ಕೋಲಾರ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಿ ಬಿಜೆಪಿ ಸದಸ್ಯತ್ವ ಮಾಡಿಸುವ ಜೊತೆಗೆ ಮಹಾಸಂಪರ್ಕ ಅಭಿಯಾನವನ್ನು ನಡೆಸಲಾಗುತ್ತಿದ್ದು ಇದಕ್ಕೆ ಕಾರ್ಯಕರ್ತರು ಕೈ ಜೋಡಿಸಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.
ತಾಲೂಕಿನ ನರಸಾಪುರ ಭಾಗದಲ್ಲಿ ಭಾನುವಾರ ಬಿಜೆಪಿ ವತಿಯಿಂದ ಮಹಾಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ 10 ಸಾವಿರ ಬಿಜೆಪಿ ಪಕ್ಷದ ಸದಸ್ಯತ್ವವನ್ನು ನೋಂದಣಿ ಮಾಡಿಸಲಾಗಿದೆ 50 ಸಾವಿರ ಗುರಿಯನ್ನು ಹೊಂದಿದ್ದು ನಗರ ಭಾಗದಲ್ಲಿ ಹೆಚ್ಚು ಕ್ರಿಯಾಶೀಲವಾದ ಚಟುವಟಿಕೆಗಳನ್ನು ನಡೆಯತ್ತಿದ್ದು ಗ್ರಾಮೀಣ ಭಾಗದಲ್ಲಿ ಪಕ್ಷವನ್ನು ಬಲಪಡಿಸಲಾಗುತ್ತಾ ಇದ್ದು ಅದರಿಂದಲೇ ಪ್ರತಿ ಗ್ರಾಮದಲ್ಲಿ ಈ ಅಭಿಯಾನ ನಡೆಯಲಿದ್ದು ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಮನವಿ ಮಾಡಿದರು.
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಭಾರತ ಸ್ವಾವಲಂಬಿ, ಸದೃಢ, ಸಶಕ್ತ ದೇಶವಾಗಿದ್ದು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ ಕೋವಿಡ್ ನಿರ್ವಹಣೆಯಲ್ಲಿ ಸವಾಲನ್ನು ಸ್ವೀಕರಿಸಿ ಉತ್ತಮ ರೀತಿಯಲ್ಲಿ ನಿರ್ವಹಿಸು ಜತೆಗೆ ದೇಶದ ಜನರಿಗೆ ಆರ್ಥಿಕ ಮತ್ತು ವೈದ್ಯಕೀಯ ನೆರವು ನೀಡಿದ್ದಾರೆ ಗರೀಬ್ ಕಲ್ಯಾಣ ಯೋಜನೆ, ದೂರದರ್ಶಿತ್ವದೊಂದಿಗೆ ಬಿತ್ತಿರುವ ಆತ್ಮ ನಿರ್ಭರ ಭಾರತದ ಚಿಂತನೆಗಳು ದೇಶವನ್ನು ಸಂಕಷ್ಟದಿಂದ ಪಾರು ಮಾಡಬಲ್ಲದೆಂಬ ವಿಶ್ವಾಸ ಮೂಡಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸದಸ್ಯತ್ವವನ್ನು ಪಡೆಯಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಪಕ್ಷವು ಜಗತ್ತಿನಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ ಮುಂಬರುವ ಎಲ್ಲಾ ಚುನಾವಣೆಗಳ ಹಿನ್ನಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಈಗಿನಿಂದಲೂ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಪಕ್ಷವನ್ನು ಸಂಘಟಿಸಿ ಅದಕ್ಕೆ ಬೇಕಾದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮುರಗೇಶ್, ನಾಗರಾಜ್, ಉಮೇಶ್, ಮಂಜುನಾಥ್, ಸರ್ವೇಶ್,ಮಧು, ಶ್ರೀರಾಮ್, ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ಕೆರೆಗಳು ಗ್ರಾಮೀಣ ಭಾಗಗಳ ಪ್ರಮುಖ ನೀರಿನ ಮೂಲಗಳಾಗಿದ್ದು, ಅವುಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಫಾಕ್ಸ್ಕಾನ್…
ಬೆಂಗಳೂರು ಗ್ರಾಮಾಂತರ: ಈ ಬಾರಿ ಬೇಸಿಗೆಯ ಬಿರು ಬಿಸಿಲು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಯರ್ ಮಾರಾಟಕ್ಕೆ ಹೊಸ ಉತ್ತೇಜನ ನೀಡಿದೆ.…
ದೊಡ್ಡಬಳ್ಳಾಪುರ: ನಗರದಲ್ಲಿನ ಎಲ್ಲಾ ಆರ್ಒ ಕುಡಿಯುವ ನೀರಿನ ಘಟಕಗಳ ನೀರಿನ ಗುಣಮಟ್ಟವನ್ನು ನಿಯಮಿತವಾಗಿ ಪರೀಕ್ಷಿಸಿ, ಅದರ ಪ್ರಮಾಣಪತ್ರವನ್ನು ಸಾರ್ವಜನಿಕರ ವೀಕ್ಷಣೆಗೆ…
ದೊಡ್ಡಬಳ್ಳಾಪುರ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಸಾಧನೆ ಮಾಡಿ ರ್ಯಾಂಕ್ ಪಡೆದ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಸುಮಿತ್ರಾ ಕೆ. ಆನಂದ್ ಅವರು ಸಲ್ಲಿಸಿದ್ದ ರಾಜೀನಾಮೆಯನ್ನು ಜಿಲ್ಲಾಧಿಕಾರಿ ಡಾ. ಕೆ. ಅನುರಾಧಾ…