ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ ವಾಗ್ವಾದ ತೀವ್ರಗೊಂಡಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದರು.
ದೊಡ್ಡಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, SIR ವಿಚಾರದಲ್ಲಿ ಕಾಂಗ್ರೆಸ್ ನಾಯಕರು ದುರುದ್ದೇಶಪೂರಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಮುಂದಿನ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಲೇ ಕಾಂಗ್ರೆಸ್ ನಾಯಕರು ಈಗಿನಿಂದಲೇ ಕಾರಣ ಹುಡುಕುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.
“ಮತದಾರರ ಮತವನ್ನು ಯಾರೂ ಕಣ್ಣುಮುಚ್ಚಿ ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ. ಪ್ರತಿಯೊಂದು ಪಕ್ಷದಲ್ಲಿಯೂ ಬಿಎಲ್ಎ-2 ಪ್ರತಿನಿಧಿಗಳು ಇರುತ್ತಾರೆ. ಜೊತೆಗೆ ಅಧಿಕಾರಿಗಳಾಗಿ ಬಿಎಲ್ಒಗಳು ಕಾರ್ಯನಿರ್ವಹಿಸುತ್ತಾರೆ. ಮತದಾರರ ಪಟ್ಟಿಯಲ್ಲಿ ಸಾವನ್ನಪ್ಪಿದವರ ಹೆಸರು ಇದ್ದರೆ ಅದನ್ನು ತೆಗೆದುಹಾಕಲಾಗುತ್ತದೆ,” ಎಂದು ಹೇಳಿದರು.
ಬೇರೆ ದೇಶಗಳಲ್ಲಿ ಅಥವಾ ಬೇರೆ ಊರುಗಳಲ್ಲಿ ನೆಲೆಸಿರುವವರ ಹೆಸರು ಮತದಾರರ ಪಟ್ಟಿಯಲ್ಲಿ ಉಳಿಯಬೇಕೇ ಎಂಬ ಪ್ರಶ್ನೆಯೂ ಇದೆ. ಆದರೆ ಗ್ರಾಮದಲ್ಲಿ ವಾಸವಾಗಿರುವ ವ್ಯಕ್ತಿಗಳ ಹೆಸರನ್ನು ಯಾವುದೇ ಕಾರಣಕ್ಕೂ ಪಟ್ಟಿಯಿಂದ ತೆಗೆದುಹಾಕಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಮತದಾರರಿಗೆ ಯಾವುದೇ ರೀತಿಯ ಅನ್ಯಾಯವಾಗಿದ್ರೆ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು. ಕಾಂಗ್ರೆಸ್ ನಾಯಕರು ರಾಜಕೀಯ ದುರುದ್ದೇಶದಿಂದಲೇ ಜನರಲ್ಲಿ ಗೊಂದಲ ಸೃಷ್ಟಿಸುವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.
ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿಲ್ಲ. ಕೇಂದ್ರದಲ್ಲಿ ಯಾವುದೇ ಸರ್ಕಾರ ಇದ್ದರೂ ಈ ಪ್ರಕ್ರಿಯೆ ನಡೆಯುತ್ತದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು. ತಪ್ಪಿದ್ದಲ್ಲಿ ಕೋರ್ಟ್ ಮೊರೆ ಹೋಗಿ ನ್ಯಾಯ ಪಡೆದುಕೊಳ್ಳಬಹುದು ಎಂದು ಹೇಳಿದರು.
ಪೆಟ್ರೋಲ್, ಡೀಸೆಲ್ ದರ ಏರಿಕೆ ಕುರಿತು ಪ್ರತಿಕ್ರಿಯೆ
ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಕುರಿತು ಪ್ರತಿಕ್ರಿಯಿಸಿದ ಸಂಸದ ಡಾ.ಕೆ.ಸುಧಾಕರ್, “ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಇರಾನ್ ಮೂಲಕ ನಮಗೆ ಕಚ್ಚಾ ತೈಲ ಬರುತ್ತಿತ್ತು. ಯುದ್ಧದ ಪರಿಣಾಮ ಕೆಲವು ದೇಶಗಳಲ್ಲಿ ತೈಲದ ಬೆಲೆ ಲೀಟರ್ಗೆ 300 ರಿಂದ 400 ರೂ.ವರೆಗೆ ಏರಿಕೆಯಾಗಿದೆ,” ಎಂದರು.
“ದೇಶದಲ್ಲಿ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ತೈಲದ ಬೆಲೆ ಕಡಿಮೆ ಇದೆ. ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಬೆಲೆ ಹೆಚ್ಚು ಇದೆ. ತೈಲ ಉತ್ಪಾದಕ ರಾಷ್ಟ್ರಗಳಲ್ಲಿಯೂ ಆಯಿಲ್ ಕಂಪನಿಗಳು ನಷ್ಟದಲ್ಲಿವೆ. ಆದರೂ ಪ್ರಧಾನಿ ನರೇಂದ್ರ ಮೋದಿ ವಿಶೇಷ ಮುತುವರ್ಜಿ ವಹಿಸಿ ಜನರ ಮೇಲೆ ಹೆಚ್ಚಿನ ಹೊರೆ ಬೀಳದಂತೆ ನೋಡಿಕೊಳ್ಳುತ್ತಿದ್ದಾರೆ,” ಎಂದು ಹೇಳಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಕುರಿತು ಪ್ರತಿಕ್ರಿಯೆ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ಈಗ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ರಾಜ್ಯ ಪ್ರವಾಸದಲ್ಲಿದ್ದಾರೆ. ಈ ಪ್ರಶ್ನೆಯನ್ನು ಅವರ ಮುಂದಿಟ್ಟರೆ ಸೂಕ್ತ ಉತ್ತರ ನೀಡುತ್ತಾರೆ. ಯಾರೇ ಅಧ್ಯಕ್ಷರಾದರೂ ಅವರು ನಮ್ಮ ಕುಟುಂಬದವರೇ,” ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…