ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆಯಾ?- ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು. ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆಯಾ ? ನಿಮ್ಮ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡುತ್ತಿರುವವರು ನಾವಾ? ಬಿಜೆಪಿಯಾ? ಇದನ್ನು ನಿಮ್ಮ ಹೃದಯಕ್ಕೆ ಕೇಳಿಕೊಂಡು ತೀರ್ಮಾನಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.

ಅನ್ನಭಾಗ್ಯ, ಕೃಷಿಭಾಗ್ಯ, ಕ್ಷೀರಧಾರೆ ಸೇರಿ ಹತ್ತಾರು ಭಾಗ್ಯಗಳು, ಐದು ಗ್ಯಾರಂಟಿಗಳನ್ನು ಜಾರಿ ಮಾಡಿ ಪ್ರತೀ ತಿಂಗಳು ನಾವು ಕೊಟ್ಟ ಮಾತಿನಂತೆ ನಿಮ್ಮ ಬ್ಯಾಂಕ್ ಖಾತೆಗೆ ಹಣ ಜಮೆ ಮಾಡುತ್ತಿರುವವರು ನಾವು. ಉಚಿತ ಬಸ್, ಉಚಿತ ವಿದ್ಯುತ್ ಕೊಡುತ್ತಿರುವವರು ನಾವು‌ . ತಿಂಗಳಿಗೆ 2 ಸಾವಿರ ಪ್ರತೀ ಮಹಿಳೆಯ ಖಾತೆಗೆ ಹಾಕುತ್ತಿರುವವರು ನಾವು ಎನ್ನುತ್ತಾ, ನಾವು ಮಾಡಿದ ಕೆಲಸಕ್ಕೆ ಕೂಲಿ ಕೊಡಿ ಎಂದು ಕೈ ಮುಗಿದು ಕೇಳಿದರು.

ಆದರೆ ಮೋದಿಯವರು ವಿದೇಶದಿಂದ ಕಪ್ಪು ಹಣ ತಂದು ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ಹಣ ಹಾಕ್ತೀವಿ ಅಂದರು. ಮೋದಿಯವರು ಈ ಹಣ ಹಾಕಿದ್ರಾ ನಿಮ್ಮ ಖಾತೆಗೆ? ವಿದೇಶದಿಂದ ಕಪ್ಪು ಹಣ ತಂದರಾ ಎಂದು ನೆರೆದಿದ್ದ ಜನರನ್ನು ಪ್ರಶ್ನಿಸಿದರು.

ಅಚ್ಚೆದಿನ್ ಆಯೆಗಾ ಎಂದು ಡೈಲಾಗ್ ಹೊಡೆದದ್ದು ಮೋದಿಯವರು. ಆದರೆ ಪೆಟ್ರೋಲ್, ಡೀಸೆಲ್ ಬೆಲೆ, ಗ್ಯಾಸ್ ಬೆಲೆ, ರಸಗೊಬ್ಬರದ ಬೆಲೆ ಎಲ್ಲಾ ಏರಿಸಿ ಏರಿಸಿ ಬಡವರ, ಮಧ್ಯಮ ವರ್ಗದವರು ಬದುಕುವುದೇ ದುಸ್ತರ ಮಾಡಿಬಿಟ್ಟರು ಎಂದು ಒಂದೊಂದಾಗಿ ವಿವರಿಸಿದರು.

BJP ಸಮಾಜದಲ್ಲಿರುವ ಅಸಮಾನತೆಯ ಮಹಾನ್ ಪೋಷಕರು. ಬಡವರು ಇನ್ನಷ್ಟು ಬಡವರಾಗುತ್ತಲೇ ಹೋಗಬೇಕು, ಮಧ್ಯಮ ವರ್ಗದವರು ಬಡತನಕ್ಕೆ ಜಾರಬೇಕು ಎನ್ನುವುದು ಬಿಜೆಪಿಯ ಅಜೆಂಡಾ. ಹೀಗಾಗಿ ಮಧ್ಯಮ ವರ್ಗದವರು, ಬಡವರಿಗೆ ಕಾಂಗ್ರೆಸ್ ಸರ್ಕಾರ ಕೊಡುವ ಎಲ್ಲಾ ಕಾರ್ಯಕ್ರಮಗಳನ್ನೂ ವಿರೋಧಿಸುತ್ತಾರೆ, ಫಲಾನುಭವಿಗಳನ್ನು ಅವಮಾನಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸರ್ಕಾರ ಸಂವಿಧಾನದ ಆಶಯಗಳಂತೆ ಸರ್ವರ ಕಲ್ಯಾಣದ ಕಾರ್ಯಕ್ರಮ ರೂಪಿಸುತ್ತಿದೆ. ನಮ್ಮ ಸಂವಿಧಾನ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರು ಮಹಿಳೆಯರು, ಯುವ ಸಮೂಹ ಸೇರಿ ಸರ್ವರಿಗೂ ಅವಕಾಶಗಳನ್ನು ಕೊಡುತ್ತದೆ. ಈ ಅವಕಾಶಗಳನ್ನು ನಾಶ ಮಾಡಬೇಕು ಎನ್ನುವ ಕಾರಣಕ್ಕೆ ಬಿಜೆಪಿ ನಮ್ಮ ಸಂವಿಧಾನವನ್ನು ಬದಲಾಯಿಸಿ ಅವರ ಮನುಸ್ಮೃತಿ ಪರವಾಗಿ ಮಾತನಾಡುತ್ತಿದೆ.

ಬಿಜೆಪಿಯ ಹಾಲಿ ಸಂಸದ, ಮಾಜಿ ಕೇಂದ್ರ ಸಚಿವ ಅನಂತ ಕುಮಾರ ಹೆಗ್ಡೆ ಅವರು ಪದೇ ಪದೇ ಸಂವಿಧಾನ ಬದಲಾಯಿಸುವ ಮಾತಾಡುತ್ತಿದ್ದಾರೆ. ಇವರು ಬಹಿರಂಗವಾಗಿ ಸಂವಿಧಾನ ಬದಲಾಯಿಸುವ ಮಾತಾಡಿದರೂ ಪ್ರಧಾನಿ ಮೋದಿಯವರಾಗಲೀ, ಬಿಜೆಪಿ ಹೈ ಕಮಾಂಡ್ ಆಗಲಿ ಇದನ್ನು ವಿರೋಧಿಸಿಲ್ಲ. ಹೀಗಾಗಿ ಬಿಜೆಪಿಯ ಅಜೆಂಡಾವನ್ನು ನಾಡಿನ ಜನತೆ ಅರ್ಥಮಾಡಿಕೊಳ್ಳಬೇಕು. ನಮ್ಮ ಸಂವಿಧಾನ ಹೋದರೆ ನಾಡಿನ ಜನರ ಮಕ್ಕಳ ಭವಿಷ್ಯಕ್ಕೆ, ಅವರ ಬದುಕುವ-ದುಡಿಯುವ ಅವಕಾಶಗಳಿಗೆ ಕಂಟಕ ಬರುತ್ತದೆ ಎಂದು ಎಚ್ಚರಿಸಿದರು.

ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಜನಿಸುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ದೇವೇಗೌಡರು ಈಗ ಬಿಜೆಪಿ ಜತೆ ಸೇರಿಕೊಂಡು ಬಿಜೆಪಿ ಮತ್ತು ಮೋದಿಯನ್ನು ಹೊಗಳುತ್ತಿದ್ದಾರೆ. ಇವರನ್ನು ಹೇಗೆ ನಂಬುತ್ತೀರಿ ಎಂದು ಪ್ರಶ್ನಿಸಿದರು.

ಮೊನ್ನೆ ನಡೆದ ವಿಧಾನ‌ಪರಿಷತ್ ಚುನಾವಣೆ ನಾಳೆ ಬರಲಿರುವ ಲೋಕಸಭಾ ಚುನಾವಣೆಯ ದಿಕ್ಸೂಚಿ ಎಂದು ಹೆಚ್.ಡಿ.ಕುಮಾರಸ್ವಾಮಿಯವರು ಹೇಳಿದ್ದರು. ಆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ದೋಸ್ತಿಯನ್ನು ಸೋಲಿಸಿ ಕಾಂಗ್ರೆಸ್ ಪಕ್ಷದಿಂದ ಪುಟ್ಟಣ್ಣ ಜಯಭೇರಿ ಭಾರಿಸಿದ್ದಾರೆ. ಹೀಗಾಗಿ ಕುಮಾರಸ್ವಾಮಿ ಅವರ ಮಾತಿನಂತೆ ಲೋಕಸಭೆ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಸೋಲುತ್ತದೆ. ಕಾಂಗ್ರೆಸ್ ಗೆಲ್ಲುತ್ತದೆ ಎಂದು ಖಚಿತವಾಗಿ ನುಡಿದರು.

ಸಚಿವ ಕೆ.ಹೆಚ್.ಮುನಿಯಪ್ಪ ಅವರು ಹಿಡಿದ ಕೆಲಸ ಬಿಡುವವರಲ್ಲ. ದೇವನಹಳ್ಳಿ ವಿಧಾನಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವಾಗಿ ಮಾಡಲು ಪಣತೊಟ್ಟು ಕೆಲಸ ಮಾಡುತ್ತಿದ್ದಾರೆ. ಅವರು ದೇವನಹಳ್ಳಿ ಅಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ರೆಡಿ ಮಾಡಿಕೊಂಡು ಬಂದಿದ್ದಾರೆ. ಅದೆಲ್ಲಕ್ಕೂ ಹಣ ಬಿಡುಗಡೆ ಮಾಡಲಾಗುವುದು, ಅನುದಾನ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ನೇಕಾರರ ಬಹುವರ್ಷಗಳ ಬೇಡಿಕೆಗಳನ್ನು ಈಡೇರಿಸಿದ್ದು ಕಾಂಗ್ರೆಸ್ ಸರ್ಕಾರ. ಹೀಗಾಗಿ ಯಾರು ನಿಮ್ಮ ಬದುಕಿನ ಪರವಾಗಿ ಇದ್ದಾರೋ ಅವರನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಿ ಎಂದು ಕರೆ ನೀಡಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಸೇರಿ ಪಕ್ಷದ ಶಾಸಕರು ಮತ್ತು ಇಲಾಖೆಗಳ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

9 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

20 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

21 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

21 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

24 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

1 day ago