ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಕೊಳೆತ ಹಣ್ಣಿನಂತೆ, ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಒಳ್ಳೆಯ ಹಣ್ಣಿನಂತಿದ್ದಾರೆ, ಮಾರುಕಟ್ಟೆಯಲ್ಲಿ ಒಳ್ಳೆಯ ಹಣ್ಣನ್ನು ಆಯ್ದುಕೊಳ್ಳುವಂತೆ ಕ್ಷೇತ್ರಕ್ಕೆ ಒಳ್ಳೆಯ ಅಭ್ಯರ್ಥಿಯನ್ನು ಆಯ್ಕೆಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.
ತಾಲ್ಲೂಕಿನ ಮದುರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಬಿಜೆಪಿಯ ಅಭ್ಯರ್ಥಿ ಧೀರಜ್ ಮುನಿರಾಜು ಪರ ರೋಡ್ ಶೋ ನಡೆಸಿ ಮಾತನಾಡಿದರು. ಪಕ್ಕದ ಕ್ಷೆತ್ರದ ಶಾಸಕರಾದ ಎಸ್ ಆರ್ ವಿಶ್ವನಾಥ್ ಅವರು ಯಲಹಂಕವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಿದ್ದಾರೆ ಅದು ಅವರಿಂದ ಸಾಧ್ಯವಾಗುವುದಾದರೇ ದೊಡ್ಡಬಳ್ಳಾಪುರ ಕ್ಷೇತ್ರ ಏಕೆ ಅಭಿವೃದ್ದಿ ಹೊಂದಿಲ್ಲ ಎಂದು ಪ್ರಶ್ನಿಸುವ ಮೂಲಕ ಶಾಸಕರ ಕಾರ್ಯ ವೈಖರಿಯನ್ನು ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಶಾಸಕರು ಯಾವ ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಬರಿ ಹಣ ಮಾಡುವುದಷ್ಟೆ ಕೆಲಸ ಅಲ್ಲಾ, ಅಭಿವೃದ್ದಿ ಕೆಲಸ ಮಾಡಿ ತೋರಿಸಬೇಕು, ಬರಿ ಬಾಯಿ ಮಾತಿಗೆ ಎಲ್ಲವನ್ನು ನಾನೇ ಮಾಡಿದ್ದು ಎಂದು ಹೇಳಿದ್ದಕ್ಕಿಂತ ಏನು ಮಾಡಿದ್ದಾರೆ ಎಂದು ತೋರಿಸಲಿ ಎಂದು ಸವಾಲ್ ಹಾಕಿದರು.
ದೊಡ್ಡತುಮಕೂರು ಕೆರೆ ಸಂರಕ್ಷಣೆ ಕುರಿತು ಈಗಾಗಲೇ ಮುಖ್ಯಮಂತ್ರಿ ಮಾತುಕೊಟ್ಟಿದ್ದಾರೆ ಸ್ಥಳೀಯ ಶಾಸಕರು ಕೆರೆ ಉಳಿಸುವ ಕೆಲಸ ಮಾಡಬೇಕಾಗಿತ್ತು ಆದರೇ ಹತ್ತು ವರ್ಷಗಳಲ್ಲಿ ಏನು ಮಾಡಿಲ್ಲ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳಿನಲ್ಲೆ ನಗರದ ನಾಗರಕೆರೆ ಸೇರಿದಂತೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.
ಬಳಿಕ ಮಾತನಾಡಿದ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್, ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರನ್ನು ನನ್ನ ಜೊತೆಯಲ್ಲೇ ಶಾಸನಸಭೆಗೆ ಕಳುಹಿಸಿಕೊಟ್ಟರೆ ದೊಡ್ಡಬಳ್ಳಾಪುರ ಅಭಿವೃದ್ದಿಗೆ ಇಬ್ಬರೂ ಸೇರಿ ಶ್ರಮಿಸುತ್ತೇವೆ, ನಮ್ಮ ಕ್ಷೇತ್ರದ ಗಡಿಭಾಗದ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಪಡಿಸಿದ್ದೇನೆ ಆದರೇ ದೊಡ್ಡಬಳ್ಳಾಪುರ ಕ್ಷೇತ್ರದ ರಸ್ತೆಗಳು ಹದಗೆಟ್ಟಿವೆ ಮಧುರೆ ವರೆಗಿನ ರಸ್ತೆ ಕಾಮಗಾರಿಗೆ ಸರ್ಕಾರದೊಂದಿಗೆ ಮಾತನಾಡಿ ಚಾಲನೆ ಕೊಡಿಸಿದ್ದೇನೆ ಎಂದರು.
ಈ ವೇಳೆ ಬಿಜೆಪಿ ಮುಖಂಡ ಕೆ.ಹೆಚ್ ಹನುಂಮತರಾಯಪ್ಪ, ಬಿಜೆಪಿ ಅಭ್ಯರ್ಥಿ ಧೀರಜ್ಮುನಿರಾಜ್, ಬಿ.ಸಿ.ನಾರಾಯಣಸ್ವಾಮಿ, ತಿ.ರಂಗರಾಜು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…