ಬಿಜೆಪಿ ಅಭ್ಯರ್ಥಿ ಪರ ಕ್ಯೂಆರ್ ಕೋಡ್ ನವ ದೊಡ್ಡಬಳ್ಳಾಪುರ ಹೆಸರಿನ ಕೂಪನ್ ವಿತರಣೆ ಆರೋಪ: ಮೂವರು ಎಫ್ ಎಸ್ ಟಿ ತಂಡದ ವಶಕ್ಕೆ

2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಕ್ಯೂಆರ್ ಕೋಡ್ ಉಳ್ಳ ನವ ದೊಡ್ಡಬಳ್ಳಾಪುರ ಹೆಸರಿರುವ ಕೂಪನ್ ವಿತರಣೆ.

ಕೂಪನ್ ವಿತರಣೆ ಮಾಡುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿ ಮೂವರನ್ನು ತಡೆದ ಗ್ರಾಮಸ್ಥರು ಎಫ್.ಎಸ್.ಟಿ ತಂಡದ ವಶಕ್ಕೆ ನೀಡಿರುವ ಘಟನೆ ತಾಲೂಕಿನ ಹೊಸಹಳ್ಳಿ ಗ್ರಾಮದ ಬಸ್ ನಿಲ್ದಾಣ ಬಳಿ ನಡೆದಿದೆ.

ವಶಕ್ಕೆ ಪಡೆದ ಮೂರು ಮಂದಿಯನ್ನು ಮಂಗಳೂರು ಮೂಲದವರು ಎಂದು ಗುರುತಿಸಲಾಗಿದೆ, ಹಲವು ತಂಡಗಳಾಗಿ, ತಾಲೂಕಿನಾದ್ಯಂತ ಗ್ರಾಮಗಳಿಗೆ ತೆರಳಿ RSS ವತಿಯಿಂದ ಬಂದಿದ್ದೇವೆ, ಬಿಜೆಪಿ ಅಭ್ಯರ್ಥಿ ಕಡೆಯವರು ಎನ್ನುತ್ತ, ಮತ ಚೀಟಿಯಲ್ಲಿನ ಮಾಹಿತಿಯುಳ್ಳ ಹಾಗೂ ಕ್ಯೂಆರ್ ಕೋಡ್ ಹೊಂದಿರುವ ನವ ದೊಡ್ಡಬಳ್ಳಾಪುರ ಹೆಸರಿನ ಕೂಪನ್ ವಿತರಿಸುತ್ತಿದ್ದರೆಂದು‌ ಗ್ರಾಮಸ್ಥರು ಆರೋಪಿಸಿದ್ದಾರೆ.

ಸ್ಥಳಕ್ಕೆ ದೌಡಾಯಿಸಿದ ಡಿ.ರಾಜೇಶ್ವರಿ ನೇತೃತ್ವದ ಎಫ್.ಎಸ್.ಟಿ ತಂಡದ ಅಧಿಕಾರಿಗಳು ಆರೋಪಿಯನ್ನು ವಶಕ್ಕೆ ಪಡೆದು ಹೊಸಹಳ್ಳಿ ಪೊಲೀಸ್ ಠಾಣೆಗೆ ಕರೆದೊಯ್ತಿದ್ದಾರೆ.

ಬಂಧಿತರಿಂದ ಮತದಾರ ಪಟ್ಟಿ, ಹಾಗೂ ತಾಲೂಕಿನಾಧ್ಯಂತ ಕ್ಯೂಆರ್ ಕೋಡ್ ಕೂಪನ್ ವಶಕ್ಕೆ ಪಡೆಯಲಾಗಿದೆ.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

30 minutes ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

4 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

8 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

22 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

22 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

23 hours ago