ಆಪರೇಷನ್ ಕಮಲದ ಮೂಲಕ ತಾಲೂಕಿನ ಸಾಸಲು ಗ್ರಾಮ ಪಂಚಾಯಿತಿಯನ್ನ ತೆಕ್ಕೆಗೆ ತೆಗೆದುಕೊಂಡು ಅಧಿಕಾರ ಹಿಡಿಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ.
ಸಾಸಲು ಗ್ರಾಮ ಪಂಚಾಯ್ತಿಯಲ್ಲಿ ಕೇವಲ ಐವರು ಬಿಜೆಪಿ ಬೆಂಬಲಿತ ಸದಸ್ಯರಿದ್ದರೂ ಗ್ರಾಮ ಪಂಚಾಯ್ತಿ ಎರಡನೇ ಅವಧಿಗೆ ನಡೆದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರಾಗಿದ್ದ ಆರು ಸದಸ್ಯರನ್ನು ಆಪರೇಷನ್ ಕಮಲದ ಮೂಲಕ ಸೆಳೆದು ಅಧಿಕಾರ ಹಿಡಿದಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸುಶೀಲಮ್ಮ ಅವರು ಚುನಾವಣಾಧಿಕಾರಿಯಾಗಿ, ಪಿಡಿಒ ತಿರುಪತಿ ಅವರು ಸಹಾಯಕ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಘೊಷಣೆ ಬೆನ್ನಲ್ಲೇ ಬಿಜೆಪಿ ಬೆಂಬಲಿಗರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.
ಗ್ರಾಮ ಪಂಚಾಯ್ತಿಯಲ್ಲಿ ಒಟ್ಟು ಬಿಜೆಪಿ 5, ಕಾಂಗ್ರೆಸ್ 10, ಜೆಡಿಎಸ್ ಬೆಂಬಲಿತ ಒಬ್ಬರು ಸದಸ್ಯರಿದ್ದರು. ಚುನಾವಣಾ ಪ್ರಕ್ರಿಯೆಗೆ ಜೆಡಿಎಸ್ ಬೆಂಬಲಿತ ಒಬ್ಬರು, ಕಾಂಗ್ರೆಸ್ ಬೆಂಬಲಿತ ನಾಲ್ವರು ಗೈರು ಹಾಜರಾಗಿದ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…