ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಒಳ್ಳೆ ಹಣ್ಣು: ಕಾಂಗ್ರೆಸ್-ದಳ ಅಭ್ಯರ್ಥಿಗಳು ಕೊಳೆತ ಹಣ್ಣು: ಆಯ್ಕೆ ನಿಮ್ಮದು: ಸಿ.ಟಿ.ರವಿ

ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಕೊಳೆತ ಹಣ್ಣಿನಂತೆ, ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಒಳ್ಳೆಯ ಹಣ್ಣಿನಂತಿದ್ದಾರೆ, ಮಾರುಕಟ್ಟೆಯಲ್ಲಿ ಒಳ್ಳೆಯ ಹಣ್ಣನ್ನು ಆಯ್ದುಕೊಳ್ಳುವಂತೆ ಕ್ಷೇತ್ರಕ್ಕೆ ಒಳ್ಳೆಯ ಅಭ್ಯರ್ಥಿಯನ್ನು ಆಯ್ಕೆ‌ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.

ತಾಲ್ಲೂಕಿನ ಮದುರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಬಿಜೆಪಿಯ ಅಭ್ಯರ್ಥಿ ಧೀರಜ್ ಮುನಿರಾಜು ಪರ ರೋಡ್ ಶೋ ನಡೆಸಿ ಮಾತನಾಡಿದರು. ಪಕ್ಕದ ಕ್ಷೆತ್ರದ ಶಾಸಕರಾದ ಎಸ್ ಆರ್ ವಿಶ್ವನಾಥ್ ಅವರು ಯಲಹಂಕವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಿದ್ದಾರೆ ಅದು ಅವರಿಂದ ಸಾಧ್ಯವಾಗುವುದಾದರೇ ದೊಡ್ಡಬಳ್ಳಾಪುರ ಕ್ಷೇತ್ರ ಏಕೆ ಅಭಿವೃದ್ದಿ ಹೊಂದಿಲ್ಲ ಎಂದು ಪ್ರಶ್ನಿಸುವ ಮೂಲಕ ಶಾಸಕರ ಕಾರ್ಯ ವೈಖರಿಯನ್ನು ಟೀಕಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಶಾಸಕರು ಯಾವ ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಬರಿ ಹಣ ಮಾಡುವುದಷ್ಟೆ ಕೆಲಸ ಅಲ್ಲಾ, ಅಭಿವೃದ್ದಿ ಕೆಲಸ ಮಾಡಿ ತೋರಿಸಬೇಕು, ಬರಿ ಬಾಯಿ ಮಾತಿಗೆ ಎಲ್ಲವನ್ನು ನಾನೇ ಮಾಡಿದ್ದು ಎಂದು ಹೇಳಿದ್ದಕ್ಕಿಂತ ಏನು ಮಾಡಿದ್ದಾರೆ ಎಂದು ತೋರಿಸಲಿ ಎಂದು ಸವಾಲ್ ಹಾಕಿದರು.

ಧೀರಜ್ ಮುನಿರಾಜು ಜನರ ನಡುವೆ ಇದ್ದೂ ಕೆಲಸ ಮಾಡುವ ಯುವಕ ಮೊದಲು ಆತನ ಕೆಲಸಗಳನ್ನು ಅನುಮಾನದಿಂದ ನೊಡುತ್ತಿದ್ದೆವು ಕ್ಷರಮೇಣ ಅವರ ಸಾಮಾಜಿಕ ಕೆಲಸಗಳನ್ನು ವಿಶ್ವಾಸ ಹಾಗೂ ಅಭಿಮಾನದಿಂದ ನೋಡಿದೆವು ನೀವು ಕೂಡ ಕಿರಿಯ ವಯಸ್ಸಿನ ನನ್ನ ತಮ್ಮನಂತಿರುವ ಧೀರಜ್ ಮುನಿರಾಜು ಅವರನ್ನು ಅಭಿಮಾನದಿಂದ ನೋಡಿ ಬೆಂಬಲಿಸಬೇಕು ಎಂದರು.

ದೊಡ್ಡತುಮಕೂರು ಕೆರೆ ಸಂರಕ್ಷಣೆ ಕುರಿತು ಈಗಾಗಲೇ ಮುಖ್ಯಮಂತ್ರಿ ಮಾತುಕೊಟ್ಟಿದ್ದಾರೆ ಸ್ಥಳೀಯ ಶಾಸಕರು ಕೆರೆ ಉಳಿಸುವ ಕೆಲಸ ಮಾಡಬೇಕಾಗಿತ್ತು ಆದರೇ ಹತ್ತು ವರ್ಷಗಳಲ್ಲಿ ಏನು ಮಾಡಿಲ್ಲ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳಿನಲ್ಲೆ ನಗರದ ನಾಗರಕೆರೆ ಸೇರಿದಂತೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

ಬಳಿಕ ಮಾತನಾಡಿದ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್, ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರನ್ನು ನನ್ನ ಜೊತೆಯಲ್ಲೇ ಶಾಸನಸಭೆಗೆ ಕಳುಹಿಸಿಕೊಟ್ಟರೆ ದೊಡ್ಡಬಳ್ಳಾಪುರ ಅಭಿವೃದ್ದಿಗೆ ಇಬ್ಬರೂ ಸೇರಿ ಶ್ರಮಿಸುತ್ತೇವೆ, ನಮ್ಮ ಕ್ಷೇತ್ರದ ಗಡಿಭಾಗದ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಪಡಿಸಿದ್ದೇನೆ ಆದರೇ ದೊಡ್ಡಬಳ್ಳಾಪುರ ಕ್ಷೇತ್ರದ ರಸ್ತೆಗಳು ಹದಗೆಟ್ಟಿವೆ ಮಧುರೆ ವರೆಗಿನ ರಸ್ತೆ ಕಾಮಗಾರಿಗೆ ಸರ್ಕಾರದೊಂದಿಗೆ ಮಾತನಾಡಿ ಚಾಲನೆ ಕೊಡಿಸಿದ್ದೇನೆ ಎಂದರು.

ಜೆ.ನರಸಿಂಹಸ್ವಾಮಿ ಶಾಸಕರಾಗಿದ್ದಾಗ ಯಡಿಯೂರಪ್ಪ ಅವರ ಬಳಿ ಕರೆದೊಯ್ದು ದೊಡ್ಡಬಳ್ಳಾಪುರಕ್ಕೆ‌ 750 ಕೋಟಿ ರೂ. ಅನುದಾನ ಕೊಡಿಸಿದ್ದೆ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಿದ್ದವು ಆದರೇ ಕಾಂಗ್ರೆಸ್ ಶಾಸಕರು ಬಂದ ಮೇಲೆ ಶಾಸಕರ ಕಾರ್ಯ ವೈಖರಿ ನೀವೆ ಗಮನಿಸಿದ್ದೀರಿ ಅದನ್ನು ಪ್ರತ್ಯೇಕ ವಾಗಿ ಹೇಳಬೇಕಾಗಿಲ್ಲ.

ಈ ವೇಳೆ ಬಿಜೆಪಿ ಮುಖಂಡ ಕೆ.ಹೆಚ್ ಹನುಂಮತರಾಯಪ್ಪ, ಬಿಜೆಪಿ ಅಭ್ಯರ್ಥಿ ಧೀರಜ್‌ಮುನಿರಾಜ್, ಬಿ.ಸಿ.ನಾರಾಯಣಸ್ವಾಮಿ, ತಿ.ರಂಗರಾಜು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮತಯಾಚನೆ‌ ಮಾಡಿದರು.

Ramesh Babu

Journalist

Recent Posts

ಡಿಪಿಎ ಅಧ್ಯಕ್ಷ ಸ್ಥಾನ ಶಿಷ್ಟಾಚಾರಕ್ಕೆ ಅನ್ವಯಿಸುವುದಿಲ್ಲ: ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಿಗೆ ಅಡ್ಡಿ: ಮಾಜಿ ಶಾಸಕ ವೆಂಕಟರಮಣಯ್ಯ ವಿರುದ್ಧ ಶಾಸಕ ಧೀರಜ್ ಮುನಿರಾಜು ಆಕ್ರೋಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…

6 hours ago

ಹಾಲಿನ ದರ 10 ಏರಿಕೆಗೆ ಆಗ್ರಹಿಸಿ ಸೆ.22ರಂದು ಬೃಹತ್ ಹೋರಾಟ

ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…

7 hours ago

ದೇಶದ ನಿರ್ಮಾಣದಲ್ಲಿ ಎಂಜಿನಿಯರ್‌ಗಳ ಪಾತ್ರ ಅನನ್ಯ – ಸಚಿವ ಎನ್. ಚಲುವರಾಯಸ್ವಾಮಿ ಬಣ್ಣನೆ

ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್‌ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…

1 day ago

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

1 day ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

1 day ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

1 day ago