Categories: ಕೋಲಾರ

ಬಿಜೆಪಿ ಜಿಲ್ಲಾಧ್ಯಕ್ಷ ವರಿಷ್ಠರ ನೇಮಕ ತೀರ್ಮಾನಕ್ಕೆ ಬದ್ದವಾಗಿರಬೇಕು- ಮಾಜಿ ಸಂಸದ ಎಸ್ ಮುನಿಸ್ವಾಮಿ

ಕೋಲಾರ: ಬಿಜೆಪಿ ಪಕ್ಷದ ನೂತನ ಜಿಲ್ಲಾ ಅಧ್ಯಕ್ಷರನ್ನು ಪಕ್ಷದ ರಾಜ್ಯ ಮತ್ತು ಕೇಂದ್ರದ ವರಿಷ್ಠರು ನೇಮಕ ಮಾಡಿದ್ದು ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿರಬೇಕು ಎಲ್ಲೂ ಸಹ ಏಕಪಕ್ಷೀಯ ತೀರ್ಮಾನ ನಡೆದಿಲ್ಲ ಚುನಾವಣಾ ಪ್ರಕ್ರಿಯೆಗಳ ಮೂಲಕವೇ ಆಯ್ಕೆ ಮಾಡಲಾಗಿದೆ ಎಂದು ಮಾಜಿ ಸಂಸದ ಎಸ್ ಮುನಿಸ್ವಾಮಿ ತಿಳಿಸಿದರು.

ನಗರದ ಜಿಲ್ಲಾ ಬಿಜೆಪಿ ಪಕ್ಷದ ಕಛೇರಿಯಲ್ಲಿ ನೂತನ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ ಅವರಿಂದ ಅಭಿನಂದನೆ ಸ್ವೀಕರಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಪಕ್ಷದ ಬೆಳವಣಿಗೆ ಪಕ್ಷಕ್ಕಾಗಿ ದುಡಿದಿರುವ ಮುಖಂಡರು ಹಾಗೂ ಕಾರ್ಯಕರ್ತರ ಮಾರ್ಗದರ್ಶನದಲ್ಲಿ ಅವರ ಸಲಹೆ ಸೂಚನೆಗಳನ್ನು ಪಡೆದು ಪಕ್ಷವನ್ನು ಬಲಪಡಿಸಬೇಕಾಗಿದೆ ವರಿಷ್ಠರು ಸಹ ಪಕ್ಷದಲ್ಲಿ ಹೇಗೆ ಕಾರ್ಯನಿರ್ವಹಿಸುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಆಯ್ಕೆ ಮಾಡಿದ್ದು ಅವರಿಗೆ ಇದು ಅಧಿಕಾರ ಅನ್ನುವುದು ಬಿಟ್ಟು ಜವಾಬ್ದಾರಿ ರೀತಿಯಲ್ಲಿ ಕೆಲಸ ಮಾಡಬೇಕಾಗಿದೆ ಎಂದರು

ಬಿಜೆಪಿ ಪಕ್ಷದಲ್ಲಿ ಚುನಾವಣಾ ಪ್ರಕ್ರಿಯೆ ಪ್ರಕಾರವೇ ಬೂತ್ ಮಟ್ಟದಿಂದ ರಾಷ್ಟ್ರೀಯ ಮಟ್ಟದವರೆಗೂ ಅಧ್ಯಕ್ಷರ ಆಯ್ಕೆ ನಡೆಯಲಿದೆ ಕೋಲಾರ ಜಿಲ್ಲೆಯಲ್ಲಿ ಮೂವರು ಹೆಸರನ್ನು ವರಿಷ್ಠರಿಗೆ ಕಳುಹಿಸಲಾಯಿತು ಅದರಲ್ಲಿ ಒಬ್ಬರನ್ನು ಆಯ್ಕೆ ಮಾಡಲಾಗಿದೆ ವರಿಷ್ಠರ ತೀರ್ಮಾನಕ್ಕೆ ಬದ್ದರಾಗಿ ಪಕ್ಷದಲ್ಲಿ ಕೆಲಸ ಮಾಡಬೇಕು ಸಣ್ಣಪುಟ್ಟ ವ್ಯತ್ಯಾಸಗಳು ಇದ್ದರೆ ಸರಿಪಡಿಸಿಕೊಂಡು ಹೋಗತ್ತೇವೆ ದೇವರು ಸಹ ಎಲ್ಲರಿಗೂ ಒಳ್ಳೆಯವರಾಗಿ ಇರಲು ಸಾಧ್ಯವಿಲ್ಲ ಅಸಮಾಧಾನ ವ್ಯಕ್ತಪಡಿಸಿದವರಿಗೂ ದೇವರು ಒಳ್ಳೆಯ ಬುದ್ದಿ ಕೊಡಲಿ ಎಂದರು.

ಚಿಕ್ಕಬಳ್ಳಾಪುರ ಸಂಸದ ಡಾ ಕೆ ಸುಧಾಕರ್ ಬಗ್ಗೆ ಮಾತನಾಡಿ ಅವರು ದೊಡ್ಡವರು ಸಚಿವರಾಗಿ ಸಂಸದರು ಆಗಿದ್ದಾರೆ ಯಾರು ಪೋನ್ ರಿಸಿವ್ ಮಾಡಲ್ಲ ಅಂತ ಜನತೆಗೆ ಗೊತ್ತಿದೆ ಬಿಜೆಪಿ ರಾಜ್ಯ ಅಧ್ಯಕ್ಷ ವಿಜಯೇಂದ್ರ ಅವರ ತೀರ್ಮಾನದಂತೆ ಜಿಲ್ಲಾ ಅಧ್ಯಕ್ಷರ ಆಯ್ಕೆ ನಡೆದಿಲ್ಲ ವರಿಷ್ಠರು ಆಯ್ಕೆ ಮಾಡಿರೋದು ಅವರಿಗೆ ಬಿಜೆಪಿ ಪಕ್ಷದ ತತ್ವ ಸಿದ್ದಾಂತದ ಅನುಭವ ಕಡಿಮೆ ಇದೆ ರಾಜ್ಯ ಅಧ್ಯಕ್ಷರ ಹುದ್ದೆಗೆ ಗೌರವ ಕೊಡುವುದನ್ನು ಕಲಿಯಲಿ ಎಂದರು.

ಕುಂಭಮೇಳದ ಕಾಲ್ತುಳಿದ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಾತಿಗೆ ಪ್ರತಿಕ್ರಿಯಿಸಿ ಅವರ ಕಾಂಗ್ರೆಸ್ ನವರಿಗೆ ಹಿಂದುತ್ವ ಮರೆತಿದ್ದಾರೆ ಹಿಂದೆ ಮಾಡಿದ ಹೋಮಗಳು ಪೂಜೆಗಳು ನೆನಪು ಇಲ್ಲವಾಗಿದೆ ಅವರಿಗೆ ಬರಿ ಮಸೀದಿಗಳ ಪೂಜೆಗೆ ಮಾತ್ರ ಸೀಮಿತವಾಗಿದ್ದು ಸುಮಾರು 140 ವರ್ಷಗಳಿಗೆ ಒಮ್ಮೆ ಬರುವ ಈ ಮೇಳದಲ್ಲಿ ಭವ್ಯ ವ್ಯವಸ್ಥೆ ಮಾಡಿದ್ದಾರೆ ಮೊಸರಲ್ಲಿ ಕಲ್ಲು ಹುಡುಕುವುದು ಕಾಂಗ್ರೆಸ್ ಕೆಲಸವಾಗಿದೆ ಭಕ್ತಾದಿಗಳು ಸಹ ಸಮಾಧಾನದಿಂದ ಹೋಗಲಿ ಎಲ್ಲರಿಗೂ ವ್ಯವಸ್ಥೆ ಮಾಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ನೂತನ ಜಿಲ್ಲಾ ಅಧ್ಯಕ್ಷ ಓಂಶಕ್ತಿ ಚಲಪತಿ, ಮುಖಂಡರಾದ ಸಾ.ಮಾ ಬಾಬು ಬಾಲಾಜಿ, ಅಪ್ಪಿ ನಾರಾಯಣಸ್ವಾಮಿ, ಮಹೇಶ್ ಮುಂತಾದವರು ಇದ್ದರು

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

11 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

13 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

13 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

13 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

15 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

19 hours ago