ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ


ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ ವಾಗ್ವಾದ ತೀವ್ರಗೊಂಡಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದರು.

ದೊಡ್ಡಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, SIR ವಿಚಾರದಲ್ಲಿ ಕಾಂಗ್ರೆಸ್ ನಾಯಕರು ದುರುದ್ದೇಶಪೂರಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಮುಂದಿನ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಲೇ ಕಾಂಗ್ರೆಸ್ ನಾಯಕರು ಈಗಿನಿಂದಲೇ ಕಾರಣ ಹುಡುಕುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.

“ಮತದಾರರ ಮತವನ್ನು ಯಾರೂ ಕಣ್ಣುಮುಚ್ಚಿ ತೆಗೆದುಕೊಂಡು ಹೋಗಲು ಸಾಧ್ಯವಿಲ್ಲ. ಪ್ರತಿಯೊಂದು ಪಕ್ಷದಲ್ಲಿಯೂ ಬಿಎಲ್‌ಎ-2 ಪ್ರತಿನಿಧಿಗಳು ಇರುತ್ತಾರೆ. ಜೊತೆಗೆ ಅಧಿಕಾರಿಗಳಾಗಿ ಬಿಎಲ್‌ಒಗಳು ಕಾರ್ಯನಿರ್ವಹಿಸುತ್ತಾರೆ. ಮತದಾರರ ಪಟ್ಟಿಯಲ್ಲಿ ಸಾವನ್ನಪ್ಪಿದವರ ಹೆಸರು ಇದ್ದರೆ ಅದನ್ನು ತೆಗೆದುಹಾಕಲಾಗುತ್ತದೆ,” ಎಂದು ಹೇಳಿದರು.

ಬೇರೆ ದೇಶಗಳಲ್ಲಿ ಅಥವಾ ಬೇರೆ ಊರುಗಳಲ್ಲಿ ನೆಲೆಸಿರುವವರ ಹೆಸರು ಮತದಾರರ ಪಟ್ಟಿಯಲ್ಲಿ ಉಳಿಯಬೇಕೇ ಎಂಬ ಪ್ರಶ್ನೆಯೂ ಇದೆ. ಆದರೆ ಗ್ರಾಮದಲ್ಲಿ ವಾಸವಾಗಿರುವ ವ್ಯಕ್ತಿಗಳ ಹೆಸರನ್ನು ಯಾವುದೇ ಕಾರಣಕ್ಕೂ ಪಟ್ಟಿಯಿಂದ ತೆಗೆದುಹಾಕಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಮತದಾರರಿಗೆ ಯಾವುದೇ ರೀತಿಯ ಅನ್ಯಾಯವಾಗಿದ್ರೆ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಳ್ಳಲು ಅವಕಾಶವಿದೆ ಎಂದು ತಿಳಿಸಿದರು. ಕಾಂಗ್ರೆಸ್ ನಾಯಕರು ರಾಜಕೀಯ ದುರುದ್ದೇಶದಿಂದಲೇ ಜನರಲ್ಲಿ ಗೊಂದಲ ಸೃಷ್ಟಿಸುವ ರೀತಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕಿಡಿಕಾರಿದರು.

ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿಲ್ಲ. ಕೇಂದ್ರದಲ್ಲಿ ಯಾವುದೇ ಸರ್ಕಾರ ಇದ್ದರೂ ಈ ಪ್ರಕ್ರಿಯೆ ನಡೆಯುತ್ತದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು. ತಪ್ಪಿದ್ದಲ್ಲಿ ಕೋರ್ಟ್ ಮೊರೆ ಹೋಗಿ ನ್ಯಾಯ ಪಡೆದುಕೊಳ್ಳಬಹುದು ಎಂದು ಹೇಳಿದರು.

ಪೆಟ್ರೋಲ್, ಡೀಸೆಲ್ ದರ ಏರಿಕೆ ಕುರಿತು ಪ್ರತಿಕ್ರಿಯೆ

ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಕುರಿತು ಪ್ರತಿಕ್ರಿಯಿಸಿದ ಸಂಸದ ಡಾ.ಕೆ.ಸುಧಾಕರ್, “ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಇರಾನ್ ಮೂಲಕ ನಮಗೆ ಕಚ್ಚಾ ತೈಲ ಬರುತ್ತಿತ್ತು. ಯುದ್ಧದ ಪರಿಣಾಮ ಕೆಲವು ದೇಶಗಳಲ್ಲಿ ತೈಲದ ಬೆಲೆ ಲೀಟರ್‌ಗೆ 300 ರಿಂದ 400 ರೂ.ವರೆಗೆ ಏರಿಕೆಯಾಗಿದೆ,” ಎಂದರು.

“ದೇಶದಲ್ಲಿ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ತೈಲದ ಬೆಲೆ ಕಡಿಮೆ ಇದೆ. ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ಬೆಲೆ ಹೆಚ್ಚು ಇದೆ. ತೈಲ ಉತ್ಪಾದಕ ರಾಷ್ಟ್ರಗಳಲ್ಲಿಯೂ ಆಯಿಲ್ ಕಂಪನಿಗಳು ನಷ್ಟದಲ್ಲಿವೆ. ಆದರೂ ಪ್ರಧಾನಿ ನರೇಂದ್ರ ಮೋದಿ ವಿಶೇಷ ಮುತುವರ್ಜಿ ವಹಿಸಿ ಜನರ ಮೇಲೆ ಹೆಚ್ಚಿನ ಹೊರೆ ಬೀಳದಂತೆ ನೋಡಿಕೊಳ್ಳುತ್ತಿದ್ದಾರೆ,” ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಕುರಿತು ಪ್ರತಿಕ್ರಿಯೆ

ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ಈಗ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ರಾಜ್ಯ ಪ್ರವಾಸದಲ್ಲಿದ್ದಾರೆ. ಈ ಪ್ರಶ್ನೆಯನ್ನು ಅವರ ಮುಂದಿಟ್ಟರೆ ಸೂಕ್ತ ಉತ್ತರ ನೀಡುತ್ತಾರೆ. ಯಾರೇ ಅಧ್ಯಕ್ಷರಾದರೂ ಅವರು ನಮ್ಮ ಕುಟುಂಬದವರೇ,” ಎಂದು ಹೇಳಿದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

36 minutes ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

2 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

7 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

9 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

12 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago