Categories: ಕೋಲಾರ

ಬಿಜೆಪಿಯ ಮಹಾಸಂಪರ್ಕ ಅಭಿಯಾನ 50 ಸಾವಿರ ಸದಸ್ಯತ್ವ ಗುರಿ- ಓಂಶಕ್ತಿ ಚಲಪತಿ

ಕೋಲಾರ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಿ ಬಿಜೆಪಿ ಸದಸ್ಯತ್ವ ಮಾಡಿಸುವ ಜೊತೆಗೆ ಮಹಾಸಂಪರ್ಕ ಅಭಿಯಾನವನ್ನು ನಡೆಸಲಾಗುತ್ತಿದ್ದು ಇದಕ್ಕೆ ಕಾರ್ಯಕರ್ತರು ಕೈ ಜೋಡಿಸಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.

ತಾಲೂಕಿನ ನರಸಾಪುರ ಭಾಗದಲ್ಲಿ ಭಾನುವಾರ ಬಿಜೆಪಿ ವತಿಯಿಂದ ಮಹಾಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ 10 ಸಾವಿರ ಬಿಜೆಪಿ ಪಕ್ಷದ ಸದಸ್ಯತ್ವವನ್ನು ನೋಂದಣಿ ಮಾಡಿಸಲಾಗಿದೆ 50 ಸಾವಿರ ಗುರಿಯನ್ನು ಹೊಂದಿದ್ದು ನಗರ ಭಾಗದಲ್ಲಿ ಹೆಚ್ಚು ಕ್ರಿಯಾಶೀಲವಾದ ಚಟುವಟಿಕೆಗಳನ್ನು ನಡೆಯತ್ತಿದ್ದು ಗ್ರಾಮೀಣ ಭಾಗದಲ್ಲಿ ಪಕ್ಷವನ್ನು ಬಲಪಡಿಸಲಾಗುತ್ತಾ ಇದ್ದು ಅದರಿಂದಲೇ ಪ್ರತಿ ಗ್ರಾಮದಲ್ಲಿ ಈ ಅಭಿಯಾನ ನಡೆಯಲಿದ್ದು ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಮನವಿ ಮಾಡಿದರು.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಭಾರತ ಸ್ವಾವಲಂಬಿ, ಸದೃಢ, ಸಶಕ್ತ ದೇಶವಾಗಿದ್ದು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ ಕೋವಿಡ್ ನಿರ್ವಹಣೆಯಲ್ಲಿ ಸವಾಲನ್ನು ಸ್ವೀಕರಿಸಿ ಉತ್ತಮ ರೀತಿಯಲ್ಲಿ ನಿರ್ವಹಿಸು ಜತೆಗೆ ದೇಶದ ಜನರಿಗೆ ಆರ್ಥಿಕ ಮತ್ತು ವೈದ್ಯಕೀಯ ನೆರವು ನೀಡಿದ್ದಾರೆ ಗರೀಬ್‌ ಕಲ್ಯಾಣ ಯೋಜನೆ, ದೂರದರ್ಶಿತ್ವದೊಂದಿಗೆ ಬಿತ್ತಿರುವ ಆತ್ಮ ನಿರ್ಭರ ಭಾರತದ ಚಿಂತನೆಗಳು ದೇಶವನ್ನು ಸಂಕಷ್ಟದಿಂದ ಪಾರು ಮಾಡಬಲ್ಲದೆಂಬ ವಿಶ್ವಾಸ ಮೂಡಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸದಸ್ಯತ್ವವನ್ನು ಪಡೆಯಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಪಕ್ಷವು ಜಗತ್ತಿನಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ ಮುಂಬರುವ ಎಲ್ಲಾ ಚುನಾವಣೆಗಳ ಹಿನ್ನಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಈಗಿನಿಂದಲೂ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಪಕ್ಷವನ್ನು ಸಂಘಟಿಸಿ ಅದಕ್ಕೆ ಬೇಕಾದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮುರಗೇಶ್, ನಾಗರಾಜ್, ಉಮೇಶ್, ಮಂಜುನಾಥ್, ಸರ್ವೇಶ್,ಮಧು, ಶ್ರೀರಾಮ್, ಮುಂತಾದವರು ಇದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

52 minutes ago

ಬರದ ಬವಣೆಗೆ ಸಿಲುಕಿದ ದೊಡ್ಡಬಳ್ಳಾಪುರ: ಬರಪೀಡಿತ ಪಟ್ಟಿಗೆ ಸೇರ್ಪಡೆ

ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…

3 hours ago

50 ಲಕ್ಷ ಲಂಚ ಪಡೆಯುವಾಗ ತಹಶೀಲ್ದಾರ್ ಲೋಕಾಯುಕ್ತ ಬಲೆಗೆ!

ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…

4 hours ago

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು-ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ

ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…

8 hours ago

ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ ಪತ್ನಿ ಶವವಾಗಿ ಪತ್ತೆ: ಸಾವಿನ ಹಿಂದೆ ಕೊಲೆ ಶಂಕೆ; ಪತಿಯ ಚಲನವಲನಗಳ ಕುರಿತು ಪೊಲೀಸರಿಂದ ತನಿಖೆ

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…

9 hours ago

ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಡಿ.ಜಿ. ನೇಮಕ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…

17 hours ago