ಸಿಎಂ ಹುದ್ದೆಯಿಂದ ಹಿಡಿದು ಪಕ್ಷದ ಟಿಕೆಟ್ ವರೆಗೆ ಎಲ್ಲವನ್ನೂ ಮಾರಾಟಕ್ಕಿಟ್ಟಿರುವ ಬಿಜೆಪಿ ಒಂಥರಾ ಚೋರ್ ಬಜಾರ್ ಇದ್ದಂತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬಿಜೆಪಿ ಕಚೇರಿ ಎಂದರೆ ವಂಚಕರ ಅಡ್ಡೆ ಎಂಬುದಕ್ಕೆ ಮತ್ತೊಂದು ಟಿಕೆಟ್ ವಂಚನೆ ಪ್ರಕರಣ ಹೊರಬಂದಿರುವುದೇ ಸಾಕ್ಷಿ. ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ಅಕ್ರಮವಾದರೆ, ಪಕ್ಷದಲ್ಲಿ ಟಿಕೆಟ್ ಕಮಿಷನ್ ಅಕ್ರಮ, ಈ ಕಮಿಷನ್ ಸೋಂಕು ಬಿಜೆಪಿಯಿಂದ ಸರ್ಕಾರಕ್ಕೆ ಅಂಟಿದೆಯೋ? ಅಥವಾ ಬಿಜೆಪಿ ಸರ್ಕಾರದಿಂದ ಪಕ್ಷಕ್ಕೆ ಅಂಟಿದೆಯೋ? ಕಂಡವರನ್ನು ಕಾಣೆಯಾಗಿದ್ದಾರೆ ಎನ್ನುವ ಕುರುಡು ಬಿಜೆಪಿ ತಮ್ಮ ಪಕ್ಷದ ವಸೂಲಿ ಅಕ್ರಮಗಳ ಬಗ್ಗೆಯೂ ಕುರುಡಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಸೋಲು ಖಾತರಿಯಾಗುತ್ತಿದ್ದಂತೆಯೇ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಹೊಸಬರಿಗೆ ಮಣೆ ಹಾಕುವ “ಗುಜರಾತ್ ಮಾದರಿ” ಎಂದು ಬಣ್ಣ ಬದಲಿಸಿದ್ದು ಬಹುಶಃ ಟಿಕೆಟ್ ಮಾರಾಟಕ್ಕಾಗಿಯೇ ಇರಬಹುದು.
ಈ ಬಗ್ಗೆ “ಸಂತೋಷ”ದಿಂದಿರುವವರೇ ಸ್ಪಷ್ಟಪಡಿಸಬೇಕು. ಕಮಿಷನ್ ಎನ್ನುವುದು ಬಿಜೆಪಿಯ ಜೀವಾಳ, ಗುತ್ತಿಗೆದಾರರೇ ಆಗಿರಲಿ, ಟಿಕೆಟ್ ಆಕಾಂಕ್ಷಿಗಳೇ ಆಗಿರಲಿ, ಕಮಿಷನ್ ನೀಡಲೇಬೇಕು. ಏಕೆಂದರೆ ಜಗನ್ನಾಥ ಭವನ ಎಂಬುದು ‘ಕೇಶವ ಕೃಪಾ’ ಪೋಷಿತ ಸುಂಕ ವಸೂಲಿ ಮಾಡುವ ‘ಸುಂಕದ ಕಟ್ಟೆ’ ಎಂದಿದ್ದಾರೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…