Categories: ಕೋಲಾರ

ಬಿಜೆಪಿ ತೊಲಗಿಸಿ ದೇಶ ಉಳಿಸಲು ಸಿಪಿಐಎಂ ಪ್ರಚಾರಾಂದೋಲನ ಹಾಗೂ ಪ್ರತಿಭಟನಾ ಸಭೆ

ಕೋಲಾರ: ಕೇಂದ್ರದ ಬಿಜೆಪಿ ಸರಕಾರದ ಜನ ವಿರೋಧಿ ಹಾಗೂ ಕಾರ್ಪೊರೇಟ್ ಸಂಸ್ಥೆಗಳ ಪರವಾದ ನೀತಿಗಳ ವಿರುದ್ಧ ದೇಶದಲ್ಲಿ ಬಿಜೆಪಿಯನ್ನು ತೊಲಗಿಸಿ ದೇಶವನ್ನು ಉಳಿಸಲು ನಗರದ ಹಳೆ ಬಸ್ ನಿಲ್ದಾಣದಲ್ಲಿ ಶುಕ್ರವಾರ ಸಿಪಿಐಎಂ ಪಕ್ಷದ ಜಿಲ್ಲಾ ಸಮಿತಿಯಿಂದ ಪ್ರಚಾರಾಂದೋಲನ ಹಾಗೂ ಪ್ರತಿಭಟನಾ ಸಭೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಪ್ರತಿಭಟನೆಯನ್ನು ಉದ್ದೇಶಿಸಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ ಮಾತನಾಡಿ, ಭಾರತದ ಸಂವಿಧಾನದಂತೆ ದೇಶಾದ್ಯಂತ ಒಕ್ಕೂಟವಾದಿ ಸ್ವರೂಪವನ್ನು ಬಲಗೊಳಿಸಬೇಕಿತ್ತು . ಆದರೆ ಒಕ್ಕೂಟ ಸರಕಾರ ರಾಜ್ಯ ಸರಕಾರಗಳ ಮೇಲೆ ತನ್ನ ಅಧಿಕಾರ ದುರುಪಯೋಗ ಹಾಗೂ ಹಸ್ತಕ್ಷೇಪದ ಮೂಲಕ ಒಕ್ಕೂಟವಾದಿ ಸ್ವರೂಪಕ್ಕೆ ಭಂಗ ಉಂಟು ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದು ತಿಳಿಸಿದರು.

ಅಸಂಘಟಿತ ಕಾರ್ಮಿಕರ ರಕ್ಷಣೆ ಕಾರ್ಮಿಕರ ಭವಿಷ್ಯ ನಿಧಿ ಯೋಜನೆ ಬಲಗೊಳಿಸಿ, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಸಮರ್ಪಕವಾಗಿ ಅನುಷ್ಠಾನವಾಗಬೇಕು. ಬಡ-ಮಧ್ಯಮ ರೈತರ ಸಾಲವನ್ನು ಮನ್ನಾ ಮಾಡಿ ರೈತರ ಬೆಳೆಗೆ ಬೆಂಬಲ ಬೆಲೆ ನಿಗದಿ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟಬೇಕು ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವು ಕಾರ್ಪೋರೇಟ್ ಕಂಪನಿಗಳ ಲೂಟಿಗೆ ನೆರವಾಗುವ ಎಪಿಎಂಸಿ ಕಾಯಿದೆಗೆ ಸುಗ್ರೀವಾಜ್ಞೆ ಮೂಲಕ ಮಾಡಲಾದ ತಿದ್ದುಪಡಿ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಪಿ.ಆರ್ ಶ್ರೀನಿವಾಸ್ ಮಾತನಾಡಿ, ಕೇಂದ್ರ ಸರಕಾರದ ಆಡಳಿತದಲ್ಲಿ ಪೆಟ್ರೋಲ್‌, ಡಿಸೇಲ್‌, ಅಡುಗೆ ಅನಿಲ, ದಿನನಿತ್ಯದ ವಸ್ತುಗಳ ಬೆಲೆಗಳು ಗಗನಕ್ಕೇರಿವೆ. ಇದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಕೇಂದ್ರ ಸರಕಾರ ನಿರ್ಲಕ್ಷಿಸಿ ಕೇವಲ ಜನರನ್ನು ಮೋಡಿ ಮಾಡುವ ಮಾತಿಗೆ ಮಾತ್ರ ಸೀಮಿತವಾಗಿದೆ. ಮೋದಿ ಸರಕಾರ ಕೇವಲ ಘೋಷಣೆ, ಪ್ರಚಾರ, ಕಾರ್ಪೋರೇಟ್ ನೀತಿಗಳನ್ನು ಮುಂದುವರಿಸುವ ನಿಟ್ಟಿನಲ್ಲಿ ವೇಗವಾಗಿ ಸಾಗುತ್ತಿದೆ. ರೈತರು, ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಹಿಂದೆ ಬಿದ್ದಿದೆ. ಒಡೆದು ಆಳುವ ನೀತಿ ಅನುಸರಿಸಲಾಗುತ್ತಿದೆ. ಇದರಿಂದ ಜನರ ಗಮನ ಸೆಳೆಯಲು ಕೋಮು ದ್ವೇಷ ಹುಟ್ಟು ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು

ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಪಿ.ಆರ್ ಸೂರ್ಯನಾರಾಯಣ, ಟಿ.ಎಂ ವೆಂಕಟೇಶ್, ಎ.ಆರ್ ಬಾಬು, ಸದಸ್ಯರಾದ ಪಾತಕೋಟ ನವೀನ್ ಕುಮಾರ್, ಪಿ.ತಂಗರಾಜ್, ಅಶೋಕ್, ವಿಜಯಕೃಷ್ಣ, ಮುಂತಾದವರು ಇದ್ದರು

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

2 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

3 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

11 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago