Categories: ಕೋಲಾರ

ಬಿಜೆಪಿ ಜಿಲ್ಲಾಧ್ಯಕ್ಷ ವರಿಷ್ಠರ ನೇಮಕ ತೀರ್ಮಾನಕ್ಕೆ ಬದ್ದವಾಗಿರಬೇಕು- ಮಾಜಿ ಸಂಸದ ಎಸ್ ಮುನಿಸ್ವಾಮಿ

ಕೋಲಾರ: ಬಿಜೆಪಿ ಪಕ್ಷದ ನೂತನ ಜಿಲ್ಲಾ ಅಧ್ಯಕ್ಷರನ್ನು ಪಕ್ಷದ ರಾಜ್ಯ ಮತ್ತು ಕೇಂದ್ರದ ವರಿಷ್ಠರು ನೇಮಕ ಮಾಡಿದ್ದು ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿರಬೇಕು ಎಲ್ಲೂ ಸಹ ಏಕಪಕ್ಷೀಯ ತೀರ್ಮಾನ ನಡೆದಿಲ್ಲ ಚುನಾವಣಾ ಪ್ರಕ್ರಿಯೆಗಳ ಮೂಲಕವೇ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಸಂಸದ ಎಸ್ ಮುನಿಸ್ವಾಮಿ ತಿಳಿಸಿದರು.

ನಗರದ ಜಿಲ್ಲಾ ಬಿಜೆಪಿ ಪಕ್ಷದ ಕಛೇರಿಯಲ್ಲಿ ನೂತನ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ ಅವರಿಂದ ಅಭಿನಂದನೆ ಸ್ವೀಕರಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಪಕ್ಷದ ಬೆಳವಣಿಗೆ ಪಕ್ಷಕ್ಕಾಗಿ ದುಡಿದಿರುವ ಮುಖಂಡರು ಹಾಗೂ ಕಾರ್ಯಕರ್ತರ ಮಾರ್ಗದರ್ಶನದಲ್ಲಿ ಅವರ ಸಲಹೆ ಸೂಚನೆಗಳನ್ನು ಪಡೆದು ಪಕ್ಷವನ್ನು ಬಲಪಡಿಸಬೇಕಾಗಿದೆ ವರಿಷ್ಠರು ಸಹ ಪಕ್ಷದಲ್ಲಿ ಹೇಗೆ ಕಾರ್ಯನಿರ್ವಹಿಸುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಿದ್ದು ಅವರಿಗೆ ಇದು ಅಧಿಕಾರ ಅನ್ನುವುದು ಬಿಟ್ಟು ಜವಾಬ್ದಾರಿ ರೀತಿಯಲ್ಲಿ ಕೆಲಸ ಮಾಡಬೇಕಾಗಿದೆ ಎಂದರು

ಬಿಜೆಪಿ ಪಕ್ಷದಲ್ಲಿ ಚುನಾವಣಾ ಪ್ರಕ್ರಿಯೆ ಪ್ರಕಾರವೇ ಬೂತ್ ಮಟ್ಟದಿಂದ ರಾಷ್ಟ್ರೀಯ ಮಟ್ಟದವರೆಗೂ ಅಧ್ಯಕ್ಷರ ಆಯ್ಕೆ ನಡೆಯಲಿದೆ ಕೋಲಾರ ಜಿಲ್ಲೆಯಲ್ಲಿ ಮೂವರು ಹೆಸರನ್ನು ವರಿಷ್ಠರಿಗೆ ಕಳುಹಿಸಲಾಯಿತು ಅದರಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗಿದೆ ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿ ಪಕ್ಷದಲ್ಲಿ ಕೆಲಸ ಮಾಡಬೇಕು ಸಣ್ಣಪುಟ್ಟ ವ್ಯತ್ಯಾಸಗಳು ಇದ್ದರೆ ಸರಿಪಡಿಸಿಕೊಂಡು ಹೋಗತ್ತೇವೆ ದೇವರು ಸಹ ಎಲ್ಲರಿಗೂ ಒಳ್ಳೆಯವರಾಗಿ ಇರಲು ಸಾಧ್ಯವಿಲ್ಲ ಅಸಮಾಧಾನ ವ್ಯಕ್ತಪಡಿಸಿದವರಿಗೂ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದರು.

ಚಿಕ್ಕಬಳ್ಳಾಪುರ ಸಂಸದ ಡಾ ಕೆ ಸುಧಾಕರ್ ಬಗ್ಗೆ ಮಾತನಾಡಿ ಅವರು ದೊಡ್ಡವರು ಸಚಿವರಾಗಿ ಸಂಸದರು ಆಗಿದ್ದಾರೆ ಯಾರು ಪೋನ್ ರಿಸಿವ್ ಮಾಡಲ್ಲ ಅಂತ ಜನತೆಗೆ ಗೊತ್ತಿದೆ ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಅವರ ತೀರ್ಮಾನದಂತೆ ಜಿಲ್ಲಾ ಅಧ್ಯಕ್ಷರ ಆಯ್ಕೆ ನಡೆದಿಲ್ಲ ವರಿಷ್ಠರು ಆಯ್ಕೆ ಮಾಡಿರೋದು ಅವರಿಗೆ ಬಿಜೆಪಿ ಪಕ್ಷದ ತತ್ವ ಸಿದ್ದಾಂತದ ಅನುಭವ ಕಡಿಮೆ ಇದೆ ರಾಜ್ಯ ಅಧ್ಯಕ್ಷರ ಹುದ್ದೆಗೆ ಗೌರವ ಕೊಡುವುದನ್ನು ಕಲಿಯಲಿ ಎಂದರು.

ಕುಂಭಮೇಳದ ಕಾಲ್ತುಳಿದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತಿಗೆ ಪ್ರತಿಕ್ರಿಯಿಸಿ ಅವರ ಕಾಂಗ್ರೆಸ್ ನವರಿಗೆ ಹಿಂದುತ್ವ ಮರೆತಿದ್ದಾರೆ ಹಿಂದೆ ಮಾಡಿದ ಹೋಮಗಳು ಪೂಜೆಗಳು ನೆನಪು ಇಲ್ಲವಾಗಿದೆ ಅವರಿಗೆ ಬರಿ ಮಸೀದಿಗಳ ಪೂಜೆಗೆ ಮಾತ್ರ ಸೀಮಿತವಾಗಿದ್ದು ಸುಮಾರು 140 ವರ್ಷಗಳಿಗೆ ಒಮ್ಮೆ ಬರುವ ಈ ಮೇಳದಲ್ಲಿ ಭವ್ಯ ವ್ಯವಸ್ಥೆ ಮಾಡಿದ್ದಾರೆ ಮೊಸರಲ್ಲಿ ಕಲ್ಲು ಹುಡುಕುವುದು ಕಾಂಗ್ರೆಸ್ ಕೆಲಸವಾಗಿದೆ ಭಕ್ತಾದಿಗಳು ಸಹ ಸಮಾಧಾನದಿಂದ ಹೋಗಲಿ ಎಲ್ಲರಿಗೂ ವ್ಯವಸ್ಥೆ ಮಾಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ನೂತನ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ, ಮುಖಂಡರಾದ ಸಾ.ಮಾ ಬಾಬು ಬಾಲಾಜಿ, ಅಪ್ಪಿ ನಾರಾಯಣಸ್ವಾಮಿ, ಮಹೇಶ್ ಮುಂತಾದವರು ಇದ್ದರು

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

12 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

16 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

16 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

21 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago