ಅತಿ ಹೆಚ್ಚು ಯುವಕರನ್ನು ಹೊಂದಿರುವ ದೇಶ ಎಂದರೆ ಭಾರತ, ಇಲ್ಲಿನ ಯುವಕರು ಬಿಜೆಪಿ ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಶೇ 70 ರಷ್ಟು ಬಿಜೆಪಿಗೆ ಮತ ಹಾಕುತ್ತಿದ್ದಾರೆ. ನಮ್ಮ ದೇಶ ಜಿಡಿಪಿಯಲ್ಲಿ ಬ್ರಿಟನ್ ದೇಶವನ್ನು ಹಿಂದಿಕ್ಕಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯಿಂದ ಇದು ಸಾಧ್ಯವಾಗಿದೆ ಎಂದು ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ ಸಂಚಾಲಕ ಅಂಬರೀಶ್ ಗೌಡ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠ ಉತ್ತಮ ಸ್ಥಾನದಲ್ಲಿದೆ, ಅಸಂಘಟಿತ ಕಾರ್ಮಿಕರ ಸಮಸ್ಯೆ, ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ ಎಂದರು. ಕಾರ್ಮಿಕ ವಲಯದಲ್ಲಿ ಕಾರ್ಮಿಕರು ಸಾಕಷ್ಟು ಸಮಸ್ಯೆಗಳಿಗೆ ಗುರಿಯಾಗುತ್ತಿದ್ದು, ಅವರಿಗೆ ಸಿಗಬೇಕಾದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ..ಮುಂದಿನ ದಿನಗಳಲ್ಲಿ ಬಿಜೆಪಿ ಅಸಂಘಟಿತ ಕಾರ್ಮಿಕಪ್ರಕೋಷ್ಠದಿಂದ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನ ಮಾಡುತ್ತೇವೆ, ಇದರ ಜೊತೆ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ತಿಳಿಸಿದರು..
ಇದೆ ವೇಳೆ ದೇವನಹಳ್ಳಿ ನಗರ ಅಸಂಘಟಿತ ಕಾರ್ಮಿಕರ ಪ್ರಕೋಷ್ಠ ಸಂಚಾಲಕ ಸುರೇಶ್ ಆಚಾರ್, ಬೆ.ಗ್ರಾ. ಅಸಂಗಟಿತ ಕಾರ್ಮಿಕರ ಪ್ರಕೋಷ್ಟ ಸಮಿತಿ ಸದಸ್ಯ ಗಜೇಂದ್ರ ಎಸ್ ಎಸ್ , ಲಿಕಿತ್ ಕುಮಾರ್, ಸಂತೋಷ್ ಎಸ್ , ಉಲ್ಲಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…
ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…