2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಕ್ಯೂಆರ್ ಕೋಡ್ ಉಳ್ಳ ನವ ದೊಡ್ಡಬಳ್ಳಾಪುರ ಹೆಸರಿರುವ ಕೂಪನ್ ವಿತರಣೆ.
ಕೂಪನ್ ವಿತರಣೆ ಮಾಡುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿ ಮೂವರನ್ನು ತಡೆದ ಗ್ರಾಮಸ್ಥರು ಎಫ್.ಎಸ್.ಟಿ ತಂಡದ ವಶಕ್ಕೆ ನೀಡಿರುವ ಘಟನೆ ತಾಲೂಕಿನ ಹೊಸಹಳ್ಳಿ ಗ್ರಾಮದ ಬಸ್ ನಿಲ್ದಾಣ ಬಳಿ ನಡೆದಿದೆ.
ವಶಕ್ಕೆ ಪಡೆದ ಮೂರು ಮಂದಿಯನ್ನು ಮಂಗಳೂರು ಮೂಲದವರು ಎಂದು ಗುರುತಿಸಲಾಗಿದೆ, ಹಲವು ತಂಡಗಳಾಗಿ, ತಾಲೂಕಿನಾದ್ಯಂತ ಗ್ರಾಮಗಳಿಗೆ ತೆರಳಿ RSS ವತಿಯಿಂದ ಬಂದಿದ್ದೇವೆ, ಬಿಜೆಪಿ ಅಭ್ಯರ್ಥಿ ಕಡೆಯವರು ಎನ್ನುತ್ತ, ಮತ ಚೀಟಿಯಲ್ಲಿನ ಮಾಹಿತಿಯುಳ್ಳ ಹಾಗೂ ಕ್ಯೂಆರ್ ಕೋಡ್ ಹೊಂದಿರುವ ನವ ದೊಡ್ಡಬಳ್ಳಾಪುರ ಹೆಸರಿನ ಕೂಪನ್ ವಿತರಿಸುತ್ತಿದ್ದರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸ್ಥಳಕ್ಕೆ ದೌಡಾಯಿಸಿದ ಡಿ.ರಾಜೇಶ್ವರಿ ನೇತೃತ್ವದ ಎಫ್.ಎಸ್.ಟಿ ತಂಡದ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ಹೊಸಹಳ್ಳಿ ಪೊಲೀಸ್ ಠಾಣೆಗೆ ಕರೆದೊಯ್ತಿದ್ದಾರೆ.
ಬಂಧಿತರಿಂದ ಮತದಾರ ಪಟ್ಟಿ, ಹಾಗೂ ತಾಲೂಕಿನಾಧ್ಯಂತ ಕ್ಯೂಆರ್ ಕೋಡ್ ಕೂಪನ್ ವಶಕ್ಕೆ ಪಡೆಯಲಾಗಿದೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…