Categories: ಕೋಲಾರ

ಬಿಜೆಪಿಯ ಮಹಾಸಂಪರ್ಕ ಅಭಿಯಾನ 50 ಸಾವಿರ ಸದಸ್ಯತ್ವ ಗುರಿ- ಓಂಶಕ್ತಿ ಚಲಪತಿ

ಕೋಲಾರ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸಿ ಬಿಜೆಪಿ ಸದಸ್ಯತ್ವ ಮಾಡಿಸುವ ಜೊತೆಗೆ ಮಹಾಸಂಪರ್ಕ ಅಭಿಯಾನವನ್ನು ನಡೆಸಲಾಗುತ್ತಿದ್ದು ಇದಕ್ಕೆ ಕಾರ್ಯಕರ್ತರು ಕೈ ಜೋಡಿಸಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕುಡಾ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.

ತಾಲೂಕಿನ ನರಸಾಪುರ ಭಾಗದಲ್ಲಿ ಭಾನುವಾರ ಬಿಜೆಪಿ ವತಿಯಿಂದ ಮಹಾಸಂಪರ್ಕ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಅವರು ಕೋಲಾರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಈಗಾಗಲೇ 10 ಸಾವಿರ ಬಿಜೆಪಿ ಪಕ್ಷದ ಸದಸ್ಯತ್ವವನ್ನು ನೋಂದಣಿ ಮಾಡಿಸಲಾಗಿದೆ 50 ಸಾವಿರ ಗುರಿಯನ್ನು ಹೊಂದಿದ್ದು ನಗರ ಭಾಗದಲ್ಲಿ ಹೆಚ್ಚು ಕ್ರಿಯಾಶೀಲವಾದ ಚಟುವಟಿಕೆಗಳನ್ನು ನಡೆಯತ್ತಿದ್ದು ಗ್ರಾಮೀಣ ಭಾಗದಲ್ಲಿ ಪಕ್ಷವನ್ನು ಬಲಪಡಿಸಲಾಗುತ್ತಾ ಇದ್ದು ಅದರಿಂದಲೇ ಪ್ರತಿ ಗ್ರಾಮದಲ್ಲಿ ಈ ಅಭಿಯಾನ ನಡೆಯಲಿದ್ದು ಬಿಜೆಪಿ ಕಾರ್ಯಕರ್ತರು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಮನವಿ ಮಾಡಿದರು.

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಭಾರತ ಸ್ವಾವಲಂಬಿ, ಸದೃಢ, ಸಶಕ್ತ ದೇಶವಾಗಿದ್ದು ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ ಕೋವಿಡ್ ನಿರ್ವಹಣೆಯಲ್ಲಿ ಸವಾಲನ್ನು ಸ್ವೀಕರಿಸಿ ಉತ್ತಮ ರೀತಿಯಲ್ಲಿ ನಿರ್ವಹಿಸು ಜತೆಗೆ ದೇಶದ ಜನರಿಗೆ ಆರ್ಥಿಕ ಮತ್ತು ವೈದ್ಯಕೀಯ ನೆರವು ನೀಡಿದ್ದಾರೆ ಗರೀಬ್‌ ಕಲ್ಯಾಣ ಯೋಜನೆ, ದೂರದರ್ಶಿತ್ವದೊಂದಿಗೆ ಬಿತ್ತಿರುವ ಆತ್ಮ ನಿರ್ಭರ ಭಾರತದ ಚಿಂತನೆಗಳು ದೇಶವನ್ನು ಸಂಕಷ್ಟದಿಂದ ಪಾರು ಮಾಡಬಲ್ಲದೆಂಬ ವಿಶ್ವಾಸ ಮೂಡಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಸದಸ್ಯತ್ವವನ್ನು ಪಡೆಯಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಪಕ್ಷವು ಜಗತ್ತಿನಲ್ಲಿ ಅತಿ ಹೆಚ್ಚು ಸದಸ್ಯರನ್ನು ಹೊಂದಿರುವ ಏಕೈಕ ಪಕ್ಷವಾಗಿ ಹೊರಹೊಮ್ಮಿದೆ ಮುಂಬರುವ ಎಲ್ಲಾ ಚುನಾವಣೆಗಳ ಹಿನ್ನಲೆಯಲ್ಲಿ ಬಿಜೆಪಿ ಗೆಲುವು ಸಾಧಿಸಲು ಈಗಿನಿಂದಲೂ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಪಕ್ಷವನ್ನು ಸಂಘಟಿಸಿ ಅದಕ್ಕೆ ಬೇಕಾದ ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮುರಗೇಶ್, ನಾಗರಾಜ್, ಉಮೇಶ್, ಮಂಜುನಾಥ್, ಸರ್ವೇಶ್,ಮಧು, ಶ್ರೀರಾಮ್, ಮುಂತಾದವರು ಇದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

8 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

18 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

18 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago