ಸಿಎಂ ಹುದ್ದೆಯಿಂದ ಹಿಡಿದು ಪಕ್ಷದ ಟಿಕೆಟ್ ವರೆಗೆ ಎಲ್ಲವನ್ನೂ ಮಾರಾಟಕ್ಕಿಟ್ಟಿರುವ ಬಿಜೆಪಿ ಒಂಥರಾ ಚೋರ್ ಬಜಾರ್ ಇದ್ದಂತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬಿಜೆಪಿ ಕಚೇರಿ ಎಂದರೆ ವಂಚಕರ ಅಡ್ಡೆ ಎಂಬುದಕ್ಕೆ ಮತ್ತೊಂದು ಟಿಕೆಟ್ ವಂಚನೆ ಪ್ರಕರಣ ಹೊರಬಂದಿರುವುದೇ ಸಾಕ್ಷಿ. ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ಅಕ್ರಮವಾದರೆ, ಪಕ್ಷದಲ್ಲಿ ಟಿಕೆಟ್ ಕಮಿಷನ್ ಅಕ್ರಮ, ಈ ಕಮಿಷನ್ ಸೋಂಕು ಬಿಜೆಪಿಯಿಂದ ಸರ್ಕಾರಕ್ಕೆ ಅಂಟಿದೆಯೋ? ಅಥವಾ ಬಿಜೆಪಿ ಸರ್ಕಾರದಿಂದ ಪಕ್ಷಕ್ಕೆ ಅಂಟಿದೆಯೋ? ಕಂಡವರನ್ನು ಕಾಣೆಯಾಗಿದ್ದಾರೆ ಎನ್ನುವ ಕುರುಡು ಬಿಜೆಪಿ ತಮ್ಮ ಪಕ್ಷದ ವಸೂಲಿ ಅಕ್ರಮಗಳ ಬಗ್ಗೆಯೂ ಕುರುಡಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಸೋಲು ಖಾತರಿಯಾಗುತ್ತಿದ್ದಂತೆಯೇ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಹೊಸಬರಿಗೆ ಮಣೆ ಹಾಕುವ “ಗುಜರಾತ್ ಮಾದರಿ” ಎಂದು ಬಣ್ಣ ಬದಲಿಸಿದ್ದು ಬಹುಶಃ ಟಿಕೆಟ್ ಮಾರಾಟಕ್ಕಾಗಿಯೇ ಇರಬಹುದು.
ಈ ಬಗ್ಗೆ “ಸಂತೋಷ”ದಿಂದಿರುವವರೇ ಸ್ಪಷ್ಟಪಡಿಸಬೇಕು. ಕಮಿಷನ್ ಎನ್ನುವುದು ಬಿಜೆಪಿಯ ಜೀವಾಳ, ಗುತ್ತಿಗೆದಾರರೇ ಆಗಿರಲಿ, ಟಿಕೆಟ್ ಆಕಾಂಕ್ಷಿಗಳೇ ಆಗಿರಲಿ, ಕಮಿಷನ್ ನೀಡಲೇಬೇಕು. ಏಕೆಂದರೆ ಜಗನ್ನಾಥ ಭವನ ಎಂಬುದು ‘ಕೇಶವ ಕೃಪಾ’ ಪೋಷಿತ ಸುಂಕ ವಸೂಲಿ ಮಾಡುವ ‘ಸುಂಕದ ಕಟ್ಟೆ’ ಎಂದಿದ್ದಾರೆ.
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…