ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಕೊಳೆತ ಹಣ್ಣಿನಂತೆ, ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಒಳ್ಳೆಯ ಹಣ್ಣಿನಂತಿದ್ದಾರೆ, ಮಾರುಕಟ್ಟೆಯಲ್ಲಿ ಒಳ್ಳೆಯ ಹಣ್ಣನ್ನು ಆಯ್ದುಕೊಳ್ಳುವಂತೆ ಕ್ಷೇತ್ರಕ್ಕೆ ಒಳ್ಳೆಯ ಅಭ್ಯರ್ಥಿಯನ್ನು ಆಯ್ಕೆಮಾಡುವುದು ನಮ್ಮೆಲ್ಲರ ಕರ್ತವ್ಯ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.
ತಾಲ್ಲೂಕಿನ ಮದುರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಬಿಜೆಪಿಯ ಅಭ್ಯರ್ಥಿ ಧೀರಜ್ ಮುನಿರಾಜು ಪರ ರೋಡ್ ಶೋ ನಡೆಸಿ ಮಾತನಾಡಿದರು. ಪಕ್ಕದ ಕ್ಷೆತ್ರದ ಶಾಸಕರಾದ ಎಸ್ ಆರ್ ವಿಶ್ವನಾಥ್ ಅವರು ಯಲಹಂಕವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಿದ್ದಾರೆ ಅದು ಅವರಿಂದ ಸಾಧ್ಯವಾಗುವುದಾದರೇ ದೊಡ್ಡಬಳ್ಳಾಪುರ ಕ್ಷೇತ್ರ ಏಕೆ ಅಭಿವೃದ್ದಿ ಹೊಂದಿಲ್ಲ ಎಂದು ಪ್ರಶ್ನಿಸುವ ಮೂಲಕ ಶಾಸಕರ ಕಾರ್ಯ ವೈಖರಿಯನ್ನು ಟೀಕಿಸಿದರು.
ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಶಾಸಕರು ಯಾವ ಅಭಿವೃದ್ಧಿ ಕೆಲಸ ಮಾಡಿದ್ದಾರೆ, ಬರಿ ಹಣ ಮಾಡುವುದಷ್ಟೆ ಕೆಲಸ ಅಲ್ಲಾ, ಅಭಿವೃದ್ದಿ ಕೆಲಸ ಮಾಡಿ ತೋರಿಸಬೇಕು, ಬರಿ ಬಾಯಿ ಮಾತಿಗೆ ಎಲ್ಲವನ್ನು ನಾನೇ ಮಾಡಿದ್ದು ಎಂದು ಹೇಳಿದ್ದಕ್ಕಿಂತ ಏನು ಮಾಡಿದ್ದಾರೆ ಎಂದು ತೋರಿಸಲಿ ಎಂದು ಸವಾಲ್ ಹಾಕಿದರು.
ದೊಡ್ಡತುಮಕೂರು ಕೆರೆ ಸಂರಕ್ಷಣೆ ಕುರಿತು ಈಗಾಗಲೇ ಮುಖ್ಯಮಂತ್ರಿ ಮಾತುಕೊಟ್ಟಿದ್ದಾರೆ ಸ್ಥಳೀಯ ಶಾಸಕರು ಕೆರೆ ಉಳಿಸುವ ಕೆಲಸ ಮಾಡಬೇಕಾಗಿತ್ತು ಆದರೇ ಹತ್ತು ವರ್ಷಗಳಲ್ಲಿ ಏನು ಮಾಡಿಲ್ಲ.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಒಂದು ತಿಂಗಳಿನಲ್ಲೆ ನಗರದ ನಾಗರಕೆರೆ ಸೇರಿದಂತೆ ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು.
ಬಳಿಕ ಮಾತನಾಡಿದ ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್, ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಅವರನ್ನು ನನ್ನ ಜೊತೆಯಲ್ಲೇ ಶಾಸನಸಭೆಗೆ ಕಳುಹಿಸಿಕೊಟ್ಟರೆ ದೊಡ್ಡಬಳ್ಳಾಪುರ ಅಭಿವೃದ್ದಿಗೆ ಇಬ್ಬರೂ ಸೇರಿ ಶ್ರಮಿಸುತ್ತೇವೆ, ನಮ್ಮ ಕ್ಷೇತ್ರದ ಗಡಿಭಾಗದ ಎಲ್ಲಾ ರಸ್ತೆಗಳನ್ನು ಅಭಿವೃದ್ದಿ ಪಡಿಸಿದ್ದೇನೆ ಆದರೇ ದೊಡ್ಡಬಳ್ಳಾಪುರ ಕ್ಷೇತ್ರದ ರಸ್ತೆಗಳು ಹದಗೆಟ್ಟಿವೆ ಮಧುರೆ ವರೆಗಿನ ರಸ್ತೆ ಕಾಮಗಾರಿಗೆ ಸರ್ಕಾರದೊಂದಿಗೆ ಮಾತನಾಡಿ ಚಾಲನೆ ಕೊಡಿಸಿದ್ದೇನೆ ಎಂದರು.
ಈ ವೇಳೆ ಬಿಜೆಪಿ ಮುಖಂಡ ಕೆ.ಹೆಚ್ ಹನುಂಮತರಾಯಪ್ಪ, ಬಿಜೆಪಿ ಅಭ್ಯರ್ಥಿ ಧೀರಜ್ಮುನಿರಾಜ್, ಬಿ.ಸಿ.ನಾರಾಯಣಸ್ವಾಮಿ, ತಿ.ರಂಗರಾಜು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಮತಯಾಚನೆ ಮಾಡಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…