Categories: ಮೈಸೂರು

ಬಿಜೆಪಿಯ ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ ಬಿಟ್ಟರೆ ಬೇರೇನಿದೆ?- ಸಿಎಂ ಸಿದ್ದರಾಮಯ್ಯ

ಬಿಜೆಪಿ ನಾಯಕರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆಯಿಲ್ಲ:

ಹಿಂದೆ ಬಿಜೆಪಿ ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಸಿಬಿಐ ತನಿಖೆಗೆ ಕೊಟ್ಟಿದ್ದರೆ ಈಗ ನಮ್ಮನ್ನು ಕೇಳಬಹುದಿತ್ತು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ಅವರ ಪ್ರತಿಕ್ರಿಯಿಸಿದರು.

ಶ್ರೀರಾಮುಲು, ಜನಾರ್ಧನ ರೆಡ್ಡಿಯವರು ಕಾಂಗ್ರೆಸ್ ನಾಯಕರ ಬಗ್ಗೆ ತುಚ್ಛವಾಗಿ ಮಾತನಾಡುತ್ತಾರೆ. ಬಿಜೆಪಿಯವರಿಗೆ ಸಂಸ್ಕೃತಿ ಇಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗಿ ಗೊತ್ತಾಗುತ್ತದೆ. ಜನಾರ್ಧನ ರೆಡ್ಡಿಗೆ ಬಳ್ಳಾರಿಗೆ ಬರಬಾರದೆಂದು ಏಕೆ ಹೇಳಿದ್ದರು? ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವರ್ತಿಸಿದವರು ಯಾರು? ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರು ಈ ಬಗ್ಗೆ ವರದಿ ಕೊಟ್ಟಿದ್ದರು ಎಂದರು.

ಲೋಕಸಭಾ ಚುನಾವಣೆ ಪ್ರಚಾರಕ್ಕೆ ಹೋದಾಗ ಬಳ್ಳಾರಿಯಲ್ಲಿ ನಮಗೆ ಸಾರ್ವಜನಿಕ ಸಭೆ ನಡೆಸಲು ಎಲ್ಲೂ ಸ್ಥಳವನ್ನು ನೀಡಲಿಲ್ಲ. ಕೊನೆಗೆ ಕುರುಬರ ದೇವಸ್ಥಾನದ ಬಳಿ ಸಭೆ ನಡೆಸಿದೆವು. ಇವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ, ಸರ್ವಾಧಿಕಾರದಲ್ಲಿ ನಂಬಿಕೆ ಇದೆ ಎನ್ನಲು ಇದೊಂದು ಉದಾಹರಣೆ ಸಾಕು‌ ಎಂದು ಹೇಳಿದರು.

ಸಂಸದೀಯ ವ್ಯವಸ್ಥೆಯಲ್ಲಿ ಅವರಿಗೆ ನಂಬಿಕೆಯಿಲ್ಲ. ಗೂಂಡಾಗಿರಿ ಮಾಡುತ್ತಿದ್ದವರಿಂದ ನಾವು ಪಾಠ ಕಲಿಯಬೇಕಿಲ್ಲ. ಕಾಂಗ್ರೆಸ್ ಪಕ್ಷ ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಅದರ ಆಶಯಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷ. ಬಿಜೆಪಿಯ ಜನಾಂದೋಲನದ ಹಿಂದೆ ರಾಜಕೀಯ ಉದ್ದೇಶ ಬಿಟ್ಟರೆ ಬೇರೇನಿದೆ? ಎಂದು ಪ್ರಶ್ನೆ ಮಾಡಿದರು.

ಸಂವಿಧಾನದ ನಿಯಮಗಳಡಿ ಅಧಿವೇಶನ ಕರೆಯಲಾಗಿದೆ:

ವರ್ಷದಲ್ಲಿ ಜಂಟಿ ಅಧಿವೇಶನ ಕಡ್ಡಾಯವಾಗಿ ಕರೆಯಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಅದಕ್ಕಾಗಿ ಕರೆದಿದ್ದೇವೆ. ಇದು ಅಧಿಕಾರ ದುರ್ಬಳಕೆ ಹೇಗಾಗುತ್ತದೆ? ಎಂದು ಪ್ರಶ್ನಿಸಿದರು.

ಮನರೇಗಾ ಮೂಲಕ ಉದ್ಯೋಗ ಖಾತ್ರಿ, ಶಿಕ್ಷಣ, ಮಾಹಿತಿ ಹಕ್ಕು ಆಹಾರ ಭದ್ರತೆ ತಂದದ್ದು ಯುಪಿಎ ಸರ್ಕಾರ. ಅದನ್ನು ಹಾಳು ಮಾಡಲು ಹೊರಟಿಸುವುದನ್ನು ಖಂಡಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ. ವಿಬಿ ಗ್ರಾಮ್ ಜಿ (ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಜೀವಿಕ ಮಿಷನ್ ಗ್ರಾಮೀಣ) ಎನ್ನುವುದು ಇದರ ಅರ್ಥ. ಕಾರ್ಯಕ್ರಮವನ್ನು ರದ್ದು ಮಾಡಬೇಕೆಂದು ಒತ್ತಾಯಿಸಲಾಗುತ್ತಿದೆ ಎಂದರು.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

10 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

21 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

1 day ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

1 day ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

2 days ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

2 days ago