ಬಿಜೆಪಿಯಿಂದ ನನ್ನನ್ನು ತಡೆಯಲು ಸಾಧ್ಯವಿಲ್ಲ.., ವಯನಾಡು ನನ್ನ ಮನೆ…- ರಾಹುಲ್ ಗಾಂಧಿ

ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಹಿಂದಿನ ಕ್ಷೇತ್ರವಾದ ಕೇರಳದ ವಯನಾಡ್‌ಗೆ ಇಂದು ಭೇಟಿ ನೀಡಿದ್ದಾರೆ.

ಕಲ್ಪೆಟ್ಟಾ ಪಟ್ಟಣದಲ್ಲಿ ‘ಸತ್ಯಮೇವ ಜಯತೆ’ ಎಂಬ ರೋಡ್‌ಶೋನಲ್ಲಿ ರಾಹುಲ್ ಗಾಂಧಿ ಸಹೋದರಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾಗವಹಿಸಿ ತಮ್ಮ ಬೆಂಬಲಿಗರತ್ತ ಕೈ ಬೀಸಿ ತಮ್ಮ ಶಕ್ತಿ ಪ್ರದರ್ಶಿಸಿ ಬಿಜೆಪಿಗೆ ಸ್ಪಷ್ಟ ಸಂದೇಶ ರವಾನಿಸಿದರು.

ಸಂಸದರೆಂದರೆ ಟ್ಯಾಗ್. ಇದು ಒಂದು ಪೋಸ್ಟ್ ಆಗಿದೆ. ಹಾಗಾಗಿ, ಬಿಜೆಪಿ ಟ್ಯಾಗ್, ಹುದ್ದೆ, ಮನೆಯನ್ನು ಕಸಿದುಕೊಳ್ಳಬಹುದು ಮತ್ತು ಬಿಜೆಪಿಯವರು ನನ್ನನ್ನು ಜೈಲಿಗಟ್ಟಬಹುದು, ಆದರೆ ವಯನಾಡಿನ ಜನರನ್ನು ಪ್ರತಿನಿಧಿಸುವುದನ್ನು ತಡೆಯಲು ಬಿಜೆಪಿಗೆ ಸಾಧ್ಯವಿಲ್ಲ. ಹಾಗೂ ವಯನಾಡಿನ ಜನರು ಮತ್ತು ಅವರ ಸಮಸ್ಯೆಗಳನ್ನು ಪ್ರತಿನಿಧಿಸುವುದನ್ನು ತಡೆಯಲು ಅವರಿಗೆ ಸಾಧ್ಯವೇ ಇಲ್ಲ. ಬಿಜೆಪಿಯಿಂದ ಸಂಸದ ಎಂಬ ಟ್ಯಾಗ್ ನ್ನು ಮಾತ್ರ ಕಿತ್ತುಕೊಳ್ಳಲಾಗಿದೆ ಎಂದು ಲೇವಡಿ ಮಾಡಿದರು.

ಇಷ್ಟು ವರ್ಷ ಕಳೆದರೂ ಬಿಜೆಪಿ ತನ್ನ ಎದುರಾಳಿಯನ್ನು ಅರ್ಥ ಮಾಡಿಕೊಳ್ಳದಿರುವುದು ಆಶ್ಚರ್ಯ ತಂದಿದೆ. ತಮ್ಮ ಎದುರಾಳಿಯು ಬೆದರುವುದಿಲ್ಲ ಎಂದು ಅವರಿಗೆ ಅರ್ಥವಾಗುವುದಿಲ್ಲ. ನನ್ನ ಮನೆಗೆ ಪೊಲೀಸರನ್ನು ಕಳುಹಿಸುವುದರಿಂದ ನಾನು ಹೆದರುತ್ತೇನೆ ಅಥವಾ ನನ್ನ ಮನೆಯನ್ನು ಕಿತ್ತುಕೊಂಡರೆ ನನಗೆ ತೊಂದರೆಯಾಗುತ್ತದೆ ಎಂದು ಅವರು ಭಾವಿಸುತ್ತಾರೆ, ಇದಕ್ಕೆ ನಾನು ಹೆದರುವುದಿಲ್ಲ‌ ಎಂದು ಹೇಳಿದರು.

ನಿಮ್ಮ ಪ್ರೀತಿಗೆ ಸದಾ ಪಾತ್ರನಾಗುತ್ತೇನೆ

ವಯನಾಡಿನ ಜನರು ನನ್ನ ಮೇಲೆ ತೋರಿದ ಪ್ರೀತಿ ಮತ್ತು ವಾತ್ಸಲ್ಯದಿಂದ ವಿನಮ್ರತೆಯನ್ನು ಅನುಭವಿಸುತ್ತೇನೆ ಎಂದು ತಿಳಿಸಿದರು. ನಿಮ್ಮೆಲ್ಲರನ್ನು ಎದುರಿಸುತ್ತಿರುವ ಎಲ್ಲಾ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ನಾನು ಪ್ರಯತ್ನಿಸುವುದನ್ನು ಮುಂದುವರಿಸುತ್ತೇನೆ.

ನಿಮ್ಮ ಬೆಂಬಲವು ನನಗೆ ಅಪಾರ ಶಕ್ತಿಯನ್ನು ನೀಡಿದೆ ಮತ್ತು ನಮ್ಮ ಪ್ರೀತಿಯ ಮಾತೃಭೂಮಿಯ ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಹಾಳುಮಾಡಲು ನರಕಯಾತನೆ ಮಾಡುತ್ತಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್ ಅನ್ನು ನಾವು ಒಟ್ಟಾಗಿ ಎದುರಿಸುವಾಗ ಅದು ಮುಂದುವರಿಯುತ್ತದೆ.

ಬಿಜೆಪಿ ಕೆಲವರ ಪಟ್ಟಭದ್ರ ಹಿತಾಸಕ್ತಿಗಳನ್ನು ಹೆಚ್ಚಿಸಲು ಕೆಲಸ ಮಾಡುತ್ತಾರೆ. ನಾವು ಭಾರತದಾದ್ಯಂತ ಇರುವ ಕೋಟ್ಯಂತರ ಸಹೋದರ ಸಹೋದರಿಯರ ಹಿತಾಸಕ್ತಿಗಳನ್ನು ಕಾಪಾಡಲು ಹೋರಾಡುತ್ತೇವೆ.

ನಂತರ ಪ್ರಿಯಾಂಕಾ ಗಾಂಧಿ ಮಾತನಾಡಿ, ಇಂದು ಇಡೀ ಸರ್ಕಾರ, ಎಲ್ಲಾ ಮಂತ್ರಿಗಳು, ಇಡೀ ವ್ಯವಸ್ಥೆಯನ್ನು ಒಬ್ಬ ವ್ಯಕ್ತಿಯ ಮೇಲೆ ದಾಳಿ ಮಾಡಲು ಸಜ್ಜಾಗಿದೆ. ರಾಹುಲ್ ಗಾಂಧಿ ಅವರು ಈ ಸರ್ಕಾರ ಉತ್ತರಿಸಲು ಸಾಧ್ಯವಾಗದ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.

ಸತ್ಯವು ಯಾವಾಗಲೂ ಸುಳ್ಳು ಹೇಳುವವರನ್ನು ವಿಚಲಿತಗೊಳಿಸುತ್ತದೆ, ಆದರೆ ನಮ್ಮ ದೇಶವು ಸತ್ಯ, ಅಹಿಂಸೆ ಮತ್ತು ನ್ಯಾಯದ ತಳಹದಿಯ ಮೇಲೆ ನಿಂತಿದೆ. ನಮ್ಮ ಹೋರಾಟ ಸತ್ಯಕ್ಕಾಗಿ ಮತ್ತು ಸತ್ಯಕ್ಕೆ ಮಾತ್ರ ಜಯ ಸಿಗುತ್ತದೆ ಎಂದು ಟೀಕಿಸಿದರು.

Ramesh Babu

Journalist

Recent Posts

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

11 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

12 hours ago

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

15 hours ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

1 day ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

1 day ago