Categories: ಕೋಲಾರ

ಬಿಜೆಪಿಯ ಮಹಾಸಂಪರ್ಕ ಅಭಿಯಾನ 50 ಸಾವಿರ ಸದಸ್ಯತ್ವ ಗುರಿ- ಓಂಶಕ್ತಿ ಚಲಪತಿ

ಕೋಲಾರ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಿ ಬಿಜೆಪಿ ಸದಸ್ಯತ್ವ ಮಾಡಿಸುವ ಜೊತೆಗೆ ಮಹಾಸಂಪರ್ಕ ಅಭಿಯಾನವನ್ನು ನಡೆಸಲಾಗುತ್ತಿದ್ದು ಇದಕ್ಕೆ ಕಾರ್ಯಕರ್ತರು ಕೈ ಜೋಡಿಸಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.

ತಾಲೂಕಿನ ನರಸಾಪುರ ಭಾಗದಲ್ಲಿ ಭಾನುವಾರ ಬಿಜೆಪಿ ವತಿಯಿಂದ ಮಹಾಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ 10 ಸಾವಿರ ಬಿಜೆಪಿ ಪಕ್ಷದ ಸದಸ್ಯತ್ವವನ್ನು ನೋಂದಣಿ ಮಾಡಿಸಲಾಗಿದೆ 50 ಸಾವಿರ ಗುರಿಯನ್ನು ಹೊಂದಿದ್ದು ನಗರ ಭಾಗದಲ್ಲಿ ಹೆಚ್ಚು ಕ್ರಿಯಾಶೀಲವಾದ ಚಟುವಟಿಕೆಗಳನ್ನು ನಡೆಯತ್ತಿದ್ದು ಗ್ರಾಮೀಣ ಭಾಗದಲ್ಲಿ ಪಕ್ಷವನ್ನು ಬಲಪಡಿಸಲಾಗುತ್ತಾ ಇದ್ದು ಅದರಿಂದಲೇ ಪ್ರತಿ ಗ್ರಾಮದಲ್ಲಿ ಈ ಅಭಿಯಾನ ನಡೆಯಲಿದ್ದು ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಮನವಿ ಮಾಡಿದರು.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಭಾರತ ಸ್ವಾವಲಂಬಿ, ಸದೃಢ, ಸಶಕ್ತ ದೇಶವಾಗಿದ್ದು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ ಕೋವಿಡ್ ನಿರ್ವಹಣೆಯಲ್ಲಿ ಸವಾಲನ್ನು ಸ್ವೀಕರಿಸಿ ಉತ್ತಮ ರೀತಿಯಲ್ಲಿ ನಿರ್ವಹಿಸು ಜತೆಗೆ ದೇಶದ ಜನರಿಗೆ ಆರ್ಥಿಕ ಮತ್ತು ವೈದ್ಯಕೀಯ ನೆರವು ನೀಡಿದ್ದಾರೆ ಗರೀಬ್‌ ಕಲ್ಯಾಣ ಯೋಜನೆ, ದೂರದರ್ಶಿತ್ವದೊಂದಿಗೆ ಬಿತ್ತಿರುವ ಆತ್ಮ ನಿರ್ಭರ ಭಾರತದ ಚಿಂತನೆಗಳು ದೇಶವನ್ನು ಸಂಕಷ್ಟದಿಂದ ಪಾರು ಮಾಡಬಲ್ಲದೆಂಬ ವಿಶ್ವಾಸ ಮೂಡಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸದಸ್ಯತ್ವವನ್ನು ಪಡೆಯಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಪಕ್ಷವು ಜಗತ್ತಿನಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ ಮುಂಬರುವ ಎಲ್ಲಾ ಚುನಾವಣೆಗಳ ಹಿನ್ನಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಈಗಿನಿಂದಲೂ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಪಕ್ಷವನ್ನು ಸಂಘಟಿಸಿ ಅದಕ್ಕೆ ಬೇಕಾದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮುರಗೇಶ್, ನಾಗರಾಜ್, ಉಮೇಶ್, ಮಂಜುನಾಥ್, ಸರ್ವೇಶ್,ಮಧು, ಶ್ರೀರಾಮ್, ಮುಂತಾದವರು ಇದ್ದರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

9 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

9 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

11 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

12 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

14 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

20 hours ago