ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌
ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬರೆದಿರುವ “ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು” ಕೃತಿಯನ್ನು ಬಿಡುಗಡೆ ಮಾಡಿ, ಮಾತನಾಡಿದರು.

ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿ ತಮ್ಮ ಅನುಭವ ಮತ್ತು ಗ್ರಹಿಕೆಯನ್ನು ಹಾಗೂ ನೀರಿನ ಮಹತ್ವವನ್ನು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ. ನಾನು ಪುಸ್ತಕವನ್ನು ಪೂರ್ತಿ ಓದುತ್ತೇನೆ. ನದಿ ವಿವಾದಗಳ ಆಳ ಅಗಲವನ್ನು ಜನರಿಗೆ ತಿಳಿಸುವ ಕೆಲಸವನ್ನು ನೀರಿನ ಹೆಜ್ಜೆ ಪುಸ್ತಕ ಮಾಡಲಿದೆ. ರಾಜ್ಯದಲ್ಲಿ 2028 ರಲ್ಲೂ ಕಾಂಗ್ರೆಸ್ಸೇ ಅಧಿಕಾರಿಕ್ಕೆ ಬರುವುದು ಶತಸಿದ್ಧ ಎಂದಿದ್ದಾರೆ.

ಮಹದಾಯಿ, ಕೃಷ್ಣಾ ಮತ್ತು ಕಾವೇರಿ ಸೇರಿ ಅಂತಾರಾಜ್ಯ ಜಲ ವಿವಾದಗಳು ಇನ್ನೂ ಜೀವಂತವಾಗಿದ್ದು, ರಾಜ್ಯಕ್ಕೆ ಪೂರ್ತಿ ಅನುಕೂಲಕರವಾದ ನ್ಯಾಯಬದ್ಧ ತೀರ್ಮಾನಗಳು ಇನ್ನೂ ಆಗಬೇಕಿದೆ ಎಂದರು.

ಮೇಕೆದಾಟಿನಲ್ಲಿ 67 ಟಿಎಂಸಿ ನೀರನ್ನು ಶೇಖರಣೆ ಮಾಡಲಾಗುತ್ತದೆ. ಈ ಯೋಜನೆಯಲ್ಲಿ ನಮಗಿಂತ ಹೆಚ್ಚು ತಮಿಳುನಾಡಿಗೇ ಅನುಕೂಲವಿದೆ. ಆದರೂ ಅವರು ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ತಮಿಳುನಾಡು ಸರ್ಕಾರ ಕೇವಲ ರಾಜಕೀಯ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಇದನ್ನು ನಾವು ವಿರೋಧಿಸಿ ಪಾದಯಾತ್ರೆ ನಡೆಸಿದೆವು. ಪಾದಯಾತ್ರೆಗೆ ಹಲವು ಟೀಕೆಗಳು ಬಂದರೂ ನಾವು ಎದೆಗುಂದದೆ ಪಾದಯಾತ್ರೆ ಯಶಸ್ವಿಗೊಳಿಸಿದೆವು ಎಂದು ಹೇಳಿದರು.

ಮತ್ತೊಂದು ಕಡೆ ಕೃಷ್ಣಾ ನದಿ ನೀರಿನ ವಿವಾದದಲ್ಲೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಮಾಡಿಲ್ಲ. ಜೆಡಿಎಸ್ ಪಕ್ಷವಾಗಲೀ, ಬಿಜೆಪಿ ಪಕ್ಷವಾಗಲೀ, ಈ ಪಕ್ಷಗಳ ಸಂಸದರಾಗಲೀ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆಯಾಗಲೀ, ಆರ್ಥಿಕವಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಗೆಯುತ್ತಿರುವ ದ್ರೋಹದ ಬಗ್ಗೆಯೂ ಮಾತಾಡುವುದಿಲ್ಲ. ಇಷ್ಟು ಮಾತ್ರವಲ್ಲದೆ ಕಬ್ಬು ಬೆಳಗಾರರಿಗೆ ದ್ರೋಹ ಬಗೆದಿರುವುದೂ ಕೇಂದ್ರ ಸರ್ಕಾರ. ಈ ಬಗ್ಗೆಯೂ ಬಿಜೆಪಿ, ಜೆಡಿಎಸ್ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ತಿಳಿಸಿದರು.

ಮುಧೋಳದಲ್ಲಿ ಕಬ್ಬಿನ ಟ್ರಾಕ್ಟರ್ ಗಳಿಗೆ ಬೆಂಕಿ ಹಚ್ಚಿದ್ದು ತಾವಲ್ಲ ಎಂದು ರೈತರು, ರೈತ ಮುಖಂಡರು ಹೇಳಿದ್ದಾರೆ. ಕಬ್ಬು ಬೆಳೆಗಾರರ ಹೆಸರಲ್ಲಿ ಮುಧೋಳದಲ್ಲಿ ಬೆಂಕಿ ಹಚ್ಚಿದವರು ಯಾರು ಎನ್ನುವ ಬಗ್ಗೆ ತನಿಖೆ ನಡೆಸಲು ಸೂಚಿಸಲಾಗಿದೆ. ಈ ಮೂಲಕ ಸತ್ಯಾಂಶ ಹೊರಗೆಳೆಯಲಾಗುವುದು ಎಂದರು.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

1 hour ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

2 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

8 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

20 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

20 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

21 hours ago