ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌
ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬರೆದಿರುವ “ನೀರಿನ ಹೆಜ್ಜೆ: ವಿವಾದ-ಒಪ್ಪಂದ-ತೀರ್ಪು” ಕೃತಿಯನ್ನು ಬಿಡುಗಡೆ ಮಾಡಿ, ಮಾತನಾಡಿದರು.

ಶಿವಕುಮಾರ್ ಅವರು ಜಲಸಂಪನ್ಮೂಲ ಸಚಿವರಾಗಿ ತಮ್ಮ ಅನುಭವ ಮತ್ತು ಗ್ರಹಿಕೆಯನ್ನು ಹಾಗೂ ನೀರಿನ ಮಹತ್ವವನ್ನು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ. ನಾನು ಪುಸ್ತಕವನ್ನು ಪೂರ್ತಿ ಓದುತ್ತೇನೆ. ನದಿ ವಿವಾದಗಳ ಆಳ ಅಗಲವನ್ನು ಜನರಿಗೆ ತಿಳಿಸುವ ಕೆಲಸವನ್ನು ನೀರಿನ ಹೆಜ್ಜೆ ಪುಸ್ತಕ ಮಾಡಲಿದೆ. ರಾಜ್ಯದಲ್ಲಿ 2028 ರಲ್ಲೂ ಕಾಂಗ್ರೆಸ್ಸೇ ಅಧಿಕಾರಿಕ್ಕೆ ಬರುವುದು ಶತಸಿದ್ಧ ಎಂದಿದ್ದಾರೆ.

ಮಹದಾಯಿ, ಕೃಷ್ಣಾ ಮತ್ತು ಕಾವೇರಿ ಸೇರಿ ಅಂತಾರಾಜ್ಯ ಜಲ ವಿವಾದಗಳು ಇನ್ನೂ ಜೀವಂತವಾಗಿದ್ದು, ರಾಜ್ಯಕ್ಕೆ ಪೂರ್ತಿ ಅನುಕೂಲಕರವಾದ ನ್ಯಾಯಬದ್ಧ ತೀರ್ಮಾನಗಳು ಇನ್ನೂ ಆಗಬೇಕಿದೆ ಎಂದರು.

ಮೇಕೆದಾಟಿನಲ್ಲಿ 67 ಟಿಎಂಸಿ ನೀರನ್ನು ಶೇಖರಣೆ ಮಾಡಲಾಗುತ್ತದೆ. ಈ ಯೋಜನೆಯಲ್ಲಿ ನಮಗಿಂತ ಹೆಚ್ಚು ತಮಿಳುನಾಡಿಗೇ ಅನುಕೂಲವಿದೆ. ಆದರೂ ಅವರು ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ತಮಿಳುನಾಡು ಸರ್ಕಾರ ಕೇವಲ ರಾಜಕೀಯ ಕಾರಣಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಇದನ್ನು ನಾವು ವಿರೋಧಿಸಿ ಪಾದಯಾತ್ರೆ ನಡೆಸಿದೆವು. ಪಾದಯಾತ್ರೆಗೆ ಹಲವು ಟೀಕೆಗಳು ಬಂದರೂ ನಾವು ಎದೆಗುಂದದೆ ಪಾದಯಾತ್ರೆ ಯಶಸ್ವಿಗೊಳಿಸಿದೆವು ಎಂದು ಹೇಳಿದರು.

ಮತ್ತೊಂದು ಕಡೆ ಕೃಷ್ಣಾ ನದಿ ನೀರಿನ ವಿವಾದದಲ್ಲೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಮಾಡಿಲ್ಲ. ಜೆಡಿಎಸ್ ಪಕ್ಷವಾಗಲೀ, ಬಿಜೆಪಿ ಪಕ್ಷವಾಗಲೀ, ಈ ಪಕ್ಷಗಳ ಸಂಸದರಾಗಲೀ ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆಯಾಗಲೀ, ಆರ್ಥಿಕವಾಗಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಗೆಯುತ್ತಿರುವ ದ್ರೋಹದ ಬಗ್ಗೆಯೂ ಮಾತಾಡುವುದಿಲ್ಲ. ಇಷ್ಟು ಮಾತ್ರವಲ್ಲದೆ ಕಬ್ಬು ಬೆಳಗಾರರಿಗೆ ದ್ರೋಹ ಬಗೆದಿರುವುದೂ ಕೇಂದ್ರ ಸರ್ಕಾರ. ಈ ಬಗ್ಗೆಯೂ ಬಿಜೆಪಿ, ಜೆಡಿಎಸ್ ಸಂಸದರು ಬಾಯಿ ಬಿಡುತ್ತಿಲ್ಲ ಎಂದು ತಿಳಿಸಿದರು.

ಮುಧೋಳದಲ್ಲಿ ಕಬ್ಬಿನ ಟ್ರಾಕ್ಟರ್ ಗಳಿಗೆ ಬೆಂಕಿ ಹಚ್ಚಿದ್ದು ತಾವಲ್ಲ ಎಂದು ರೈತರು, ರೈತ ಮುಖಂಡರು ಹೇಳಿದ್ದಾರೆ. ಕಬ್ಬು ಬೆಳೆಗಾರರ ಹೆಸರಲ್ಲಿ ಮುಧೋಳದಲ್ಲಿ ಬೆಂಕಿ ಹಚ್ಚಿದವರು ಯಾರು ಎನ್ನುವ ಬಗ್ಗೆ ತನಿಖೆ ನಡೆಸಲು ಸೂಚಿಸಲಾಗಿದೆ. ಈ ಮೂಲಕ ಸತ್ಯಾಂಶ ಹೊರಗೆಳೆಯಲಾಗುವುದು ಎಂದರು.

Ramesh Babu

Journalist

Recent Posts

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

1 hour ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

4 hours ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

9 hours ago

ಮದ್ಯ ಖರೀದಿ, ಸೇವನೆಗೆ 21 ವರ್ಷ ಕಡ್ಡಾಯ; ಯುವಜನರ ರಕ್ಷಣೆಗಾಗಿ ಕಟ್ಟುನಿಟ್ಟಿನ ಮದ್ಯ ನಿಯಮ ಜಾರಿ

21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…

10 hours ago

ಡ್ಯೂಕ್ ಬೈಕ್–ಕಂಟೈನರ್ ಲಾರಿ ಅಪಘಾತ – ಯುವಕ ಸ್ಥಳದಲ್ಲೇ ಸಾವು

ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ…

10 hours ago

ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಯುವತಿ ಸ್ಥಳದಲ್ಲೇ ಸಾವು

ಹೊಸಕೋಟೆ: ನೂತನ ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ…

12 hours ago