Categories: ಕೋಲಾರ

ಬಿಜೆಪಿ ಕಾರ್ಯಕರ್ತರಿಂದ 101 ಇಡುಗಾಯಿ ಒಡೆದು ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬ ಆಚರಣೆ

ಕೋಲಾರ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬವನ್ನು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಕುಡಾ ಅಧ್ಯಕ್ಷ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಮಂಗಳವಾರ ನಗರದ ಶಕ್ತಿ ದೇವತೆ ಶ್ರೀ ಕೋಲಾರಮ್ಮ ದೇವಾಲಯ ಆವರಣದಲ್ಲಿ 101 ಇಡುಗಾಯಿ ಒಡೆಯುವ ಮೂಲಕ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಆಚರಿಸಿದರು.

ಈ ವೇಳೆ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಕುಡಾ ಅಧ್ಯಕ್ಷ ಓಂ ಶಕ್ತಿ ಚಲಪತಿ ಮಾತನಾಡಿ, ಕರ್ನಾಟಕ ಬಿಜೆಪಿಯು ದಕ್ಷಿಣ ಭಾರತದ ಹೆಬ್ಬಾಗಿಲು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಸಂಘಟನೆ ಉತ್ತಮವಾಗಿ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ತರುತ್ತಾರೆ. ಈ ನಿಟ್ಟಿನಲ್ಲಿ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಖಚಿತ ಎಂದರು.

ತಮ್ಮ ಮಾತಿನಿಂದ ಜನರನ್ನು ಹಾಗೂ ಕಾರ್ಯಕರ್ತರನ್ನು ಸೆಳೆಯುವ ಛಾಪು ರೂಪಿಸಿಕೊಂಡಿದ್ದಾರೆ. ಇವರ ಅನುಭವ, ಸಂಘಟನೆ, ರಾಜಕಾರಣ ಮಾಡುವ ಕಾರ್ಯತಂತ್ರದಿಂದ ಉತ್ತಮ ಪದವಿಯ ಚುಕ್ಕಾಣಿ ಹಿಡಿಯುವುದರಲ್ಲಿ ಸಂಶಯವಿಲ್ಲ. ವಿಜಯೇಂದ್ರ ಅವರ ಸಂಘಟನೆಯಿಂದಾಗಿ ಮೂರೂ ಕ್ಷೇತ್ರ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತದೆ. ನಿಸ್ವಾರ್ಥದಿಂದ ಜನರ ಸೇವೆ ಮಾಡುತ್ತಿರುವ ವಿಜಯೇಂದ್ರ ಅವರಿಗೆ ಕೋಲಾರಮ್ಮ ತಾಯಿ ಆರೋಗ್ಯ ಹಾಗೂ ಜನರ ಸೇವೆ ಕೈಗೊಳ್ಳಲು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಶುಭ ಕೋರಿದರು.

ಕುಡಾ ನಿಕಟ ಪೂರ್ವ ಅಧ್ಯಕ್ಷ ವಿಜಯಕುಮಾರ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುತ್ತಿತ್ತು. ಈಗ ಪುನರಾವರ್ತಿಯಂತೆ ವಿಜಯೇಂದ್ರ ಗುಡುಗಿದರೆ ವಿಧಾನಸೌಧ ನಡುಗುತ್ತದೆ. ಆಡಳಿತ ಪಕ್ಷ ಕಾಂಗ್ರೆಸ್ ಮಾಡುವ ಪ್ರತಿಯೊಂದು ತಪ್ಪನ್ನು ನಮ್ಮ ರಾಜ್ಯಾಧ್ಯಕ್ಷರು ಎತ್ತಿ ಹಿಡಿದು ನಾಡಿನ ಜನತೆಗೆ ತೋರಿಸುವ ಮೂಲಕ ಪ್ರಶ್ನಿಸುತ್ತಿದ್ದಾರೆ. ಜನತೆಗೆ ಯಾವುದೇ ರೀತಿ ಮೋಸ ಆಗದಂತೆ ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲೇ ಒಗ್ಗಟ್ಟಿಲ್ಲದೆ ಅಧಿಕಾರಕ್ಕೆ ಕಿತ್ತಾಡುತ್ತಿದ್ದು, ಸರ್ಕಾರ ಯಾವ ಸಮಯದಲ್ಲಾದರೂ ಬೀಳಬಹುದು. ಆಗ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಆಗುವುದು ಶತಸಿದ್ಧ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಾದ ಸಾಮ ಬಾಬು, ನಾಮಲ್ ಮಂಜುನಾಥ್, ಎವಿವಿಪಿ ಹರೀಶ್, ಹೊಗರಿ ರವಿ, ಸಿದ್ದಾರ್ಥ್, ವಿನಯ್, ಮಹೇಶ್, ರೂಪೇಶ್, ಆನಂದ್, ಮುರಳಿ, ಶ್ರೀನಿವಾಸ್, ಅನಿಲ್ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

4 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

14 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

15 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

24 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 days ago