ಸಿಎಂ ಹುದ್ದೆಯಿಂದ ಹಿಡಿದು ಪಕ್ಷದ ಟಿಕೆಟ್ ವರೆಗೆ ಎಲ್ಲವನ್ನೂ ಮಾರಾಟಕ್ಕಿಟ್ಟಿರುವ ಬಿಜೆಪಿ ಒಂಥರಾ ಚೋರ್ ಬಜಾರ್ ಇದ್ದಂತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬಿಜೆಪಿ ಕಚೇರಿ ಎಂದರೆ ವಂಚಕರ ಅಡ್ಡೆ ಎಂಬುದಕ್ಕೆ ಮತ್ತೊಂದು ಟಿಕೆಟ್ ವಂಚನೆ ಪ್ರಕರಣ ಹೊರಬಂದಿರುವುದೇ ಸಾಕ್ಷಿ. ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ಅಕ್ರಮವಾದರೆ, ಪಕ್ಷದಲ್ಲಿ ಟಿಕೆಟ್ ಕಮಿಷನ್ ಅಕ್ರಮ, ಈ ಕಮಿಷನ್ ಸೋಂಕು ಬಿಜೆಪಿಯಿಂದ ಸರ್ಕಾರಕ್ಕೆ ಅಂಟಿದೆಯೋ? ಅಥವಾ ಬಿಜೆಪಿ ಸರ್ಕಾರದಿಂದ ಪಕ್ಷಕ್ಕೆ ಅಂಟಿದೆಯೋ? ಕಂಡವರನ್ನು ಕಾಣೆಯಾಗಿದ್ದಾರೆ ಎನ್ನುವ ಕುರುಡು ಬಿಜೆಪಿ ತಮ್ಮ ಪಕ್ಷದ ವಸೂಲಿ ಅಕ್ರಮಗಳ ಬಗ್ಗೆಯೂ ಕುರುಡಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಸೋಲು ಖಾತರಿಯಾಗುತ್ತಿದ್ದಂತೆಯೇ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಹೊಸಬರಿಗೆ ಮಣೆ ಹಾಕುವ “ಗುಜರಾತ್ ಮಾದರಿ” ಎಂದು ಬಣ್ಣ ಬದಲಿಸಿದ್ದು ಬಹುಶಃ ಟಿಕೆಟ್ ಮಾರಾಟಕ್ಕಾಗಿಯೇ ಇರಬಹುದು.
ಈ ಬಗ್ಗೆ “ಸಂತೋಷ”ದಿಂದಿರುವವರೇ ಸ್ಪಷ್ಟಪಡಿಸಬೇಕು. ಕಮಿಷನ್ ಎನ್ನುವುದು ಬಿಜೆಪಿಯ ಜೀವಾಳ, ಗುತ್ತಿಗೆದಾರರೇ ಆಗಿರಲಿ, ಟಿಕೆಟ್ ಆಕಾಂಕ್ಷಿಗಳೇ ಆಗಿರಲಿ, ಕಮಿಷನ್ ನೀಡಲೇಬೇಕು. ಏಕೆಂದರೆ ಜಗನ್ನಾಥ ಭವನ ಎಂಬುದು ‘ಕೇಶವ ಕೃಪಾ’ ಪೋಷಿತ ಸುಂಕ ವಸೂಲಿ ಮಾಡುವ ‘ಸುಂಕದ ಕಟ್ಟೆ’ ಎಂದಿದ್ದಾರೆ.
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…