Categories: ಕೋಲಾರ

ಬಿಜೆಪಿ ಕಾರ್ಯಕರ್ತರಿಂದ 101 ಇಡುಗಾಯಿ ಒಡೆದು ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬ ಆಚರಣೆ

ಕೋಲಾರ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬವನ್ನು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಕುಡಾ ಅಧ್ಯಕ್ಷ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಮಂಗಳವಾರ ನಗರದ ಶಕ್ತಿ ದೇವತೆ ಶ್ರೀ ಕೋಲಾರಮ್ಮ ದೇವಾಲಯ ಆವರಣದಲ್ಲಿ 101 ಇಡುಗಾಯಿ ಒಡೆಯುವ ಮೂಲಕ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಆಚರಿಸಿದರು.

ಈ ವೇಳೆ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಕುಡಾ ಅಧ್ಯಕ್ಷ ಓಂ ಶಕ್ತಿ ಚಲಪತಿ ಮಾತನಾಡಿ, ಕರ್ನಾಟಕ ಬಿಜೆಪಿಯು ದಕ್ಷಿಣ ಭಾರತದ ಹೆಬ್ಬಾಗಿಲು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಸಂಘಟನೆ ಉತ್ತಮವಾಗಿ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ತರುತ್ತಾರೆ. ಈ ನಿಟ್ಟಿನಲ್ಲಿ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಖಚಿತ ಎಂದರು.

ತಮ್ಮ ಮಾತಿನಿಂದ ಜನರನ್ನು ಹಾಗೂ ಕಾರ್ಯಕರ್ತರನ್ನು ಸೆಳೆಯುವ ಛಾಪು ರೂಪಿಸಿಕೊಂಡಿದ್ದಾರೆ. ಇವರ ಅನುಭವ, ಸಂಘಟನೆ, ರಾಜಕಾರಣ ಮಾಡುವ ಕಾರ್ಯತಂತ್ರದಿಂದ ಉತ್ತಮ ಪದವಿಯ ಚುಕ್ಕಾಣಿ ಹಿಡಿಯುವುದರಲ್ಲಿ ಸಂಶಯವಿಲ್ಲ. ವಿಜಯೇಂದ್ರ ಅವರ ಸಂಘಟನೆಯಿಂದಾಗಿ ಮೂರೂ ಕ್ಷೇತ್ರ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತದೆ. ನಿಸ್ವಾರ್ಥದಿಂದ ಜನರ ಸೇವೆ ಮಾಡುತ್ತಿರುವ ವಿಜಯೇಂದ್ರ ಅವರಿಗೆ ಕೋಲಾರಮ್ಮ ತಾಯಿ ಆರೋಗ್ಯ ಹಾಗೂ ಜನರ ಸೇವೆ ಕೈಗೊಳ್ಳಲು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಶುಭ ಕೋರಿದರು.

ಕುಡಾ ನಿಕಟ ಪೂರ್ವ ಅಧ್ಯಕ್ಷ ವಿಜಯಕುಮಾರ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುತ್ತಿತ್ತು. ಈಗ ಪುನರಾವರ್ತಿಯಂತೆ ವಿಜಯೇಂದ್ರ ಗುಡುಗಿದರೆ ವಿಧಾನಸೌಧ ನಡುಗುತ್ತದೆ. ಆಡಳಿತ ಪಕ್ಷ ಕಾಂಗ್ರೆಸ್ ಮಾಡುವ ಪ್ರತಿಯೊಂದು ತಪ್ಪನ್ನು ನಮ್ಮ ರಾಜ್ಯಾಧ್ಯಕ್ಷರು ಎತ್ತಿ ಹಿಡಿದು ನಾಡಿನ ಜನತೆಗೆ ತೋರಿಸುವ ಮೂಲಕ ಪ್ರಶ್ನಿಸುತ್ತಿದ್ದಾರೆ. ಜನತೆಗೆ ಯಾವುದೇ ರೀತಿ ಮೋಸ ಆಗದಂತೆ ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲೇ ಒಗ್ಗಟ್ಟಿಲ್ಲದೆ ಅಧಿಕಾರಕ್ಕೆ ಕಿತ್ತಾಡುತ್ತಿದ್ದು, ಸರ್ಕಾರ ಯಾವ ಸಮಯದಲ್ಲಾದರೂ ಬೀಳಬಹುದು. ಆಗ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಆಗುವುದು ಶತಸಿದ್ಧ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಾದ ಸಾಮ ಬಾಬು, ನಾಮಲ್ ಮಂಜುನಾಥ್, ಎವಿವಿಪಿ ಹರೀಶ್, ಹೊಗರಿ ರವಿ, ಸಿದ್ದಾರ್ಥ್, ವಿನಯ್, ಮಹೇಶ್, ರೂಪೇಶ್, ಆನಂದ್, ಮುರಳಿ, ಶ್ರೀನಿವಾಸ್, ಅನಿಲ್ ಮತ್ತಿತರರು ಹಾಜರಿದ್ದರು.

Ramesh Babu

Journalist

Recent Posts

ಜಾಬ್ ಕಾರ್ಡ್ ಮೇಳಕ್ಕೆ ಚಾಲನೆ ನೀಡಿದ ಶಾಸಕ ಸಿ.ಬಿ.ಸುರೇಶ್ ಬಾಬು

  *ಚಿಕ್ಕನಾಯಕನಹಳ್ಳಿ : ಗ್ರಾಮೀಣ ಜನರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

5 hours ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

1 day ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

1 day ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

1 day ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

3 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

4 days ago