Categories: ಕೋಲಾರ

ಬಿಜೆಪಿ ಜಿಲ್ಲಾಧ್ಯಕ್ಷ ವರಿಷ್ಠರ ನೇಮಕ ತೀರ್ಮಾನಕ್ಕೆ ಬದ್ದವಾಗಿರಬೇಕು- ಮಾಜಿ ಸಂಸದ ಎಸ್ ಮುನಿಸ್ವಾಮಿ

ಕೋಲಾರ: ಬಿಜೆಪಿ ಪಕ್ಷದ ನೂತನ ಜಿಲ್ಲಾ ಅಧ್ಯಕ್ಷರನ್ನು ಪಕ್ಷದ ರಾಜ್ಯ ಮತ್ತು ಕೇಂದ್ರದ ವರಿಷ್ಠರು ನೇಮಕ ಮಾಡಿದ್ದು ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿರಬೇಕು ಎಲ್ಲೂ ಸಹ ಏಕಪಕ್ಷೀಯ ತೀರ್ಮಾನ ನಡೆದಿಲ್ಲ ಚುನಾವಣಾ ಪ್ರಕ್ರಿಯೆಗಳ ಮೂಲಕವೇ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಸಂಸದ ಎಸ್ ಮುನಿಸ್ವಾಮಿ ತಿಳಿಸಿದರು.

ನಗರದ ಜಿಲ್ಲಾ ಬಿಜೆಪಿ ಪಕ್ಷದ ಕಛೇರಿಯಲ್ಲಿ ನೂತನ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ ಅವರಿಂದ ಅಭಿನಂದನೆ ಸ್ವೀಕರಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಪಕ್ಷದ ಬೆಳವಣಿಗೆ ಪಕ್ಷಕ್ಕಾಗಿ ದುಡಿದಿರುವ ಮುಖಂಡರು ಹಾಗೂ ಕಾರ್ಯಕರ್ತರ ಮಾರ್ಗದರ್ಶನದಲ್ಲಿ ಅವರ ಸಲಹೆ ಸೂಚನೆಗಳನ್ನು ಪಡೆದು ಪಕ್ಷವನ್ನು ಬಲಪಡಿಸಬೇಕಾಗಿದೆ ವರಿಷ್ಠರು ಸಹ ಪಕ್ಷದಲ್ಲಿ ಹೇಗೆ ಕಾರ್ಯನಿರ್ವಹಿಸುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಿದ್ದು ಅವರಿಗೆ ಇದು ಅಧಿಕಾರ ಅನ್ನುವುದು ಬಿಟ್ಟು ಜವಾಬ್ದಾರಿ ರೀತಿಯಲ್ಲಿ ಕೆಲಸ ಮಾಡಬೇಕಾಗಿದೆ ಎಂದರು

ಬಿಜೆಪಿ ಪಕ್ಷದಲ್ಲಿ ಚುನಾವಣಾ ಪ್ರಕ್ರಿಯೆ ಪ್ರಕಾರವೇ ಬೂತ್ ಮಟ್ಟದಿಂದ ರಾಷ್ಟ್ರೀಯ ಮಟ್ಟದವರೆಗೂ ಅಧ್ಯಕ್ಷರ ಆಯ್ಕೆ ನಡೆಯಲಿದೆ ಕೋಲಾರ ಜಿಲ್ಲೆಯಲ್ಲಿ ಮೂವರು ಹೆಸರನ್ನು ವರಿಷ್ಠರಿಗೆ ಕಳುಹಿಸಲಾಯಿತು ಅದರಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗಿದೆ ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿ ಪಕ್ಷದಲ್ಲಿ ಕೆಲಸ ಮಾಡಬೇಕು ಸಣ್ಣಪುಟ್ಟ ವ್ಯತ್ಯಾಸಗಳು ಇದ್ದರೆ ಸರಿಪಡಿಸಿಕೊಂಡು ಹೋಗತ್ತೇವೆ ದೇವರು ಸಹ ಎಲ್ಲರಿಗೂ ಒಳ್ಳೆಯವರಾಗಿ ಇರಲು ಸಾಧ್ಯವಿಲ್ಲ ಅಸಮಾಧಾನ ವ್ಯಕ್ತಪಡಿಸಿದವರಿಗೂ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದರು.

ಚಿಕ್ಕಬಳ್ಳಾಪುರ ಸಂಸದ ಡಾ ಕೆ ಸುಧಾಕರ್ ಬಗ್ಗೆ ಮಾತನಾಡಿ ಅವರು ದೊಡ್ಡವರು ಸಚಿವರಾಗಿ ಸಂಸದರು ಆಗಿದ್ದಾರೆ ಯಾರು ಪೋನ್ ರಿಸಿವ್ ಮಾಡಲ್ಲ ಅಂತ ಜನತೆಗೆ ಗೊತ್ತಿದೆ ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಅವರ ತೀರ್ಮಾನದಂತೆ ಜಿಲ್ಲಾ ಅಧ್ಯಕ್ಷರ ಆಯ್ಕೆ ನಡೆದಿಲ್ಲ ವರಿಷ್ಠರು ಆಯ್ಕೆ ಮಾಡಿರೋದು ಅವರಿಗೆ ಬಿಜೆಪಿ ಪಕ್ಷದ ತತ್ವ ಸಿದ್ದಾಂತದ ಅನುಭವ ಕಡಿಮೆ ಇದೆ ರಾಜ್ಯ ಅಧ್ಯಕ್ಷರ ಹುದ್ದೆಗೆ ಗೌರವ ಕೊಡುವುದನ್ನು ಕಲಿಯಲಿ ಎಂದರು.

ಕುಂಭಮೇಳದ ಕಾಲ್ತುಳಿದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತಿಗೆ ಪ್ರತಿಕ್ರಿಯಿಸಿ ಅವರ ಕಾಂಗ್ರೆಸ್ ನವರಿಗೆ ಹಿಂದುತ್ವ ಮರೆತಿದ್ದಾರೆ ಹಿಂದೆ ಮಾಡಿದ ಹೋಮಗಳು ಪೂಜೆಗಳು ನೆನಪು ಇಲ್ಲವಾಗಿದೆ ಅವರಿಗೆ ಬರಿ ಮಸೀದಿಗಳ ಪೂಜೆಗೆ ಮಾತ್ರ ಸೀಮಿತವಾಗಿದ್ದು ಸುಮಾರು 140 ವರ್ಷಗಳಿಗೆ ಒಮ್ಮೆ ಬರುವ ಈ ಮೇಳದಲ್ಲಿ ಭವ್ಯ ವ್ಯವಸ್ಥೆ ಮಾಡಿದ್ದಾರೆ ಮೊಸರಲ್ಲಿ ಕಲ್ಲು ಹುಡುಕುವುದು ಕಾಂಗ್ರೆಸ್ ಕೆಲಸವಾಗಿದೆ ಭಕ್ತಾದಿಗಳು ಸಹ ಸಮಾಧಾನದಿಂದ ಹೋಗಲಿ ಎಲ್ಲರಿಗೂ ವ್ಯವಸ್ಥೆ ಮಾಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ನೂತನ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ, ಮುಖಂಡರಾದ ಸಾ.ಮಾ ಬಾಬು ಬಾಲಾಜಿ, ಅಪ್ಪಿ ನಾರಾಯಣಸ್ವಾಮಿ, ಮಹೇಶ್ ಮುಂತಾದವರು ಇದ್ದರು

Ramesh Babu

Journalist

Recent Posts

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

1 minute ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

3 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 days ago