Categories: ಕೋಲಾರ

ಬಿಜೆಪಿಯಿಂದ ಜಿಲ್ಲೆಗೆ ಹತ್ತು ವರ್ಷದ ಸಾಧನೆಯನ್ನು ಬಹಿರಂಗ ಪಡಿಸಲಿ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರದಿಂದ ಜಿಲ್ಲೆಗೆ ಹತ್ತು ತಿಂಗಳ ಅಭಿವೃದ್ಧಿಗೆ ಸಂಬಂಧಸಿದ ದಾಖಲೆಗಳನ್ನು ನೀಡಲು ನಾವು ಸಿದ್ದರಿದ್ದೇವೆ ಬಿಜೆಪಿಯವರಿಗೆ ಧೈರ್ಯ ಇದ್ದರೆ ಹತ್ತು ವರ್ಷದಿಂದ ಜಿಲ್ಲೆ ಅಭಿವೃದ್ಧಿಗೆ ಅವರ ಕೊಡುಗೆಯನ್ನು ಬಹಿರಂಗ ಪಡಿಸಲಿ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಸವಾಲು ಹಾಕಿದರು.

ತಾಲೂಕಿನ ವೇಮಗಲ್ ಹೋಬಳಿಯ ಸೀತಿಹೊಸೂರು ಮತ್ತು ಕುರಗಲ್ ಗ್ರಾಮದಲ್ಲಿ ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ಹತ್ತು ವರ್ಷದಿಂದ ಬರೀ ಕ್ಲಾರ್ಕ್ ಟವರ್ ನಲ್ಲಿನ ಬಣ್ಣ ಬದಲಾಯಿಸಿದ್ದು ಬಿಟ್ಟರೆ ಸಾಮಾನ್ಯ ಜನಕ್ಕೆ ಅನುಕೂಲವಾಗುವ ಒಂದು ಒಂದು ಯೋಜನೆಯನ್ನು ಜಾರಿ ಮಾಡಲಿಲ್ಲ ಆದರೆ ಕೋಲಾರ ವಿಧಾನಸಭಾ ಕ್ಷೇತ್ರ ರಸ್ತೆಗಳ ಅಭಿವೃದ್ಧಿಗೆ ಕನಿಷ್ಠ 500 ಕೋಟಿ ತಂದಿದ್ದೇವೆ ರಿಂಗ್ ರೋಡ್ ನಿರ್ಮಾಣಕ್ಕೆ 360 ಕೋಟಿ ಜೊತೆಗೆ ಎಪಿಎಂಸಿ ಜಾಗ ಗುರುತಿಸಿದ್ದೇವೆ ಮೆಡಿಕಲ್ ಕಾಲೇಜು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇವುಗಳ ಬಗ್ಗೆ ದಾಖಲೆಗಳು ಬೇಕಿದ್ದರೆ ಕೊಡತ್ತೇವೆ ಬಿಜೆಪಿಯವರ ಕೊಡುಗೆ ಇದ್ದರೆ ಜನರ ಮುಂದೆ ಇಡೀ ಎಂದು ತಿಳಿಸಿದರು.

ಬಿಜೆಪಿ ಪಕ್ಷವು ಹಿಂದೂ ಮುಸ್ಲಿಂ ಸಮುದಾಯಗಳನ್ನು ಎತ್ತಿಕಟ್ಟಿ ಜೈ ಶ್ರೀರಾಮ್ ಅಂತ ದೇಶದ ಜನರನ್ನು ಯಾಮಾರಿಸಿದ್ದಾರೆ ಇತ್ತಿಚಿಗೆ ಕೂಡ ರಾಮಮಂದಿರ ಹೆಸರಿನಲ್ಲಿ ರಾಜಕಾರಣ ಮಾಡಲು ಹೊರಟಿದ್ದಾರೆ ಶ್ರೀರಾಮ ಕೇವಲ ಬಿಜೆಪಿ ಪಕ್ಷಕ್ಕೆ ಮಾತ್ರ ಸಿಮೀತವಲ್ಲ ನಾವು ಕೂಡ ಹಿಂದೂಗಳೇ ನಮ್ಮಲ್ಲಿ ಕೂಡ ದೇವ ಭಕ್ತಿ ಇದೆ ತೋರಿಕೆಗಾಗಿ ಮಾತ್ರ ಭಕ್ತಿ ಭಾವನೆ ತೋರಿಸಬಾರದು ಸಮಾಜದ ಎಲ್ಲಾ ಜಾತಿ ಧರ್ಮಗಳನ್ನು ಪ್ರೀತಿಯಿಂದ ನೋಡುವುದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ದೇಶದಲ್ಲಿ ಶಾಂತಿ, ನೆಮ್ಮದಿಗಾಗಿ ಕೈ ಗುರುತಿಗೆ ವೋಟ್ ಹಾಕುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳೊಂದಿಗೆ ಕೇಂದ್ರದಲ್ಲಿ ಕೂಡ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಮಹಿಳೆಯರ ಅಭಿವೃದ್ಧಿಗೆ ಮಹಾಲಕ್ಷ್ಮಿ ಯೋಜನೆಯಿಂದ ವರ್ಷಕ್ಕೆ ಒಂದು ಲಕ್ಷ, ನಗೇಗಾದಲ್ಲಿ ದಿನಕ್ಕೆ 400 ರೂ ಕೂಲಿ, ರೈತರ ಸಾಲ ಮನ್ನಾ , ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಜಾತಿ ಗಣತಿ ಮಾಡಿಸಿ ಸರ್ಕಾರದ ಯೋಜನೆಗಳನ್ನು ಎಲ್ಲಾ ಸಮುದಾಯಗಳ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವುದು ನಮ್ಮ ಗುರಿಯಾಗಿದೆ ಎಂದರು.

ಇತ್ತೀಚಿಗೆ ಕೋಲಾರದ ಮಾಜಿ ಸಚಿವರೊಬ್ಬರೂ ಸಭೆಯೊಂದರಲ್ಲಿ ಮಾತನಾಡಿ, ಕೋಲಾರ ಲೋಕಸಭಾ ಕ್ಷೇತ್ರವನ್ನು ಮೀಸಲು ಕ್ಷೇತ್ರದಿಂದ ತೆಗೆದುಹಾಕಿ ಮುಂದೆ ಸಾಮಾನ್ಯ ಕ್ಷೇತ್ರವಾಗಿ ಮಾಡಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ ಅವರ ಆಟಪಾಠಗಳು ನಾಟಕಗಳನ್ನು ಕ್ಷೇತ್ರದ ಜನ ನೋಡಿದ್ದಾರೆ ಜನ ಯಾಮಾರಿ ಎರಡು ಬಾರಿ ಅವರಿಗೆ ಅವಕಾಶ ನೀಡಿದ್ದಾರೆ ಮುಂದೆ ಇವರ ಆಟ ನಡೆಯಲ್ಲ ಅಂತ ಗೊತ್ತಾಗಿದೆ ಅದಕ್ಕೆ ಸಿಎಂಆರ್ ಶ್ರೀನಾಥ್ ಅವರನ್ನು ಜೊತೆಯಲ್ಲಿ ಇಟ್ಟುಕೊಂಡು ರಾಜಕೀಯವಾಗಿ ಮುಗಿಸಲು ಹೊರಟಿದ್ದಾರೆ ಶ್ರೀನಾಥ್ ಅವರಿಗೆ ಬುದ್ದಿ ಇದ್ದು ಈಗಲೇ ಎಚ್ಚತ್ತುಕೊಂಡರೆ ಮುಂದೆ ಒಳ್ಳೆಯದು ಎಂದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ನಾಗನಾಳ ಸೋಮಣ್ಣ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ದಯಾನಂದ್, ಉದಯಶಂಕರ್, ಉರಟ ಅಗ್ರಹಾರ ಚೌಡರೆಡ್ಡಿ, ಮೈಲಾಂಡಹಳ್ಳಿ ಮುರಳಿ, ಮಲೇಷಿಯಾ ರಾಜಕುಮಾರ್, ತಿಪ್ಪೇನಹಳ್ಳಿ ನಾಗೇಶ್, ಮುಂತಾದವರು ಇದ್ದರು

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

3 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

4 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

6 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

6 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

7 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

8 hours ago