Categories: ಕೋಲಾರ

ಬಿಜೆಪಿ ತೊಲಗಿಸಿ ದೇಶ ಉಳಿಸಲು ಸಿಪಿಐಎಂ ಪ್ರಚಾರಾಂದೋಲನ ಹಾಗೂ ಪ್ರತಿಭಟನಾ ಸಭೆ

ಕೋಲಾರ: ಕೇಂದ್ರದ ಬಿಜೆಪಿ ಸರಕಾರದ ಜನ ವಿರೋಧಿ ಹಾಗೂ ಕಾರ್ಪೊರೇಟ್ ಸಂಸ್ಥೆಗಳ ಪರವಾದ ನೀತಿಗಳ ವಿರುದ್ಧ ದೇಶದಲ್ಲಿ ಬಿಜೆಪಿಯನ್ನು ತೊಲಗಿಸಿ ದೇಶವನ್ನು ಉಳಿಸಲು ನಗರದ ಹಳೆ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿಯಿಂದ ಪ್ರಚಾರಾಂದೋಲನ ಹಾಗೂ ಪ್ರತಿಭಟನಾ ಸಭೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಭಾರತದ ಸಂವಿಧಾನದಂತೆ ದೇಶಾದ್ಯಂತ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಬೇಕಿತ್ತು . ಆದರೆ ಒಕ್ಕೂಟ ಸರಕಾರ ರಾಜ್ಯ ಸರಕಾರಗಳ ಮೇಲೆ ತನ್ನ ಅಧಿಕಾರ ದುರುಪಯೋಗ ಹಾಗೂ ಹಸ್ತಕ್ಷೇಪದ ಮೂಲಕ ಒಕ್ಕೂಟವಾದಿ ಸ್ವರೂಪಕ್ಕೆ ಭಂಗ ಉಂಟು ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದು ತಿಳಿಸಿದರು.

ಅಸಂಘಟಿತ ಕಾರ್ಮಿಕರ ರಕ್ಷಣೆ ಕಾರ್ಮಿಕರ ಭವಿಷ್ಯ ನಿಧಿ ಯೋಜನೆ ಬಲಗೊಳಿಸಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಬೇಕು. ಬಡ-ಮಧ್ಯಮ ರೈತರ ಸಾಲವನ್ನು ಮನ್ನಾ ಮಾಡಿ ರೈತರ ಬೆಳೆಗೆ ಬೆಂಬಲ ಬೆಲೆ ನಿಗದಿ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವು ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗುವ ಎಪಿಎಂಸಿ ಕಾಯಿದೆಗೆ ಸುಗ್ರೀವಾಜ್ಞೆ ಮೂಲಕ ಮಾಡಲಾದ ತಿದ್ದುಪಡಿ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಪಿ.ಆರ್ ಶ್ರೀನಿವಾಸ್ ಮಾತನಾಡಿ, ಕೇಂದ್ರ ಸರಕಾರದ ಆಡಳಿತದಲ್ಲಿ ಪೆಟ್ರೋಲ್‌, ಡಿಸೇಲ್‌, ಅಡುಗೆ ಅನಿಲ, ದಿನನಿತ್ಯದ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಇದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಕೇಂದ್ರ ಸರಕಾರ ನಿರ್ಲಕ್ಷಿಸಿ ಕೇವಲ ಜನರನ್ನು ಮೋಡಿ ಮಾಡುವ ಮಾತಿಗೆ ಮಾತ್ರ ಸೀಮಿತವಾಗಿದೆ. ಮೋದಿ ಸರಕಾರ ಕೇವಲ ಘೋಷಣೆ, ಪ್ರಚಾರ, ಕಾರ್ಪೋರೇಟ್ ನೀತಿಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ವೇಗವಾಗಿ ಸಾಗುತ್ತಿದೆ. ರೈತರು, ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಿಂದೆ ಬಿದ್ದಿದೆ. ಒಡೆದು ಆಳುವ ನೀತಿ ಅನುಸರಿಸಲಾಗುತ್ತಿದೆ. ಇದರಿಂದ ಜನರ ಗಮನ ಸೆಳೆಯಲು ಕೋಮು ದ್ವೇಷ ಹುಟ್ಟು ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಪಿ.ಆರ್ ಸೂರ್ಯನಾರಾಯಣ, ಟಿ.ಎಂ ವೆಂಕಟೇಶ್, ಎ.ಆರ್ ಬಾಬು, ಸದಸ್ಯರಾದ ಪಾತಕೋಟ ನವೀನ್ ಕುಮಾರ್, ಪಿ.ತಂಗರಾಜ್, ಅಶೋಕ್, ವಿಜಯಕೃಷ್ಣ, ಮುಂತಾದವರು ಇದ್ದರು

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

9 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

9 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

12 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

14 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

16 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

21 hours ago