Categories: ಬೆಳಗಾವಿ

ಬಿಜೆಪಿ ಎಸ್‍ಸಿ ಮೋರ್ಚಾ ಮುಖಂಡ ಪೃಥ್ವಿ ಸಿಂಗ್ ಮೇಲೆ ಹಲ್ಲೆ ಪ್ರಕರಣ- ಆರೋಪಿತರನ್ನು ಬಂಧಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಗಂಭೀರ ಹಲ್ಲೆಗೊಳಗಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ಎಸ್‍ಸಿ ಮೋರ್ಚಾ ಮುಖಂಡ ಪೃಥ್ವಿ ಸಿಂಗ್ ಅವರನ್ನು ಕಂಡು ಆರೋಗ್ಯ ವಿಚಾರಿಸಿದ ಬಿಜೆಪಿ‌ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ.

ನಂತರ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರ ಮೇಲಿನ ಕಾಂಗ್ರೆಸ್ ಗೂಂಡಾಗಿರಿ ವಿಪರೀತಕ್ಕೆ ಹೋಗುತ್ತಿದ್ದು, ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಹೋದರ ಎಂಎಲ್‍ಸಿ ಚನ್ನರಾಜ್ ಹಟ್ಟಿಹೊಳಿ, ಅವರ ಗನ್‍ಮ್ಯಾನ್ ಮತ್ತು ಇತರ ಸಹಚರರಿಂದ ಬಿಜೆಪಿ ಎಸ್‍ಸಿ ಮೋರ್ಚಾ ಮುಖಂಡ ಪೃಥ್ವಿ ಸಿಂಗ್ ಮೇಲೆ ಹಲ್ಲೆ ಆಗಿದೆ ಎಂದು ಆರೋಪಿಸಿದರು.

ಈ ಪ್ರಕರಣವನ್ನು ಪೋಲಿಸರು ಪ್ರಭಾವಗಳಿಗೆ ಮಣಿಯದೇ ಗಂಭೀರವಾಗಿ ಪರಿಗಣಿಸಿ ಆರೋಪಿತರನ್ನು ಬಂಧಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸುತ್ತೇನೆ. ಅಧಿಕಾರ ಬಲದ ಮದದಿಂದ ಬೆಳಗಾವಿ ಭಾಗದಲ್ಲಿ ಗೂಂಡಾಗಿರಿ ಪ್ರಕರಣಗಳು ಪೊಲೀಸ್ ಠಾಣೆಗಳಲ್ಲಿ ದಾಖಲಾಗುತ್ತಿಲ್ಲ ಎಂಬ ಆರೋಪವೂ ಕೇಳಿ ಬರುತ್ತಿದ್ದು, ಈ ಸಂಬಂಧ ಗೃಹ ಸಚಿವರು ಜಾಣ ಕುರುಡು ಪ್ರದರ್ಶಿಸಿದರೆ, ಬಿಜೆಪಿಯ ಹೋರಾಟದ ಬಿಸಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸ ಬಯಸುತ್ತೇನೆ ಎಂದು ತಿಳಿಸಿದರು.

ಕಾಂಗ್ರೆಸ್ ಸರ್ಕಾರದಲ್ಲಿ ರೈತರು, ಹೋರಾಟಗಾರರು, ದಲಿತರು ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಗೂಂಡಾಗಳ ದೌರ್ಜನ್ಯದ ಜತೆಗೇ ಪೊಲೀಸರ ದಬ್ಬಾಳಿಕೆಯೂ ಹೆಚ್ಚುತ್ತಿದ್ದು ಈ ಸಂಬಂಧ ನಮ್ಮ ಪಕ್ಷ ಸದನದ ಒಳಗೆ ಹೊರಗೆ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಹೇಳಿದರು.

ಸದ್ಯ ಹಲ್ಲೆಗೊಳಗಾಗಿರುವ ಪೃಥ್ವಿ ಸಿಂಗ್  ಸ್ಥಳೀಯ ಪೊಲೀಸ್ ವ್ಯವಸ್ಥೆ ಬಗ್ಗೆ ವಿಶ್ವಾಸ ಕಳೆದುಕೊಂಡಿದ್ದು, ಆತಂಕದಲ್ಲಿರುವ ಅವರ ಕುಟುಂಬಕ್ಕೆ ಸೂಕ್ತ ರಕ್ಷಣೆ ಕೊಡಿಸಲು ಗೃಹ ಇಲಾಖೆಯ ಉನ್ನತ ಅಧಿಕಾರಿಗಳು ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸುವೆ ಎಂದರು.

ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾಧ್ಯಕ್ಷರಾದ ಶ್ರೀ ಸಂಜಯ್ ಪಾಟೀಲ್, ಶಾಸಕರಾದ ಅಭಯ್ ಪಾಟೀಲ್,ಮಾಜಿ ಶಾಸಕರಾದ ಶ್ರೀ ಅನಿಲ್ ಬೆನಕೆ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಹಾಂತೇಶ ಕವಟಗಿಮಠ, ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ಛಲವಾದಿ ನಾರಾಯಣ ಸ್ವಾಮಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳ ತ್ವರಿತ ವಿಲೇವಾರಿ ಕುರಿತಂತೆ ಕಂದಾಯ ಆಯುಕ್ತರ ಹೊಸ ಆದೇಶ

ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತನೆ ಮಾಡುವ ಪ್ರಕ್ರಿಯೆಯನ್ನು ಸರಳೀಕರಿಸುವ ಉದ್ದೇಶದಿಂದ ಅಫಿಡವಿಟ್ ಆಧಾರಿತ ಭೂಪರಿವರ್ತನೆ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿ…

4 minutes ago

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

8 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

8 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

21 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

22 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

22 hours ago