Categories: ಕೋಲಾರ

ಬಿಜೆಪಿಯಿಂದ ಜಿಲ್ಲೆಗೆ ಹತ್ತು ವರ್ಷದ ಸಾಧನೆಯನ್ನು ಬಹಿರಂಗ ಪಡಿಸಲಿ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರದಿಂದ ಜಿಲ್ಲೆಗೆ ಹತ್ತು ತಿಂಗಳ ಅಭಿವೃದ್ಧಿಗೆ ಸಂಬಂಧಸಿದ ದಾಖಲೆಗಳನ್ನು ನೀಡಲು ನಾವು ಸಿದ್ದರಿದ್ದೇವೆ ಬಿಜೆಪಿಯವರಿಗೆ ಧೈರ್ಯ ಇದ್ದರೆ ಹತ್ತು ವರ್ಷದಿಂದ ಜಿಲ್ಲೆ ಅಭಿವೃದ್ಧಿಗೆ ಅವರ ಕೊಡುಗೆಯನ್ನು ಬಹಿರಂಗ ಪಡಿಸಲಿ ಎಂದು ಶಾಸಕ ಕೊತ್ತೂರು ಜಿ ಮಂಜುನಾಥ್ ಸವಾಲು ಹಾಕಿದರು.

ತಾಲೂಕಿನ ವೇಮಗಲ್ ಹೋಬಳಿಯ ಸೀತಿಹೊಸೂರು ಮತ್ತು ಕುರಗಲ್ ಗ್ರಾಮದಲ್ಲಿ ಶುಕ್ರವಾರ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಳೆದ ಹತ್ತು ವರ್ಷದಿಂದ ಬರೀ ಕ್ಲಾರ್ಕ್ ಟವರ್ ನಲ್ಲಿನ ಬಣ್ಣ ಬದಲಾಯಿಸಿದ್ದು ಬಿಟ್ಟರೆ ಸಾಮಾನ್ಯ ಜನಕ್ಕೆ ಅನುಕೂಲವಾಗುವ ಒಂದು ಒಂದು ಯೋಜನೆಯನ್ನು ಜಾರಿ ಮಾಡಲಿಲ್ಲ ಆದರೆ ಕೋಲಾರ ವಿಧಾನಸಭಾ ಕ್ಷೇತ್ರ ರಸ್ತೆಗಳ ಅಭಿವೃದ್ಧಿಗೆ ಕನಿಷ್ಠ 500 ಕೋಟಿ ತಂದಿದ್ದೇವೆ ರಿಂಗ್ ರೋಡ್ ನಿರ್ಮಾಣಕ್ಕೆ 360 ಕೋಟಿ ಜೊತೆಗೆ ಎಪಿಎಂಸಿ ಜಾಗ ಗುರುತಿಸಿದ್ದೇವೆ ಮೆಡಿಕಲ್ ಕಾಲೇಜು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಇವುಗಳ ಬಗ್ಗೆ ದಾಖಲೆಗಳು ಬೇಕಿದ್ದರೆ ಕೊಡತ್ತೇವೆ ಬಿಜೆಪಿಯವರ ಕೊಡುಗೆ ಇದ್ದರೆ ಜನರ ಮುಂದೆ ಇಡೀ ಎಂದು ತಿಳಿಸಿದರು.

ಬಿಜೆಪಿ ಪಕ್ಷವು ಹಿಂದೂ ಮುಸ್ಲಿಂ ಸಮುದಾಯಗಳನ್ನು ಎತ್ತಿಕಟ್ಟಿ ಜೈ ಶ್ರೀರಾಮ್ ಅಂತ ದೇಶದ ಜನರನ್ನು ಯಾಮಾರಿಸಿದ್ದಾರೆ ಇತ್ತಿಚಿಗೆ ಕೂಡ ರಾಮಮಂದಿರ ಹೆಸರಿನಲ್ಲಿ ರಾಜಕಾರಣ ಮಾಡಲು ಹೊರಟಿದ್ದಾರೆ ಶ್ರೀರಾಮ ಕೇವಲ ಬಿಜೆಪಿ ಪಕ್ಷಕ್ಕೆ ಮಾತ್ರ ಸಿಮೀತವಲ್ಲ ನಾವು ಕೂಡ ಹಿಂದೂಗಳೇ ನಮ್ಮಲ್ಲಿ ಕೂಡ ದೇವ ಭಕ್ತಿ ಇದೆ ತೋರಿಕೆಗಾಗಿ ಮಾತ್ರ ಭಕ್ತಿ ಭಾವನೆ ತೋರಿಸಬಾರದು ಸಮಾಜದ ಎಲ್ಲಾ ಜಾತಿ ಧರ್ಮಗಳನ್ನು ಪ್ರೀತಿಯಿಂದ ನೋಡುವುದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ದೇಶದಲ್ಲಿ ಶಾಂತಿ, ನೆಮ್ಮದಿಗಾಗಿ ಕೈ ಗುರುತಿಗೆ ವೋಟ್ ಹಾಕುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ರಾಜ್ಯ ಸರಕಾರದ ಐದು ಗ್ಯಾರಂಟಿ ಯೋಜನೆಗಳೊಂದಿಗೆ ಕೇಂದ್ರದಲ್ಲಿ ಕೂಡ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಮಹಿಳೆಯರ ಅಭಿವೃದ್ಧಿಗೆ ಮಹಾಲಕ್ಷ್ಮಿ ಯೋಜನೆಯಿಂದ ವರ್ಷಕ್ಕೆ ಒಂದು ಲಕ್ಷ, ನಗೇಗಾದಲ್ಲಿ ದಿನಕ್ಕೆ 400 ರೂ ಕೂಲಿ, ರೈತರ ಸಾಲ ಮನ್ನಾ , ರೈತರ ಬೆಳೆಗಳಿಗೆ ಬೆಂಬಲ ಬೆಲೆ, ಜಾತಿ ಗಣತಿ ಮಾಡಿಸಿ ಸರ್ಕಾರದ ಯೋಜನೆಗಳನ್ನು ಎಲ್ಲಾ ಸಮುದಾಯಗಳ ಕಟ್ಟಕಡೆಯ ವ್ಯಕ್ತಿಗೆ ತಲುಪಿಸುವುದು ನಮ್ಮ ಗುರಿಯಾಗಿದೆ ಎಂದರು.

ಇತ್ತೀಚಿಗೆ ಕೋಲಾರದ ಮಾಜಿ ಸಚಿವರೊಬ್ಬರೂ ಸಭೆಯೊಂದರಲ್ಲಿ ಮಾತನಾಡಿ, ಕೋಲಾರ ಲೋಕಸಭಾ ಕ್ಷೇತ್ರವನ್ನು ಮೀಸಲು ಕ್ಷೇತ್ರದಿಂದ ತೆಗೆದುಹಾಕಿ ಮುಂದೆ ಸಾಮಾನ್ಯ ಕ್ಷೇತ್ರವಾಗಿ ಮಾಡಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ ಅವರ ಆಟಪಾಠಗಳು ನಾಟಕಗಳನ್ನು ಕ್ಷೇತ್ರದ ಜನ ನೋಡಿದ್ದಾರೆ ಜನ ಯಾಮಾರಿ ಎರಡು ಬಾರಿ ಅವರಿಗೆ ಅವಕಾಶ ನೀಡಿದ್ದಾರೆ ಮುಂದೆ ಇವರ ಆಟ ನಡೆಯಲ್ಲ ಅಂತ ಗೊತ್ತಾಗಿದೆ ಅದಕ್ಕೆ ಸಿಎಂಆರ್ ಶ್ರೀನಾಥ್ ಅವರನ್ನು ಜೊತೆಯಲ್ಲಿ ಇಟ್ಟುಕೊಂಡು ರಾಜಕೀಯವಾಗಿ ಮುಗಿಸಲು ಹೊರಟಿದ್ದಾರೆ ಶ್ರೀನಾಥ್ ಅವರಿಗೆ ಬುದ್ದಿ ಇದ್ದು ಈಗಲೇ ಎಚ್ಚತ್ತುಕೊಂಡರೆ ಮುಂದೆ ಒಳ್ಳೆಯದು ಎಂದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ನಾಗನಾಳ ಸೋಮಣ್ಣ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡರಾದ ದಯಾನಂದ್, ಉದಯಶಂಕರ್, ಉರಟ ಅಗ್ರಹಾರ ಚೌಡರೆಡ್ಡಿ, ಮೈಲಾಂಡಹಳ್ಳಿ ಮುರಳಿ, ಮಲೇಷಿಯಾ ರಾಜಕುಮಾರ್, ತಿಪ್ಪೇನಹಳ್ಳಿ ನಾಗೇಶ್, ಮುಂತಾದವರು ಇದ್ದರು

Ramesh Babu

Journalist

Recent Posts

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

2 hours ago

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

7 hours ago

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

19 hours ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

19 hours ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

19 hours ago

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಸಹಮತದೊಂದಿಗೆ ಮುಂದುವರಿಯಬೇಕು- ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…

20 hours ago