ಸಿಎಂ ಹುದ್ದೆಯಿಂದ ಹಿಡಿದು ಪಕ್ಷದ ಟಿಕೆಟ್ ವರೆಗೆ ಎಲ್ಲವನ್ನೂ ಮಾರಾಟಕ್ಕಿಟ್ಟಿರುವ ಬಿಜೆಪಿ ಒಂಥರಾ ಚೋರ್ ಬಜಾರ್ ಇದ್ದಂತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬಿಜೆಪಿ ಕಚೇರಿ ಎಂದರೆ ವಂಚಕರ ಅಡ್ಡೆ ಎಂಬುದಕ್ಕೆ ಮತ್ತೊಂದು ಟಿಕೆಟ್ ವಂಚನೆ ಪ್ರಕರಣ ಹೊರಬಂದಿರುವುದೇ ಸಾಕ್ಷಿ. ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ಅಕ್ರಮವಾದರೆ, ಪಕ್ಷದಲ್ಲಿ ಟಿಕೆಟ್ ಕಮಿಷನ್ ಅಕ್ರಮ, ಈ ಕಮಿಷನ್ ಸೋಂಕು ಬಿಜೆಪಿಯಿಂದ ಸರ್ಕಾರಕ್ಕೆ ಅಂಟಿದೆಯೋ? ಅಥವಾ ಬಿಜೆಪಿ ಸರ್ಕಾರದಿಂದ ಪಕ್ಷಕ್ಕೆ ಅಂಟಿದೆಯೋ? ಕಂಡವರನ್ನು ಕಾಣೆಯಾಗಿದ್ದಾರೆ ಎನ್ನುವ ಕುರುಡು ಬಿಜೆಪಿ ತಮ್ಮ ಪಕ್ಷದ ವಸೂಲಿ ಅಕ್ರಮಗಳ ಬಗ್ಗೆಯೂ ಕುರುಡಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಸೋಲು ಖಾತರಿಯಾಗುತ್ತಿದ್ದಂತೆಯೇ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಹೊಸಬರಿಗೆ ಮಣೆ ಹಾಕುವ “ಗುಜರಾತ್ ಮಾದರಿ” ಎಂದು ಬಣ್ಣ ಬದಲಿಸಿದ್ದು ಬಹುಶಃ ಟಿಕೆಟ್ ಮಾರಾಟಕ್ಕಾಗಿಯೇ ಇರಬಹುದು.
ಈ ಬಗ್ಗೆ “ಸಂತೋಷ”ದಿಂದಿರುವವರೇ ಸ್ಪಷ್ಟಪಡಿಸಬೇಕು. ಕಮಿಷನ್ ಎನ್ನುವುದು ಬಿಜೆಪಿಯ ಜೀವಾಳ, ಗುತ್ತಿಗೆದಾರರೇ ಆಗಿರಲಿ, ಟಿಕೆಟ್ ಆಕಾಂಕ್ಷಿಗಳೇ ಆಗಿರಲಿ, ಕಮಿಷನ್ ನೀಡಲೇಬೇಕು. ಏಕೆಂದರೆ ಜಗನ್ನಾಥ ಭವನ ಎಂಬುದು ‘ಕೇಶವ ಕೃಪಾ’ ಪೋಷಿತ ಸುಂಕ ವಸೂಲಿ ಮಾಡುವ ‘ಸುಂಕದ ಕಟ್ಟೆ’ ಎಂದಿದ್ದಾರೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…