Categories: ಮೈಸೂರು

ಬಿಜೆಪಿಯ ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ ಬಿಟ್ಟರೆ ಬೇರೇನಿದೆ?- ಸಿಎಂ ಸಿದ್ದರಾಮಯ್ಯ

ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ:

ಹಿಂದೆ ಬಿಜೆಪಿ ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಸಿಬಿಐ ತನಿಖೆಗೆ ಕೊಟ್ಟಿದ್ದರೆ ಈಗ ನಮ್ಮನ್ನು ಕೇಳಬಹುದಿತ್ತು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಅವರ ಪ್ರತಿಕ್ರಿಯಿಸಿದರು.

ಶ್ರೀರಾಮುಲು, ಜನಾರ್ಧನ ರೆಡ್ಡಿಯವರು ಕಾಂಗ್ರೆಸ್ ನಾಯಕರ ಬಗ್ಗೆ ತುಚ್ಛವಾಗಿ ಮಾತನಾಡುತ್ತಾರೆ. ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗಿ ಗೊತ್ತಾಗುತ್ತದೆ. ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಬರಬಾರದೆಂದು ಏಕೆ ಹೇಳಿದ್ದರು? ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರು? ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಈ ಬಗ್ಗೆ ವರದಿ ಕೊಟ್ಟಿದ್ದರು ಎಂದರು.

ಲೋಕಸಭಾ ಚುನಾವಣೆ ಪ್ರಚಾರಕ್ಕೆ ಹೋದಾಗ ಬಳ್ಳಾರಿಯಲ್ಲಿ ನಮಗೆ ಸಾರ್ವಜನಿಕ ಸಭೆ ನಡೆಸಲು ಎಲ್ಲೂ ಸ್ಥಳವನ್ನು ನೀಡಲಿಲ್ಲ. ಕೊನೆಗೆ ಕುರುಬರ ದೇವಸ್ಥಾನದ ಬಳಿ ಸಭೆ ನಡೆಸಿದೆವು. ಇವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ, ಸರ್ವಾಧಿಕಾರದಲ್ಲಿ ನಂಬಿಕೆ ಇದೆ ಎನ್ನಲು ಇದೊಂದು ಉದಾಹರಣೆ ಸಾಕು‌ ಎಂದು ಹೇಳಿದರು.

ಸಂಸದೀಯ ವ್ಯವಸ್ಥೆಯಲ್ಲಿ ಅವರಿಗೆ ನಂಬಿಕೆಯಿಲ್ಲ. ಗೂಂಡಾಗಿರಿ ಮಾಡುತ್ತಿದ್ದವರಿಂದ ನಾವು ಪಾಠ ಕಲಿಯಬೇಕಿಲ್ಲ. ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಅದರ ಆಶಯಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷ. ಬಿಜೆಪಿಯ ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ ಬಿಟ್ಟರೆ ಬೇರೇನಿದೆ? ಎಂದು ಪ್ರಶ್ನೆ ಮಾಡಿದರು.

ಸಂವಿಧಾನದ ನಿಯಮಗಳಡಿ ಅಧಿವೇಶನ ಕರೆಯಲಾಗಿದೆ:

ವರ್ಷದಲ್ಲಿ ಜಂಟಿ ಅಧಿವೇಶನ ಕಡ್ಡಾಯವಾಗಿ ಕರೆಯಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಅದಕ್ಕಾಗಿ ಕರೆದಿದ್ದೇವೆ. ಇದು ಅಧಿಕಾರ ದುರ್ಬಳಕೆ ಹೇಗಾಗುತ್ತದೆ? ಎಂದು ಪ್ರಶ್ನಿಸಿದರು.

ಮನರೇಗಾ ಮೂಲಕ ಉದ್ಯೋಗ ಖಾತ್ರಿ, ಶಿಕ್ಷಣ, ಮಾಹಿತಿ ಹಕ್ಕು ಆಹಾರ ಭದ್ರತೆ ತಂದದ್ದು ಯುಪಿಎ ಸರ್ಕಾರ. ಅದನ್ನು ಹಾಳು ಮಾಡಲು ಹೊರಟಿಸುವುದನ್ನು ಖಂಡಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ. ವಿಬಿ ಗ್ರಾಮ್ ಜಿ (ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಜೀವಿಕ ಮಿಷನ್ ಗ್ರಾಮೀಣ) ಎನ್ನುವುದು ಇದರ ಅರ್ಥ. ಕಾರ್ಯಕ್ರಮವನ್ನು ರದ್ದು ಮಾಡಬೇಕೆಂದು ಒತ್ತಾಯಿಸಲಾಗುತ್ತಿದೆ ಎಂದರು.

Ramesh Babu

Journalist

Recent Posts

ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ- ಪಿಡಿಒ ರಮೇಶ್

ಚಿಕ್ಕನಾಯಕನಹಳ್ಳಿ: ರೈತರು ಒಂದು ವರ್ಷದಲ್ಲಿ 5 ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ,  ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ…

2 hours ago

ಹಣದ ಹರಿವು

ಹೊರಹೋಗುವ ಸುಲಭ ದಾರಿಗಳು, ಒಳಬರುವ ಕಠಿಣ ಹಾದಿಗಳು....... ಖರ್ಚು ಮಾಡುವ ಸುಲಭ ಮಾರ್ಗಗಳು, ಸಂಪಾದನೆ ಮಾಡಲು ಕಠಿಣ ಹಾದಿಗಳು...... ಆಧುನಿಕತೆ…

3 hours ago

ಸೆ.6ರಂದು ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…

20 hours ago

ದೌರ್ಬಲ್ಯ – ಶೋಷಣೆ – ಸ್ವಾಭಿಮಾನ……

ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…

1 day ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

3 days ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

3 days ago