ಕೋಲಾರ: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಹುಟ್ಟುಹಬ್ಬವನ್ನು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಕುಡಾ ಅಧ್ಯಕ್ಷ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಮಂಗಳವಾರ ನಗರದ ಶಕ್ತಿ ದೇವತೆ ಶ್ರೀ ಕೋಲಾರಮ್ಮ ದೇವಾಲಯ ಆವರಣದಲ್ಲಿ 101 ಇಡುಗಾಯಿ ಒಡೆಯುವ ಮೂಲಕ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳು ಆಚರಿಸಿದರು.
ಈ ವೇಳೆ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಕುಡಾ ಅಧ್ಯಕ್ಷ ಓಂ ಶಕ್ತಿ ಚಲಪತಿ ಮಾತನಾಡಿ, ಕರ್ನಾಟಕ ಬಿಜೆಪಿಯು ದಕ್ಷಿಣ ಭಾರತದ ಹೆಬ್ಬಾಗಿಲು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷದ ಸಂಘಟನೆ ಉತ್ತಮವಾಗಿ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ತರುತ್ತಾರೆ. ಈ ನಿಟ್ಟಿನಲ್ಲಿ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗುವುದು ಖಚಿತ ಎಂದರು.
ತಮ್ಮ ಮಾತಿನಿಂದ ಜನರನ್ನು ಹಾಗೂ ಕಾರ್ಯಕರ್ತರನ್ನು ಸೆಳೆಯುವ ಛಾಪು ರೂಪಿಸಿಕೊಂಡಿದ್ದಾರೆ. ಇವರ ಅನುಭವ, ಸಂಘಟನೆ, ರಾಜಕಾರಣ ಮಾಡುವ ಕಾರ್ಯತಂತ್ರದಿಂದ ಉತ್ತಮ ಪದವಿಯ ಚುಕ್ಕಾಣಿ ಹಿಡಿಯುವುದರಲ್ಲಿ ಸಂಶಯವಿಲ್ಲ. ವಿಜಯೇಂದ್ರ ಅವರ ಸಂಘಟನೆಯಿಂದಾಗಿ ಮೂರೂ ಕ್ಷೇತ್ರ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸುತ್ತದೆ. ನಿಸ್ವಾರ್ಥದಿಂದ ಜನರ ಸೇವೆ ಮಾಡುತ್ತಿರುವ ವಿಜಯೇಂದ್ರ ಅವರಿಗೆ ಕೋಲಾರಮ್ಮ ತಾಯಿ ಆರೋಗ್ಯ ಹಾಗೂ ಜನರ ಸೇವೆ ಕೈಗೊಳ್ಳಲು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಶುಭ ಕೋರಿದರು.
ಕುಡಾ ನಿಕಟ ಪೂರ್ವ ಅಧ್ಯಕ್ಷ ವಿಜಯಕುಮಾರ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುತ್ತಿತ್ತು. ಈಗ ಪುನರಾವರ್ತಿಯಂತೆ ವಿಜಯೇಂದ್ರ ಗುಡುಗಿದರೆ ವಿಧಾನಸೌಧ ನಡುಗುತ್ತದೆ. ಆಡಳಿತ ಪಕ್ಷ ಕಾಂಗ್ರೆಸ್ ಮಾಡುವ ಪ್ರತಿಯೊಂದು ತಪ್ಪನ್ನು ನಮ್ಮ ರಾಜ್ಯಾಧ್ಯಕ್ಷರು ಎತ್ತಿ ಹಿಡಿದು ನಾಡಿನ ಜನತೆಗೆ ತೋರಿಸುವ ಮೂಲಕ ಪ್ರಶ್ನಿಸುತ್ತಿದ್ದಾರೆ. ಜನತೆಗೆ ಯಾವುದೇ ರೀತಿ ಮೋಸ ಆಗದಂತೆ ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲೇ ಒಗ್ಗಟ್ಟಿಲ್ಲದೆ ಅಧಿಕಾರಕ್ಕೆ ಕಿತ್ತಾಡುತ್ತಿದ್ದು, ಸರ್ಕಾರ ಯಾವ ಸಮಯದಲ್ಲಾದರೂ ಬೀಳಬಹುದು. ಆಗ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಆಗುವುದು ಶತಸಿದ್ಧ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರಾದ ಸಾಮ ಬಾಬು, ನಾಮಲ್ ಮಂಜುನಾಥ್, ಎವಿವಿಪಿ ಹರೀಶ್, ಹೊಗರಿ ರವಿ, ಸಿದ್ದಾರ್ಥ್, ವಿನಯ್, ಮಹೇಶ್, ರೂಪೇಶ್, ಆನಂದ್, ಮುರಳಿ, ಶ್ರೀನಿವಾಸ್, ಅನಿಲ್ ಮತ್ತಿತರರು ಹಾಜರಿದ್ದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…