ಸಿಎಂ ಹುದ್ದೆಯಿಂದ ಹಿಡಿದು ಪಕ್ಷದ ಟಿಕೆಟ್ ವರೆಗೆ ಎಲ್ಲವನ್ನೂ ಮಾರಾಟಕ್ಕಿಟ್ಟಿರುವ ಬಿಜೆಪಿ ಒಂಥರಾ ಚೋರ್ ಬಜಾರ್ ಇದ್ದಂತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಬಿಜೆಪಿ ಕಚೇರಿ ಎಂದರೆ ವಂಚಕರ ಅಡ್ಡೆ ಎಂಬುದಕ್ಕೆ ಮತ್ತೊಂದು ಟಿಕೆಟ್ ವಂಚನೆ ಪ್ರಕರಣ ಹೊರಬಂದಿರುವುದೇ ಸಾಕ್ಷಿ. ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ಅಕ್ರಮವಾದರೆ, ಪಕ್ಷದಲ್ಲಿ ಟಿಕೆಟ್ ಕಮಿಷನ್ ಅಕ್ರಮ, ಈ ಕಮಿಷನ್ ಸೋಂಕು ಬಿಜೆಪಿಯಿಂದ ಸರ್ಕಾರಕ್ಕೆ ಅಂಟಿದೆಯೋ? ಅಥವಾ ಬಿಜೆಪಿ ಸರ್ಕಾರದಿಂದ ಪಕ್ಷಕ್ಕೆ ಅಂಟಿದೆಯೋ? ಕಂಡವರನ್ನು ಕಾಣೆಯಾಗಿದ್ದಾರೆ ಎನ್ನುವ ಕುರುಡು ಬಿಜೆಪಿ ತಮ್ಮ ಪಕ್ಷದ ವಸೂಲಿ ಅಕ್ರಮಗಳ ಬಗ್ಗೆಯೂ ಕುರುಡಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.
ಸೋಲು ಖಾತರಿಯಾಗುತ್ತಿದ್ದಂತೆಯೇ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಹೊಸಬರಿಗೆ ಮಣೆ ಹಾಕುವ “ಗುಜರಾತ್ ಮಾದರಿ” ಎಂದು ಬಣ್ಣ ಬದಲಿಸಿದ್ದು ಬಹುಶಃ ಟಿಕೆಟ್ ಮಾರಾಟಕ್ಕಾಗಿಯೇ ಇರಬಹುದು.
ಈ ಬಗ್ಗೆ “ಸಂತೋಷ”ದಿಂದಿರುವವರೇ ಸ್ಪಷ್ಟಪಡಿಸಬೇಕು. ಕಮಿಷನ್ ಎನ್ನುವುದು ಬಿಜೆಪಿಯ ಜೀವಾಳ, ಗುತ್ತಿಗೆದಾರರೇ ಆಗಿರಲಿ, ಟಿಕೆಟ್ ಆಕಾಂಕ್ಷಿಗಳೇ ಆಗಿರಲಿ, ಕಮಿಷನ್ ನೀಡಲೇಬೇಕು. ಏಕೆಂದರೆ ಜಗನ್ನಾಥ ಭವನ ಎಂಬುದು ‘ಕೇಶವ ಕೃಪಾ’ ಪೋಷಿತ ಸುಂಕ ವಸೂಲಿ ಮಾಡುವ ‘ಸುಂಕದ ಕಟ್ಟೆ’ ಎಂದಿದ್ದಾರೆ.
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…