Categories: ಕೋಲಾರ

ಬಿಜೆಪಿಯ ಮಹಾಸಂಪರ್ಕ ಅಭಿಯಾನ 50 ಸಾವಿರ ಸದಸ್ಯತ್ವ ಗುರಿ- ಓಂಶಕ್ತಿ ಚಲಪತಿ

ಕೋಲಾರ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಿ ಬಿಜೆಪಿ ಸದಸ್ಯತ್ವ ಮಾಡಿಸುವ ಜೊತೆಗೆ ಮಹಾಸಂಪರ್ಕ ಅಭಿಯಾನವನ್ನು ನಡೆಸಲಾಗುತ್ತಿದ್ದು ಇದಕ್ಕೆ ಕಾರ್ಯಕರ್ತರು ಕೈ ಜೋಡಿಸಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.

ತಾಲೂಕಿನ ನರಸಾಪುರ ಭಾಗದಲ್ಲಿ ಭಾನುವಾರ ಬಿಜೆಪಿ ವತಿಯಿಂದ ಮಹಾಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ 10 ಸಾವಿರ ಬಿಜೆಪಿ ಪಕ್ಷದ ಸದಸ್ಯತ್ವವನ್ನು ನೋಂದಣಿ ಮಾಡಿಸಲಾಗಿದೆ 50 ಸಾವಿರ ಗುರಿಯನ್ನು ಹೊಂದಿದ್ದು ನಗರ ಭಾಗದಲ್ಲಿ ಹೆಚ್ಚು ಕ್ರಿಯಾಶೀಲವಾದ ಚಟುವಟಿಕೆಗಳನ್ನು ನಡೆಯತ್ತಿದ್ದು ಗ್ರಾಮೀಣ ಭಾಗದಲ್ಲಿ ಪಕ್ಷವನ್ನು ಬಲಪಡಿಸಲಾಗುತ್ತಾ ಇದ್ದು ಅದರಿಂದಲೇ ಪ್ರತಿ ಗ್ರಾಮದಲ್ಲಿ ಈ ಅಭಿಯಾನ ನಡೆಯಲಿದ್ದು ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಮನವಿ ಮಾಡಿದರು.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಭಾರತ ಸ್ವಾವಲಂಬಿ, ಸದೃಢ, ಸಶಕ್ತ ದೇಶವಾಗಿದ್ದು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ ಕೋವಿಡ್ ನಿರ್ವಹಣೆಯಲ್ಲಿ ಸವಾಲನ್ನು ಸ್ವೀಕರಿಸಿ ಉತ್ತಮ ರೀತಿಯಲ್ಲಿ ನಿರ್ವಹಿಸು ಜತೆಗೆ ದೇಶದ ಜನರಿಗೆ ಆರ್ಥಿಕ ಮತ್ತು ವೈದ್ಯಕೀಯ ನೆರವು ನೀಡಿದ್ದಾರೆ ಗರೀಬ್‌ ಕಲ್ಯಾಣ ಯೋಜನೆ, ದೂರದರ್ಶಿತ್ವದೊಂದಿಗೆ ಬಿತ್ತಿರುವ ಆತ್ಮ ನಿರ್ಭರ ಭಾರತದ ಚಿಂತನೆಗಳು ದೇಶವನ್ನು ಸಂಕಷ್ಟದಿಂದ ಪಾರು ಮಾಡಬಲ್ಲದೆಂಬ ವಿಶ್ವಾಸ ಮೂಡಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸದಸ್ಯತ್ವವನ್ನು ಪಡೆಯಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಪಕ್ಷವು ಜಗತ್ತಿನಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ ಮುಂಬರುವ ಎಲ್ಲಾ ಚುನಾವಣೆಗಳ ಹಿನ್ನಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಈಗಿನಿಂದಲೂ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಪಕ್ಷವನ್ನು ಸಂಘಟಿಸಿ ಅದಕ್ಕೆ ಬೇಕಾದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮುರಗೇಶ್, ನಾಗರಾಜ್, ಉಮೇಶ್, ಮಂಜುನಾಥ್, ಸರ್ವೇಶ್,ಮಧು, ಶ್ರೀರಾಮ್, ಮುಂತಾದವರು ಇದ್ದರು.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

53 minutes ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

13 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

14 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

16 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

17 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

22 hours ago