ಬಿಜೆಪಿ ಒಂಥರಾ ಚೋರ್ ಬಜಾರ್ ಇದ್ದಂತೆ!- ಸಚಿವ ಪ್ರಿಯಾಂಕ್‌ ಖರ್ಗೆ

ಸಿಎಂ ಹುದ್ದೆಯಿಂದ ಹಿಡಿದು ಪಕ್ಷದ ಟಿಕೆಟ್ ವರೆಗೆ ಎಲ್ಲವನ್ನೂ ಮಾರಾಟಕ್ಕಿಟ್ಟಿರುವ ಬಿಜೆಪಿ ಒಂಥರಾ ಚೋರ್ ಬಜಾರ್ ಇದ್ದಂತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬಿಜೆಪಿ ಕಚೇರಿ ಎಂದರೆ ವಂಚಕರ ಅಡ್ಡೆ ಎಂಬುದಕ್ಕೆ ಮತ್ತೊಂದು ಟಿಕೆಟ್ ವಂಚನೆ ಪ್ರಕರಣ ಹೊರಬಂದಿರುವುದೇ ಸಾಕ್ಷಿ. ಬಿಜೆಪಿ ಸರ್ಕಾರದಲ್ಲಿ 40% ಕಮಿಷನ್ ಅಕ್ರಮವಾದರೆ, ಪಕ್ಷದಲ್ಲಿ ಟಿಕೆಟ್ ಕಮಿಷನ್ ಅಕ್ರಮ, ಈ ಕಮಿಷನ್ ಸೋಂಕು ಬಿಜೆಪಿಯಿಂದ ಸರ್ಕಾರಕ್ಕೆ ಅಂಟಿದೆಯೋ? ಅಥವಾ ಬಿಜೆಪಿ ಸರ್ಕಾರದಿಂದ ಪಕ್ಷಕ್ಕೆ ಅಂಟಿದೆಯೋ? ಕಂಡವರನ್ನು ಕಾಣೆಯಾಗಿದ್ದಾರೆ ಎನ್ನುವ ಕುರುಡು ಬಿಜೆಪಿ ತಮ್ಮ ಪಕ್ಷದ ವಸೂಲಿ ಅಕ್ರಮಗಳ ಬಗ್ಗೆಯೂ ಕುರುಡಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ.

ಸೋಲು ಖಾತರಿಯಾಗುತ್ತಿದ್ದಂತೆಯೇ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಹೊಸಬರಿಗೆ ಮಣೆ ಹಾಕುವ “ಗುಜರಾತ್ ಮಾದರಿ” ಎಂದು ಬಣ್ಣ ಬದಲಿಸಿದ್ದು ಬಹುಶಃ ಟಿಕೆಟ್ ಮಾರಾಟಕ್ಕಾಗಿಯೇ ಇರಬಹುದು.

ಈ ಬಗ್ಗೆ “ಸಂತೋಷ”ದಿಂದಿರುವವರೇ ಸ್ಪಷ್ಟಪಡಿಸಬೇಕು. ಕಮಿಷನ್ ಎನ್ನುವುದು ಬಿಜೆಪಿಯ ಜೀವಾಳ, ಗುತ್ತಿಗೆದಾರರೇ ಆಗಿರಲಿ, ಟಿಕೆಟ್ ಆಕಾಂಕ್ಷಿಗಳೇ ಆಗಿರಲಿ, ಕಮಿಷನ್ ನೀಡಲೇಬೇಕು. ಏಕೆಂದರೆ ಜಗನ್ನಾಥ ಭವನ ಎಂಬುದು ‘ಕೇಶವ ಕೃಪಾ’ ಪೋಷಿತ ಸುಂಕ ವಸೂಲಿ ಮಾಡುವ ‘ಸುಂಕದ ಕಟ್ಟೆ’ ಎಂದಿದ್ದಾರೆ.

Ramesh Babu

Journalist

Recent Posts

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

25 minutes ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

30 minutes ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

5 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

7 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

8 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

21 hours ago