ಕೋಲಾರ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬವನ್ನು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಕುಡಾ ಅಧ್ಯಕ್ಷ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಮಂಗಳವಾರ ನಗರದ ಶಕ್ತಿ ದೇವತೆ ಶ್ರೀ ಕೋಲಾರಮ್ಮ ದೇವಾಲಯ ಆವರಣದಲ್ಲಿ 101 ಇಡುಗಾಯಿ ಒಡೆಯುವ ಮೂಲಕ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಆಚರಿಸಿದರು.
ಈ ವೇಳೆ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಕುಡಾ ಅಧ್ಯಕ್ಷ ಓಂ ಶಕ್ತಿ ಚಲಪತಿ ಮಾತನಾಡಿ, ಕರ್ನಾಟಕ ಬಿಜೆಪಿಯು ದಕ್ಷಿಣ ಭಾರತದ ಹೆಬ್ಬಾಗಿಲು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಸಂಘಟನೆ ಉತ್ತಮವಾಗಿ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ತರುತ್ತಾರೆ. ಈ ನಿಟ್ಟಿನಲ್ಲಿ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಖಚಿತ ಎಂದರು.
ತಮ್ಮ ಮಾತಿನಿಂದ ಜನರನ್ನು ಹಾಗೂ ಕಾರ್ಯಕರ್ತರನ್ನು ಸೆಳೆಯುವ ಛಾಪು ರೂಪಿಸಿಕೊಂಡಿದ್ದಾರೆ. ಇವರ ಅನುಭವ, ಸಂಘಟನೆ, ರಾಜಕಾರಣ ಮಾಡುವ ಕಾರ್ಯತಂತ್ರದಿಂದ ಉತ್ತಮ ಪದವಿಯ ಚುಕ್ಕಾಣಿ ಹಿಡಿಯುವುದರಲ್ಲಿ ಸಂಶಯವಿಲ್ಲ. ವಿಜಯೇಂದ್ರ ಅವರ ಸಂಘಟನೆಯಿಂದಾಗಿ ಮೂರೂ ಕ್ಷೇತ್ರ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತದೆ. ನಿಸ್ವಾರ್ಥದಿಂದ ಜನರ ಸೇವೆ ಮಾಡುತ್ತಿರುವ ವಿಜಯೇಂದ್ರ ಅವರಿಗೆ ಕೋಲಾರಮ್ಮ ತಾಯಿ ಆರೋಗ್ಯ ಹಾಗೂ ಜನರ ಸೇವೆ ಕೈಗೊಳ್ಳಲು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಶುಭ ಕೋರಿದರು.
ಕುಡಾ ನಿಕಟ ಪೂರ್ವ ಅಧ್ಯಕ್ಷ ವಿಜಯಕುಮಾರ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುತ್ತಿತ್ತು. ಈಗ ಪುನರಾವರ್ತಿಯಂತೆ ವಿಜಯೇಂದ್ರ ಗುಡುಗಿದರೆ ವಿಧಾನಸೌಧ ನಡುಗುತ್ತದೆ. ಆಡಳಿತ ಪಕ್ಷ ಕಾಂಗ್ರೆಸ್ ಮಾಡುವ ಪ್ರತಿಯೊಂದು ತಪ್ಪನ್ನು ನಮ್ಮ ರಾಜ್ಯಾಧ್ಯಕ್ಷರು ಎತ್ತಿ ಹಿಡಿದು ನಾಡಿನ ಜನತೆಗೆ ತೋರಿಸುವ ಮೂಲಕ ಪ್ರಶ್ನಿಸುತ್ತಿದ್ದಾರೆ. ಜನತೆಗೆ ಯಾವುದೇ ರೀತಿ ಮೋಸ ಆಗದಂತೆ ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲೇ ಒಗ್ಗಟ್ಟಿಲ್ಲದೆ ಅಧಿಕಾರಕ್ಕೆ ಕಿತ್ತಾಡುತ್ತಿದ್ದು, ಸರ್ಕಾರ ಯಾವ ಸಮಯದಲ್ಲಾದರೂ ಬೀಳಬಹುದು. ಆಗ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಆಗುವುದು ಶತಸಿದ್ಧ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಾದ ಸಾಮ ಬಾಬು, ನಾಮಲ್ ಮಂಜುನಾಥ್, ಎವಿವಿಪಿ ಹರೀಶ್, ಹೊಗರಿ ರವಿ, ಸಿದ್ದಾರ್ಥ್, ವಿನಯ್, ಮಹೇಶ್, ರೂಪೇಶ್, ಆನಂದ್, ಮುರಳಿ, ಶ್ರೀನಿವಾಸ್, ಅನಿಲ್ ಮತ್ತಿತರರು ಹಾಜರಿದ್ದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…