ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಒಳ್ಳೆ ಹಣ್ಣು: ಕಾಂಗ್ರೆಸ್-ದಳ ಅಭ್ಯರ್ಥಿಗಳು ಕೊಳೆತ ಹಣ್ಣು: ಆಯ್ಕೆ ನಿಮ್ಮದು: ಸಿ.ಟಿ.ರವಿ

ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಕೊಳೆತ ಹಣ್ಣಿನಂತೆ, ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಒಳ್ಳೆಯ ಹಣ್ಣಿನಂತಿದ್ದಾರೆ, ಮಾರುಕಟ್ಟೆಯಲ್ಲಿ ಒಳ್ಳೆಯ ಹಣ್ಣನ್ನು ಆಯ್ದುಕೊಳ್ಳುವಂತೆ ಕ್ಷೇತ್ರಕ್ಕೆ ಒಳ್ಳೆಯ ಅಭ್ಯರ್ಥಿಯನ್ನು ಆಯ್ಕೆ‌ಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.

ತಾಲ್ಲೂಕಿನ ಮದುರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಬಿಜೆಪಿಯ ಅಭ್ಯರ್ಥಿ ಧೀರಜ್ ಮುನಿರಾಜು ಪರ ರೋಡ್ ಶೋ ನಡೆಸಿ ಮಾತನಾಡಿದರು. ಪಕ್ಕದ ಕ್ಷೆತ್ರದ ಶಾಸಕರಾದ ಎಸ್ ಆರ್ ವಿಶ್ವನಾಥ್ ಅವರು ಯಲಹಂಕವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಿದ್ದಾರೆ ಅದು ಅವರಿಂದ ಸಾಧ್ಯವಾಗುವುದಾದರೇ ದೊಡ್ಡಬಳ್ಳಾಪುರ ಕ್ಷೇತ್ರ ಏಕೆ ಅಭಿವೃದ್ದಿ ಹೊಂದಿಲ್ಲ ಎಂದು ಪ್ರಶ್ನಿಸುವ ಮೂಲಕ ಶಾಸಕರ ಕಾರ್ಯ ವೈಖರಿಯನ್ನು ಟೀಕಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಶಾಸಕರು ಯಾವ ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಬರಿ ಹಣ ಮಾಡುವುದಷ್ಟೆ ಕೆಲಸ ಅಲ್ಲಾ, ಅಭಿವೃದ್ದಿ ಕೆಲಸ ಮಾಡಿ ತೋರಿಸಬೇಕು, ಬರಿ ಬಾಯಿ ಮಾತಿಗೆ ಎಲ್ಲವನ್ನು ನಾನೇ ಮಾಡಿದ್ದು ಎಂದು ಹೇಳಿದ್ದಕ್ಕಿಂತ ಏನು ಮಾಡಿದ್ದಾರೆ ಎಂದು ತೋರಿಸಲಿ ಎಂದು ಸವಾಲ್ ಹಾಕಿದರು.

ಧೀರಜ್ ಮುನಿರಾಜು ಜನರ ನಡುವೆ ಇದ್ದೂ ಕೆಲಸ ಮಾಡುವ ಯುವಕ ಮೊದಲು ಆತನ ಕೆಲಸಗಳನ್ನು ಅನುಮಾನದಿಂದ ನೊಡುತ್ತಿದ್ದೆವು ಕ್ಷರಮೇಣ ಅವರ ಸಾಮಾಜಿಕ ಕೆಲಸಗಳನ್ನು ವಿಶ್ವಾಸ ಹಾಗೂ ಅಭಿಮಾನದಿಂದ ನೋಡಿದೆವು ನೀವು ಕೂಡ ಕಿರಿಯ ವಯಸ್ಸಿನ ನನ್ನ ತಮ್ಮನಂತಿರುವ ಧೀರಜ್ ಮುನಿರಾಜು ಅವರನ್ನು ಅಭಿಮಾನದಿಂದ ನೋಡಿ ಬೆಂಬಲಿಸಬೇಕು ಎಂದರು.

ದೊಡ್ಡತುಮಕೂರು ಕೆರೆ ಸಂರಕ್ಷಣೆ ಕುರಿತು ಈಗಾಗಲೇ ಮುಖ್ಯಮಂತ್ರಿ ಮಾತುಕೊಟ್ಟಿದ್ದಾರೆ ಸ್ಥಳೀಯ ಶಾಸಕರು ಕೆರೆ ಉಳಿಸುವ ಕೆಲಸ ಮಾಡಬೇಕಾಗಿತ್ತು ಆದರೇ ಹತ್ತು ವರ್ಷಗಳಲ್ಲಿ ಏನು ಮಾಡಿಲ್ಲ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳಿನಲ್ಲೆ ನಗರದ ನಾಗರಕೆರೆ ಸೇರಿದಂತೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.

ಬಳಿಕ ಮಾತನಾಡಿದ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್, ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರನ್ನು ನನ್ನ ಜೊತೆಯಲ್ಲೇ ಶಾಸನಸಭೆಗೆ ಕಳುಹಿಸಿಕೊಟ್ಟರೆ ದೊಡ್ಡಬಳ್ಳಾಪುರ ಅಭಿವೃದ್ದಿಗೆ ಇಬ್ಬರೂ ಸೇರಿ ಶ್ರಮಿಸುತ್ತೇವೆ, ನಮ್ಮ ಕ್ಷೇತ್ರದ ಗಡಿಭಾಗದ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಪಡಿಸಿದ್ದೇನೆ ಆದರೇ ದೊಡ್ಡಬಳ್ಳಾಪುರ ಕ್ಷೇತ್ರದ ರಸ್ತೆಗಳು ಹದಗೆಟ್ಟಿವೆ ಮಧುರೆ ವರೆಗಿನ ರಸ್ತೆ ಕಾಮಗಾರಿಗೆ ಸರ್ಕಾರದೊಂದಿಗೆ ಮಾತನಾಡಿ ಚಾಲನೆ ಕೊಡಿಸಿದ್ದೇನೆ ಎಂದರು.

ಜೆ.ನರಸಿಂಹಸ್ವಾಮಿ ಶಾಸಕರಾಗಿದ್ದಾಗ ಯಡಿಯೂರಪ್ಪ ಅವರ ಬಳಿ ಕರೆದೊಯ್ದು ದೊಡ್ಡಬಳ್ಳಾಪುರಕ್ಕೆ‌ 750 ಕೋಟಿ ರೂ. ಅನುದಾನ ಕೊಡಿಸಿದ್ದೆ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಿದ್ದವು ಆದರೇ ಕಾಂಗ್ರೆಸ್ ಶಾಸಕರು ಬಂದ ಮೇಲೆ ಶಾಸಕರ ಕಾರ್ಯ ವೈಖರಿ ನೀವೆ ಗಮನಿಸಿದ್ದೀರಿ ಅದನ್ನು ಪ್ರತ್ಯೇಕ ವಾಗಿ ಹೇಳಬೇಕಾಗಿಲ್ಲ.

ಈ ವೇಳೆ ಬಿಜೆಪಿ ಮುಖಂಡ ಕೆ.ಹೆಚ್ ಹನುಂಮತರಾಯಪ್ಪ, ಬಿಜೆಪಿ ಅಭ್ಯರ್ಥಿ ಧೀರಜ್‌ಮುನಿರಾಜ್, ಬಿ.ಸಿ.ನಾರಾಯಣಸ್ವಾಮಿ, ತಿ.ರಂಗರಾಜು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮತಯಾಚನೆ‌ ಮಾಡಿದರು.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

8 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

3 days ago