ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಒಳ್ಳೆ ಹಣ್ಣು: ಕಾಂಗ್ರೆಸ್-ದಳ ಅಭ್ಯರ್ಥಿಗಳು ಕೊಳೆತ ಹಣ್ಣು: ಆಯ್ಕೆ ನಿಮ್ಮದು: ಸಿ.ಟಿ.ರವಿ

ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಕೊಳೆತ ಹಣ್ಣಿನಂತೆ, ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಒಳ್ಳೆಯ ಹಣ್ಣಿನಂತಿದ್ದಾರೆ, ಮಾರುಕಟ್ಟೆಯಲ್ಲಿ ಒಳ್ಳೆಯ ಹಣ್ಣನ್ನು ಆಯ್ದುಕೊಳ್ಳುವಂತೆ ಕ್ಷೇತ್ರಕ್ಕೆ ಒಳ್ಳೆಯ ಅಭ್ಯರ್ಥಿಯನ್ನು ಆಯ್ಕೆ‌ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.

ತಾಲ್ಲೂಕಿನ ಮದುರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಬಿಜೆಪಿಯ ಅಭ್ಯರ್ಥಿ ಧೀರಜ್ ಮುನಿರಾಜು ಪರ ರೋಡ್ ಶೋ ನಡೆಸಿ ಮಾತನಾಡಿದರು. ಪಕ್ಕದ ಕ್ಷೆತ್ರದ ಶಾಸಕರಾದ ಎಸ್ ಆರ್ ವಿಶ್ವನಾಥ್ ಅವರು ಯಲಹಂಕವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಿದ್ದಾರೆ ಅದು ಅವರಿಂದ ಸಾಧ್ಯವಾಗುವುದಾದರೇ ದೊಡ್ಡಬಳ್ಳಾಪುರ ಕ್ಷೇತ್ರ ಏಕೆ ಅಭಿವೃದ್ದಿ ಹೊಂದಿಲ್ಲ ಎಂದು ಪ್ರಶ್ನಿಸುವ ಮೂಲಕ ಶಾಸಕರ ಕಾರ್ಯ ವೈಖರಿಯನ್ನು ಟೀಕಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಶಾಸಕರು ಯಾವ ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಬರಿ ಹಣ ಮಾಡುವುದಷ್ಟೆ ಕೆಲಸ ಅಲ್ಲಾ, ಅಭಿವೃದ್ದಿ ಕೆಲಸ ಮಾಡಿ ತೋರಿಸಬೇಕು, ಬರಿ ಬಾಯಿ ಮಾತಿಗೆ ಎಲ್ಲವನ್ನು ನಾನೇ ಮಾಡಿದ್ದು ಎಂದು ಹೇಳಿದ್ದಕ್ಕಿಂತ ಏನು ಮಾಡಿದ್ದಾರೆ ಎಂದು ತೋರಿಸಲಿ ಎಂದು ಸವಾಲ್ ಹಾಕಿದರು.

ಧೀರಜ್ ಮುನಿರಾಜು ಜನರ ನಡುವೆ ಇದ್ದೂ ಕೆಲಸ ಮಾಡುವ ಯುವಕ ಮೊದಲು ಆತನ ಕೆಲಸಗಳನ್ನು ಅನುಮಾನದಿಂದ ನೊಡುತ್ತಿದ್ದೆವು ಕ್ಷರಮೇಣ ಅವರ ಸಾಮಾಜಿಕ ಕೆಲಸಗಳನ್ನು ವಿಶ್ವಾಸ ಹಾಗೂ ಅಭಿಮಾನದಿಂದ ನೋಡಿದೆವು ನೀವು ಕೂಡ ಕಿರಿಯ ವಯಸ್ಸಿನ ನನ್ನ ತಮ್ಮನಂತಿರುವ ಧೀರಜ್ ಮುನಿರಾಜು ಅವರನ್ನು ಅಭಿಮಾನದಿಂದ ನೋಡಿ ಬೆಂಬಲಿಸಬೇಕು ಎಂದರು.

ದೊಡ್ಡತುಮಕೂರು ಕೆರೆ ಸಂರಕ್ಷಣೆ ಕುರಿತು ಈಗಾಗಲೇ ಮುಖ್ಯಮಂತ್ರಿ ಮಾತುಕೊಟ್ಟಿದ್ದಾರೆ ಸ್ಥಳೀಯ ಶಾಸಕರು ಕೆರೆ ಉಳಿಸುವ ಕೆಲಸ ಮಾಡಬೇಕಾಗಿತ್ತು ಆದರೇ ಹತ್ತು ವರ್ಷಗಳಲ್ಲಿ ಏನು ಮಾಡಿಲ್ಲ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳಿನಲ್ಲೆ ನಗರದ ನಾಗರಕೆರೆ ಸೇರಿದಂತೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

ಬಳಿಕ ಮಾತನಾಡಿದ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್, ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರನ್ನು ನನ್ನ ಜೊತೆಯಲ್ಲೇ ಶಾಸನಸಭೆಗೆ ಕಳುಹಿಸಿಕೊಟ್ಟರೆ ದೊಡ್ಡಬಳ್ಳಾಪುರ ಅಭಿವೃದ್ದಿಗೆ ಇಬ್ಬರೂ ಸೇರಿ ಶ್ರಮಿಸುತ್ತೇವೆ, ನಮ್ಮ ಕ್ಷೇತ್ರದ ಗಡಿಭಾಗದ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಪಡಿಸಿದ್ದೇನೆ ಆದರೇ ದೊಡ್ಡಬಳ್ಳಾಪುರ ಕ್ಷೇತ್ರದ ರಸ್ತೆಗಳು ಹದಗೆಟ್ಟಿವೆ ಮಧುರೆ ವರೆಗಿನ ರಸ್ತೆ ಕಾಮಗಾರಿಗೆ ಸರ್ಕಾರದೊಂದಿಗೆ ಮಾತನಾಡಿ ಚಾಲನೆ ಕೊಡಿಸಿದ್ದೇನೆ ಎಂದರು.

ಜೆ.ನರಸಿಂಹಸ್ವಾಮಿ ಶಾಸಕರಾಗಿದ್ದಾಗ ಯಡಿಯೂರಪ್ಪ ಅವರ ಬಳಿ ಕರೆದೊಯ್ದು ದೊಡ್ಡಬಳ್ಳಾಪುರಕ್ಕೆ‌ 750 ಕೋಟಿ ರೂ. ಅನುದಾನ ಕೊಡಿಸಿದ್ದೆ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಿದ್ದವು ಆದರೇ ಕಾಂಗ್ರೆಸ್ ಶಾಸಕರು ಬಂದ ಮೇಲೆ ಶಾಸಕರ ಕಾರ್ಯ ವೈಖರಿ ನೀವೆ ಗಮನಿಸಿದ್ದೀರಿ ಅದನ್ನು ಪ್ರತ್ಯೇಕ ವಾಗಿ ಹೇಳಬೇಕಾಗಿಲ್ಲ.

ಈ ವೇಳೆ ಬಿಜೆಪಿ ಮುಖಂಡ ಕೆ.ಹೆಚ್ ಹನುಂಮತರಾಯಪ್ಪ, ಬಿಜೆಪಿ ಅಭ್ಯರ್ಥಿ ಧೀರಜ್‌ಮುನಿರಾಜ್, ಬಿ.ಸಿ.ನಾರಾಯಣಸ್ವಾಮಿ, ತಿ.ರಂಗರಾಜು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮತಯಾಚನೆ‌ ಮಾಡಿದರು.

Ramesh Babu

Journalist

Recent Posts

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

7 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

8 hours ago

ಯುಗಾದಿ ಸಮಯದಲ್ಲಿ ಮತ್ತೆ ಚಿಗುರಿದ ಪ್ರೀತಿ: ವಿಚ್ಚೇದನಕ್ಕೆ ಅರ್ಜಿ ಸಲ್ಲಿಸಿದ್ದವರು ಕಟೆಕಟೆಯಲ್ಲಿ ಒಂದಾದರು: ಒಂದಾದ ದಂಪತಿಗೆ ಪ್ರೀತಿಯ ಪಾಠ ಹೇಳಿದ ನ್ಯಾಯಾಧೀಶರು

ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…

10 hours ago

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

11 hours ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

11 hours ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

12 hours ago