ಸಿಎಂ ಹುದ್ದೆಯಿಂದ ಹಿಡಿದು ಪಕ್ಷದ ಟಿಕೆಟ್ ವರೆಗೆ ಎಲ್ಲವನ್ನೂ ಮಾರಾಟಕ್ಕಿಟ್ಟಿರುವ ಬಿಜೆಪಿ ಒಂಥರಾ ಚೋರ್ ಬಜಾರ್ ಇದ್ದಂತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬಿಜೆಪಿ ಕಚೇರಿ ಎಂದರೆ ವಂಚಕರ ಅಡ್ಡೆ ಎಂಬುದಕ್ಕೆ ಮತ್ತೊಂದು ಟಿಕೆಟ್ ವಂಚನೆ ಪ್ರಕರಣ ಹೊರಬಂದಿರುವುದೇ ಸಾಕ್ಷಿ. ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ಅಕ್ರಮವಾದರೆ, ಪಕ್ಷದಲ್ಲಿ ಟಿಕೆಟ್ ಕಮಿಷನ್ ಅಕ್ರಮ, ಈ ಕಮಿಷನ್ ಸೋಂಕು ಬಿಜೆಪಿಯಿಂದ ಸರ್ಕಾರಕ್ಕೆ ಅಂಟಿದೆಯೋ? ಅಥವಾ ಬಿಜೆಪಿ ಸರ್ಕಾರದಿಂದ ಪಕ್ಷಕ್ಕೆ ಅಂಟಿದೆಯೋ? ಕಂಡವರನ್ನು ಕಾಣೆಯಾಗಿದ್ದಾರೆ ಎನ್ನುವ ಕುರುಡು ಬಿಜೆಪಿ ತಮ್ಮ ಪಕ್ಷದ ವಸೂಲಿ ಅಕ್ರಮಗಳ ಬಗ್ಗೆಯೂ ಕುರುಡಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಸೋಲು ಖಾತರಿಯಾಗುತ್ತಿದ್ದಂತೆಯೇ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಹೊಸಬರಿಗೆ ಮಣೆ ಹಾಕುವ “ಗುಜರಾತ್ ಮಾದರಿ” ಎಂದು ಬಣ್ಣ ಬದಲಿಸಿದ್ದು ಬಹುಶಃ ಟಿಕೆಟ್ ಮಾರಾಟಕ್ಕಾಗಿಯೇ ಇರಬಹುದು.
ಈ ಬಗ್ಗೆ “ಸಂತೋಷ”ದಿಂದಿರುವವರೇ ಸ್ಪಷ್ಟಪಡಿಸಬೇಕು. ಕಮಿಷನ್ ಎನ್ನುವುದು ಬಿಜೆಪಿಯ ಜೀವಾಳ, ಗುತ್ತಿಗೆದಾರರೇ ಆಗಿರಲಿ, ಟಿಕೆಟ್ ಆಕಾಂಕ್ಷಿಗಳೇ ಆಗಿರಲಿ, ಕಮಿಷನ್ ನೀಡಲೇಬೇಕು. ಏಕೆಂದರೆ ಜಗನ್ನಾಥ ಭವನ ಎಂಬುದು ‘ಕೇಶವ ಕೃಪಾ’ ಪೋಷಿತ ಸುಂಕ ವಸೂಲಿ ಮಾಡುವ ‘ಸುಂಕದ ಕಟ್ಟೆ’ ಎಂದಿದ್ದಾರೆ.
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…