Categories: ಕೋಲಾರ

ಬಿಜೆಪಿ ತೊಲಗಿಸಿ ದೇಶ ಉಳಿಸಲು ಸಿಪಿಐಎಂ ಪ್ರಚಾರಾಂದೋಲನ ಹಾಗೂ ಪ್ರತಿಭಟನಾ ಸಭೆ

ಕೋಲಾರ: ಕೇಂದ್ರದ ಬಿಜೆಪಿ ಸರಕಾರದ ಜನ ವಿರೋಧಿ ಹಾಗೂ ಕಾರ್ಪೊರೇಟ್ ಸಂಸ್ಥೆಗಳ ಪರವಾದ ನೀತಿಗಳ ವಿರುದ್ಧ ದೇಶದಲ್ಲಿ ಬಿಜೆಪಿಯನ್ನು ತೊಲಗಿಸಿ ದೇಶವನ್ನು ಉಳಿಸಲು ನಗರದ ಹಳೆ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿಯಿಂದ ಪ್ರಚಾರಾಂದೋಲನ ಹಾಗೂ ಪ್ರತಿಭಟನಾ ಸಭೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಭಾರತದ ಸಂವಿಧಾನದಂತೆ ದೇಶಾದ್ಯಂತ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಬೇಕಿತ್ತು . ಆದರೆ ಒಕ್ಕೂಟ ಸರಕಾರ ರಾಜ್ಯ ಸರಕಾರಗಳ ಮೇಲೆ ತನ್ನ ಅಧಿಕಾರ ದುರುಪಯೋಗ ಹಾಗೂ ಹಸ್ತಕ್ಷೇಪದ ಮೂಲಕ ಒಕ್ಕೂಟವಾದಿ ಸ್ವರೂಪಕ್ಕೆ ಭಂಗ ಉಂಟು ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದು ತಿಳಿಸಿದರು.

ಅಸಂಘಟಿತ ಕಾರ್ಮಿಕರ ರಕ್ಷಣೆ ಕಾರ್ಮಿಕರ ಭವಿಷ್ಯ ನಿಧಿ ಯೋಜನೆ ಬಲಗೊಳಿಸಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಬೇಕು. ಬಡ-ಮಧ್ಯಮ ರೈತರ ಸಾಲವನ್ನು ಮನ್ನಾ ಮಾಡಿ ರೈತರ ಬೆಳೆಗೆ ಬೆಂಬಲ ಬೆಲೆ ನಿಗದಿ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವು ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗುವ ಎಪಿಎಂಸಿ ಕಾಯಿದೆಗೆ ಸುಗ್ರೀವಾಜ್ಞೆ ಮೂಲಕ ಮಾಡಲಾದ ತಿದ್ದುಪಡಿ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಪಿ.ಆರ್ ಶ್ರೀನಿವಾಸ್ ಮಾತನಾಡಿ, ಕೇಂದ್ರ ಸರಕಾರದ ಆಡಳಿತದಲ್ಲಿ ಪೆಟ್ರೋಲ್‌, ಡಿಸೇಲ್‌, ಅಡುಗೆ ಅನಿಲ, ದಿನನಿತ್ಯದ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಇದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಕೇಂದ್ರ ಸರಕಾರ ನಿರ್ಲಕ್ಷಿಸಿ ಕೇವಲ ಜನರನ್ನು ಮೋಡಿ ಮಾಡುವ ಮಾತಿಗೆ ಮಾತ್ರ ಸೀಮಿತವಾಗಿದೆ. ಮೋದಿ ಸರಕಾರ ಕೇವಲ ಘೋಷಣೆ, ಪ್ರಚಾರ, ಕಾರ್ಪೋರೇಟ್ ನೀತಿಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ವೇಗವಾಗಿ ಸಾಗುತ್ತಿದೆ. ರೈತರು, ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಿಂದೆ ಬಿದ್ದಿದೆ. ಒಡೆದು ಆಳುವ ನೀತಿ ಅನುಸರಿಸಲಾಗುತ್ತಿದೆ. ಇದರಿಂದ ಜನರ ಗಮನ ಸೆಳೆಯಲು ಕೋಮು ದ್ವೇಷ ಹುಟ್ಟು ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಪಿ.ಆರ್ ಸೂರ್ಯನಾರಾಯಣ, ಟಿ.ಎಂ ವೆಂಕಟೇಶ್, ಎ.ಆರ್ ಬಾಬು, ಸದಸ್ಯರಾದ ಪಾತಕೋಟ ನವೀನ್ ಕುಮಾರ್, ಪಿ.ತಂಗರಾಜ್, ಅಶೋಕ್, ವಿಜಯಕೃಷ್ಣ, ಮುಂತಾದವರು ಇದ್ದರು

Ramesh Babu

Journalist

Recent Posts

ವಾರದೊಳಗೆ ಸಹಜ ಸ್ಥಿತಿಗೆ ಗ್ಯಾಸ್ ಸಿಲಿಂಡರ್ ಪೂರೈಕೆ- ಆಹಾರ ಸಚಿವ ಕೆ.ಎಚ್ ಮುನಿಯಪ್ಪ

ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…

34 minutes ago

“ಗೃಹಬಳಕೆ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನು ಕ್ರಮ”

ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…

38 minutes ago

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ: ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಏನಂದ್ರು ಗೊತ್ತಾ….?

ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…

2 hours ago

ಅಬಕಾರಿ ಡಿಸಿ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣ : ಅಕ್ರಮ ಆಸ್ತಿ ಕಂಡು ಬೆಚ್ಚಿದ ಅಧಿಕಾರಿಗಳು.!

ಉಡುಪಿ : ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ನಡೆದ ಲೋಕಾಯುಕ್ತ ದಾಳಿಯ ಭಾಗವಾಗಿ ಉಡುಪಿ ಜಿಲ್ಲಾ ಅಬಕಾರಿ ಡಿಸಿ ಶ್ರೀನಿವಾಸ್ ಟಿ.ಎಂ…

5 hours ago

ಮದುವೆ ವಿಷಯ ಮುಚ್ಚಿಟ್ಟು ಮೋಸ! ಲಿವ್-ಇನ್ ಗೆಳತಿಯನ್ನು ವೈಯರ್‌ನಿಂದ ಕೊಂದ ವಿವಾಹಿತ.!

ಬೆಂಗಳೂರು: ಸಿಲಿಕಾನ್ ಸಿಟಿಯ ವರ್ತೂರಿನಲ್ಲಿ ಭಯಾನಕ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಯ ಹೆಸರಿನಲ್ಲಿ ಮದುವೆಯ ಸತ್ಯವನ್ನು ಮುಚ್ಚಿಟ್ಟು, ಲಿವ್-ಇನ್…

5 hours ago

ಎ.ಬಿ.ಬಸವರಾಜುಗೆ ಸಿಕ್ತು ಪೋಸ್ಟಿಂಗ್: ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ನೇಮಕ

ಜವಳಿ ಅಭಿವೃದ್ಧಿ ಆಯುಕ್ತರು ಮತ್ತು ಕೈಮಗ್ಗ ಮತ್ತು ಜವಳಿ ನಿರ್ದೇಶಕರಾಗಿ ಎ.ಬಿ.ಬಸವರಾಜು ಅವರು ನೇಮಕಗೊಂಡಿದ್ದಾರೆ... ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎ.ಬಿ…

11 hours ago