ಅತಿ ಹೆಚ್ಚು ಯುವಕರನ್ನು ಹೊಂದಿರುವ ದೇಶ ಎಂದರೆ ಭಾರತ, ಇಲ್ಲಿನ ಯುವಕರು ಬಿಜೆಪಿ ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಶೇ 70 ರಷ್ಟು ಬಿಜೆಪಿಗೆ ಮತ ಹಾಕುತ್ತಿದ್ದಾರೆ. ನಮ್ಮ ದೇಶ ಜಿಡಿಪಿಯಲ್ಲಿ ಬ್ರಿಟನ್ ದೇಶವನ್ನು ಹಿಂದಿಕ್ಕಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯಿಂದ ಇದು ಸಾಧ್ಯವಾಗಿದೆ ಎಂದು ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ ಸಂಚಾಲಕ ಅಂಬರೀಶ್ ಗೌಡ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಜೆಪಿ ಅಸಂಘಟಿತ ಕಾರ್ಮಿಕರ ಪ್ರಕೋಷ್ಠ ಉತ್ತಮ ಸ್ಥಾನದಲ್ಲಿದೆ, ಅಸಂಘಟಿತ ಕಾರ್ಮಿಕರ ಸಮಸ್ಯೆ, ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ ಎಂದರು. ಕಾರ್ಮಿಕ ವಲಯದಲ್ಲಿ ಕಾರ್ಮಿಕರು ಸಾಕಷ್ಟು ಸಮಸ್ಯೆಗಳಿಗೆ ಗುರಿಯಾಗುತ್ತಿದ್ದು, ಅವರಿಗೆ ಸಿಗಬೇಕಾದ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ..ಮುಂದಿನ ದಿನಗಳಲ್ಲಿ ಬಿಜೆಪಿ ಅಸಂಘಟಿತ ಕಾರ್ಮಿಕಪ್ರಕೋಷ್ಠದಿಂದ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನ ಮಾಡುತ್ತೇವೆ, ಇದರ ಜೊತೆ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ತಿಳಿಸಿದರು..
ಇದೆ ವೇಳೆ ದೇವನಹಳ್ಳಿ ನಗರ ಅಸಂಘಟಿತ ಕಾರ್ಮಿಕರ ಪ್ರಕೋಷ್ಠ ಸಂಚಾಲಕ ಸುರೇಶ್ ಆಚಾರ್, ಬೆ.ಗ್ರಾ. ಅಸಂಗಟಿತ ಕಾರ್ಮಿಕರ ಪ್ರಕೋಷ್ಟ ಸಮಿತಿ ಸದಸ್ಯ ಗಜೇಂದ್ರ ಎಸ್ ಎಸ್ , ಲಿಕಿತ್ ಕುಮಾರ್, ಸಂತೋಷ್ ಎಸ್ , ಉಲ್ಲಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…