ಲೋಪವನ್ನು ಸರಿಪಡಿಸಿಕೊಂಡು ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರಿಕೆ ವಹಿಸುವ ಹೊಣೆಗಾರಿಕೆ ಕೇಂದ್ರ ಸರ್ಕಾರದ ಮೇಲಿದೆ.
ಸಿಂಧೂ ನದಿ ಒಪ್ಪಂದದ ರದ್ದತಿಯೂ ಸೇರಿದಂತೆ ಕೇಂದ್ರ ಸರ್ಕಾರ ಕೆಲವು ರಾಜತಾಂತ್ರಿಕ ಕ್ರಮಗಳನ್ನು ಕೈಗೊಂಡಿದೆ. ಇದನ್ನು ನಾವು ಸ್ವಾಗತಿಸುತ್ತೇವೆ. ಕೇಂದ್ರ ಸರ್ಕಾರ ಮುಂದೆ ಇದಕ್ಕಿಂತಲೂ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎನ್ನುವ ಭರವಸೆ ನಮಗಿದೆ. ಅವುಗಳನ್ನೆಲ್ಲ ಬಹಿರಂಗ ಪಡಿಸುವ ಅಗತ್ಯವಿಲ್ಲ. ಅಂತಹ ಕ್ರಮಗಳಿಗೆ ನಮ್ಮ ಸಂಪೂರ್ಣ ಸಹಕಾರ ಇದೆ.
ಇದೇ ವೇಳೆ ಕೆಲವು ಕಿಡಿಗೇಡಿಗಳು ಯುದ್ಧೋನ್ಮಾದವನ್ನು ಸೃಷ್ಟಿಸಿ ದೇಶದೊಳಗಿನ ಸೌಹಾರ್ದತೆಯನ್ನು ಕಲಕುವ ಪ್ರಯತ್ನ ಮಾಡುತ್ತಿದ್ದು ಇಂತಹವರ ವಿರುದ್ಧವೂ ಕೇಂದ್ರ ಸರ್ಕಾರ ಕಠಿಣ ಕ್ರಮಕೈಗೊಳ್ಳಬೇಕು. ಇಂದು ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಬಾಹ್ಯ ಶತ್ರುವನ್ನು ಎದುರಿಸಬೇಕಾದರೆ ಆಂತರಿಕವಾಗಿ ನಾವೆಲ್ಲರೂ ಒಗ್ಗಟ್ಟಿನಿಂದ ಇರಬೇಕಾಗುತ್ತದೆ.
ಪಾಕಿಸ್ತಾನ ಇಂದು ಆರ್ಥಿಕವಾಗಿ ದಿವಾಳಿಯಾಗಿರುವ ರೋಗಗ್ರಸ್ತ ದೇಶವಾಗಿದೆ. ಅವರು ಕಳೆದುಕೊಳ್ಳುವುದೇನೂ ಇಲ್ಲ, ಈ ಕಾರಣದಿಂದಾಗಿಯೇ ಜಗತ್ತಿನ ಬಲಾಢ್ಯ ರಾಷ್ಟ್ರವಾಗಿ ಬೆಳೆಯುತ್ತಿರುವ ಭಾರತ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾಗಿದೆ. ಈ ಸಂದರ್ಭದಲ್ಲಿ ವಿಶ್ವದ ಎಲ್ಲ ರಾಷ್ಟ್ರಗಳು ಪಾಕ್ ಪ್ರೇರಿತ ಭಯೋತ್ಪಾದನೆಯನ್ನು ಖಂಡಿಸಿ ಭಾರತದ ಪರವಾಗಿ ನಿಂತಿವೆ. ಈ ಬೆಳವಣಿಗೆಯನ್ನು ಭಾರತ ಸದುಪಯೋಗಪಡಿಸಿಕೊಂಡು ಪಾಕಿಸ್ತಾನ ಮುಂದೆಂದೂ ಇಂತಹ ದುಸ್ಸಾಹಸಕ್ಕೆ ಕೈಹಾಕದಂತೆ ತಕ್ಕ ಪಾಠ ಕಲಿಸಬೇಕಾಗಿದೆ.
ಒಂದು ಲಕ್ಷದ 33 ಸಾವಿರ ಕೋಟಿ ಅನುದಾನವನ್ನು ಅಭಿವೃದ್ಧಿ ಕೆಲಸಗಳಿಗೆ ಸರ್ಕಾರ ಇಟ್ಟಿದೆ. ನಮ್ಮ ಸರ್ಕಾರ ಅಭಿವೃದ್ಧಿ ಮಾಡುವಲ್ಲಿ ಹಿಂದೂ ಮುಂದು ನೋಡುವುದಿಲ್ಲ ಎಂದರು.
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…